ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು.
ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು.
ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ ,ಸಂಸ್ಥಾಪಕರಾದ ರಾಮನಗೌಡ ಸಿದರಡ್ಡಿ,ಕಾರ್ಯದರ್ಶಿ ಮಹಾಂತೇಶ ಸಿದರಡ್ಡಿ, ಮುಖ್ಯ ಅತಿಥಿಗಳಾಗಿದ್ದ ಸುಮಾ ಹೀರೆಮಠ , ಸಂಜಯ ಓಸ್ವಾಲ, ಸುಭಾಸ ಕಟ್ಟಿಮನಿ ,ಪತ್ರಕರ್ತ ಶಂಕರ ಹೆಬ್ಬಾಳ,ಮುಖಂಡ ಸಂಗನಗೌಡ ಪಾಟೀಲ, ದೈಹಿಕ ಶಿಕ್ಷಕರಾದ ಚನ್ನಬಸು ಬಳವಾಟ ಸೇರಿದಂತೆ ಹಲವರು ಇದ್ದರು.ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.







