ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ: ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಅತ್ಯುತ್ಸಾಹ, ಸಂಭ್ರಮ, ಸಡಗರದ ೭೮ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವರುಣರಾಜನು ಹೂಮಳೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತು. ವೈಭವದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಪ್ರಭಾರಿ ಮುಖ್ಯಗುರುಮಾತೆ ವಿ ಬಿ ಕುಂಬಾರ ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರರವರು ನೆರವೇರಿಸಿದರು.

Join Our Telegram: https://t.me/dcgkannada

ಶಾಲಾ ಮುಖ್ಯ ಗುರುಮಾತೆ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ, ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅನೇಕ ಮಹಾನ ಹೋರಾಟಗಾರರ ತ್ಯಾಗ, ಬಲಿದಾನ, ಅವರ ಕೊಡುಗೆ ಶ್ರೇಷ್ಠವಾದದ್ದು, ನಾವು ದೇಶಕ್ಕಾಗಿ ಯಾವುದೇ ಸೇವೆ ಮಾಡಲು ಸಿದ್ದರಾಗಿರಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಸಾಧನೆಗೈಯುತ್ತ ದೇಶದ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದರು. ಶಾಲೆಯು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುವಲ್ಲಿ ಎಸ್ ಡಿ ಎಂ ಸಿ ಹಾಗೂ ಗ್ರಾಮದ ನಾಗರಿಕರ ಸಹಕಾರ, ಸಹಾಯ ಬಹುಮುಖ್ಯ. ಶಾಲೆಗೆ ದಾನಿಗಳು ಕೊಡುಗೆಯನ್ನು ನೀಡುತ್ತಾ ಶಾಲೆಯ ಪ್ರಗತಿಗಾಗಿ ಸಹಕಾರ ನೀಡಿರುತ್ತಾರೆ ಎಂದು ಅವರಿಗೆ ಕೃತಜ್ಞತೆ, ಅಭಿನಂದನೆ ಸಲ್ಲಿಸಿದರು.

ಶಾಲೆಯ ವಿದ್ಯಾರ್ಥಿನಿಯರಿಂದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ಅನಿಸಿಕೆ ವ್ಯಕ್ತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಡುವುದರ ಮೂಲಕ ದಿನಾಚರಣೆಗೆ ಮೆರುಗು ತಂದರು. ನಲಿಕಲಿ ಮಕ್ಕಳು, ಉಳಿದ ತರಗತಿಯ ಮಕ್ಕಳ ಭಾಷಣ, ನೃತ್ಯವು ಕಾರ್ಯಕ್ರಮವನ್ನು ಸುಂದರಗೊಳಿಸಿತು.

ದೇ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರ, ಉಪಾಧ್ಯಕ್ಷರು ಶ್ರೀ ಸುಭಾಷಗೌಡ ರಾಯನಗೌಡ್ರು, ಶ್ರೀ ಮಾಬೂಸಾಬ ಮುಜಾವರ, ಶ್ರೀ ಶಿವಪ್ಪ ಕಟಾoಬ್ಳಿ, ಶ್ರೀ ವೀರಭದ್ರಯ್ಯ ಮಠ, ಶ್ರೀಮತಿನಂದಿತಾ ಗೌಡರ, ಶ್ರೀಮತಿ ದೇವಮ್ಮ ಭಜಂತ್ರಿ, ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಶ್ರೀ ಎಸ್ ವಿ ಬಲೂಳದ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಉರ್ದು ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಗಂಗಾ, ಅತಿಥಿ ಶಿಕ್ಷಕಿಯರು, ಉರ್ದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿ ಗೋಪಿ ಶಿಂಧೆ, ವಿದ್ಯಾರ್ಥಿನಿಯರು, ಪಾಲಕರು, ಪೋಷಕರು ನಂದವಾಡಗಿ ಗ್ರಾಮದ ಹಿರಿಯರು,ಯುವಕರು ಹಾಜರಿದ್ದರು.

ಇದನ್ನೂ ಓದಿ: Channapattana by election: ಇವರೆ ನೋಡಿ ಕಾಂಗ್ರೆಸ್ ಅಭ್ಯರ್ಥಿ…

ಕಾರ್ಯಕ್ರಮ ನಿರೂಪಣೆ ಬಸವರಾಜ ಬಲಕುಂದಿ, ವಿಶ್ವನಾಥ ತೋಟಿ ನಿರ್ವಹಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ ಸ್ವಾಗತಿಸಿದರು, ಕುಮಾರಿ ಅಶ್ವಿನಿ ಕಪ್ಪರದ ವಂದಿಸಿದರು.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ