ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ: ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಅತ್ಯುತ್ಸಾಹ, ಸಂಭ್ರಮ, ಸಡಗರದ ೭೮ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವರುಣರಾಜನು ಹೂಮಳೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತು. ವೈಭವದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಪ್ರಭಾರಿ ಮುಖ್ಯಗುರುಮಾತೆ ವಿ ಬಿ ಕುಂಬಾರ ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರರವರು ನೆರವೇರಿಸಿದರು.

Join Our Telegram: https://t.me/dcgkannada

ಶಾಲಾ ಮುಖ್ಯ ಗುರುಮಾತೆ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ, ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅನೇಕ ಮಹಾನ ಹೋರಾಟಗಾರರ ತ್ಯಾಗ, ಬಲಿದಾನ, ಅವರ ಕೊಡುಗೆ ಶ್ರೇಷ್ಠವಾದದ್ದು, ನಾವು ದೇಶಕ್ಕಾಗಿ ಯಾವುದೇ ಸೇವೆ ಮಾಡಲು ಸಿದ್ದರಾಗಿರಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಸಾಧನೆಗೈಯುತ್ತ ದೇಶದ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದರು. ಶಾಲೆಯು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುವಲ್ಲಿ ಎಸ್ ಡಿ ಎಂ ಸಿ ಹಾಗೂ ಗ್ರಾಮದ ನಾಗರಿಕರ ಸಹಕಾರ, ಸಹಾಯ ಬಹುಮುಖ್ಯ. ಶಾಲೆಗೆ ದಾನಿಗಳು ಕೊಡುಗೆಯನ್ನು ನೀಡುತ್ತಾ ಶಾಲೆಯ ಪ್ರಗತಿಗಾಗಿ ಸಹಕಾರ ನೀಡಿರುತ್ತಾರೆ ಎಂದು ಅವರಿಗೆ ಕೃತಜ್ಞತೆ, ಅಭಿನಂದನೆ ಸಲ್ಲಿಸಿದರು.

ಶಾಲೆಯ ವಿದ್ಯಾರ್ಥಿನಿಯರಿಂದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ಅನಿಸಿಕೆ ವ್ಯಕ್ತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಡುವುದರ ಮೂಲಕ ದಿನಾಚರಣೆಗೆ ಮೆರುಗು ತಂದರು. ನಲಿಕಲಿ ಮಕ್ಕಳು, ಉಳಿದ ತರಗತಿಯ ಮಕ್ಕಳ ಭಾಷಣ, ನೃತ್ಯವು ಕಾರ್ಯಕ್ರಮವನ್ನು ಸುಂದರಗೊಳಿಸಿತು.

ದೇ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರ, ಉಪಾಧ್ಯಕ್ಷರು ಶ್ರೀ ಸುಭಾಷಗೌಡ ರಾಯನಗೌಡ್ರು, ಶ್ರೀ ಮಾಬೂಸಾಬ ಮುಜಾವರ, ಶ್ರೀ ಶಿವಪ್ಪ ಕಟಾoಬ್ಳಿ, ಶ್ರೀ ವೀರಭದ್ರಯ್ಯ ಮಠ, ಶ್ರೀಮತಿನಂದಿತಾ ಗೌಡರ, ಶ್ರೀಮತಿ ದೇವಮ್ಮ ಭಜಂತ್ರಿ, ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಶ್ರೀ ಎಸ್ ವಿ ಬಲೂಳದ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಉರ್ದು ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಗಂಗಾ, ಅತಿಥಿ ಶಿಕ್ಷಕಿಯರು, ಉರ್ದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿ ಗೋಪಿ ಶಿಂಧೆ, ವಿದ್ಯಾರ್ಥಿನಿಯರು, ಪಾಲಕರು, ಪೋಷಕರು ನಂದವಾಡಗಿ ಗ್ರಾಮದ ಹಿರಿಯರು,ಯುವಕರು ಹಾಜರಿದ್ದರು.

ಇದನ್ನೂ ಓದಿ: Channapattana by election: ಇವರೆ ನೋಡಿ ಕಾಂಗ್ರೆಸ್ ಅಭ್ಯರ್ಥಿ…

ಕಾರ್ಯಕ್ರಮ ನಿರೂಪಣೆ ಬಸವರಾಜ ಬಲಕುಂದಿ, ವಿಶ್ವನಾಥ ತೋಟಿ ನಿರ್ವಹಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ ಸ್ವಾಗತಿಸಿದರು, ಕುಮಾರಿ ಅಶ್ವಿನಿ ಕಪ್ಪರದ ವಂದಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ