ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ: ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಅತ್ಯುತ್ಸಾಹ, ಸಂಭ್ರಮ, ಸಡಗರದ ೭೮ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವರುಣರಾಜನು ಹೂಮಳೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತು. ವೈಭವದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಪ್ರಭಾರಿ ಮುಖ್ಯಗುರುಮಾತೆ ವಿ ಬಿ ಕುಂಬಾರ ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರರವರು ನೆರವೇರಿಸಿದರು.

Join Our Telegram: https://t.me/dcgkannada

ಶಾಲಾ ಮುಖ್ಯ ಗುರುಮಾತೆ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ, ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅನೇಕ ಮಹಾನ ಹೋರಾಟಗಾರರ ತ್ಯಾಗ, ಬಲಿದಾನ, ಅವರ ಕೊಡುಗೆ ಶ್ರೇಷ್ಠವಾದದ್ದು, ನಾವು ದೇಶಕ್ಕಾಗಿ ಯಾವುದೇ ಸೇವೆ ಮಾಡಲು ಸಿದ್ದರಾಗಿರಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಸಾಧನೆಗೈಯುತ್ತ ದೇಶದ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದರು. ಶಾಲೆಯು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುವಲ್ಲಿ ಎಸ್ ಡಿ ಎಂ ಸಿ ಹಾಗೂ ಗ್ರಾಮದ ನಾಗರಿಕರ ಸಹಕಾರ, ಸಹಾಯ ಬಹುಮುಖ್ಯ. ಶಾಲೆಗೆ ದಾನಿಗಳು ಕೊಡುಗೆಯನ್ನು ನೀಡುತ್ತಾ ಶಾಲೆಯ ಪ್ರಗತಿಗಾಗಿ ಸಹಕಾರ ನೀಡಿರುತ್ತಾರೆ ಎಂದು ಅವರಿಗೆ ಕೃತಜ್ಞತೆ, ಅಭಿನಂದನೆ ಸಲ್ಲಿಸಿದರು.

ಶಾಲೆಯ ವಿದ್ಯಾರ್ಥಿನಿಯರಿಂದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ಅನಿಸಿಕೆ ವ್ಯಕ್ತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಡುವುದರ ಮೂಲಕ ದಿನಾಚರಣೆಗೆ ಮೆರುಗು ತಂದರು. ನಲಿಕಲಿ ಮಕ್ಕಳು, ಉಳಿದ ತರಗತಿಯ ಮಕ್ಕಳ ಭಾಷಣ, ನೃತ್ಯವು ಕಾರ್ಯಕ್ರಮವನ್ನು ಸುಂದರಗೊಳಿಸಿತು.

ದೇ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರ, ಉಪಾಧ್ಯಕ್ಷರು ಶ್ರೀ ಸುಭಾಷಗೌಡ ರಾಯನಗೌಡ್ರು, ಶ್ರೀ ಮಾಬೂಸಾಬ ಮುಜಾವರ, ಶ್ರೀ ಶಿವಪ್ಪ ಕಟಾoಬ್ಳಿ, ಶ್ರೀ ವೀರಭದ್ರಯ್ಯ ಮಠ, ಶ್ರೀಮತಿನಂದಿತಾ ಗೌಡರ, ಶ್ರೀಮತಿ ದೇವಮ್ಮ ಭಜಂತ್ರಿ, ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಶ್ರೀ ಎಸ್ ವಿ ಬಲೂಳದ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಉರ್ದು ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಗಂಗಾ, ಅತಿಥಿ ಶಿಕ್ಷಕಿಯರು, ಉರ್ದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿ ಗೋಪಿ ಶಿಂಧೆ, ವಿದ್ಯಾರ್ಥಿನಿಯರು, ಪಾಲಕರು, ಪೋಷಕರು ನಂದವಾಡಗಿ ಗ್ರಾಮದ ಹಿರಿಯರು,ಯುವಕರು ಹಾಜರಿದ್ದರು.

ಇದನ್ನೂ ಓದಿ: Channapattana by election: ಇವರೆ ನೋಡಿ ಕಾಂಗ್ರೆಸ್ ಅಭ್ಯರ್ಥಿ…

ಕಾರ್ಯಕ್ರಮ ನಿರೂಪಣೆ ಬಸವರಾಜ ಬಲಕುಂದಿ, ವಿಶ್ವನಾಥ ತೋಟಿ ನಿರ್ವಹಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ ಸ್ವಾಗತಿಸಿದರು, ಕುಮಾರಿ ಅಶ್ವಿನಿ ಕಪ್ಪರದ ವಂದಿಸಿದರು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.