ಸರಣಿ ಸೋಲು ತಪ್ಪಿಸಿಕೊಳ್ಳಲು ಭಾರತ ಏನು ಮಾಡಬೇಕು?

ಸರಣಿ ಸೋಲು ತಪ್ಪಿಸಿಕೊಳ್ಳಲು ಭಾರತ ಏನು ಮಾಡಬೇಕು?

ಕೊಲೊಂಬೊ: ಶ್ರೀಲಂಕಾ ವಿರುದ್ಧ 27 ವರ್ಷದಲ್ಲಿ ಮೊದಲ ಬಾರಿಗೆ ಏಕದಿನ ಸರಣಿ ಸೋಲುವ ಭೀತಿಗೆ ಭಾರತ ತಂಡ ಸಿಲುಕಿದ್ದು, ಬುಧವಾರ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯಲಿದೆ.

ಕೋಚ್ ಆಗಿ ನೇಮಕಗೊಂಡ ಬಳಿಕ ಗೌತಮ್ ಗಂಭೀರ್ ಮೊದಲ ಏಕದಿನ ಸರಣಿ ಇದು. 2025ರ ಚಾಂಪಿಯನ್ ಟ್ರೋಫಿಗೆ ಆಟಗಾರರನ್ನು ಗುರುತಿಸಲು ಎದುರು ನೋಡುತ್ತಿರುವ ಅವರಿಗೆ ಇದು ಸಹಜವಾಗಿಯೇ ಉತ್ತಮ ಆರಂಭ ಎನಿಸಿಲ್ಲ. ಹೀಗಾಗಿ, 3ನೇ ಪಂದ್ಯದಲ್ಲಿ ತಂಡದಿಂದ ಸುಧಾರಿತ ಪ್ರದರ್ಶನವನ್ನು ಗಂಭೀರ್ ನಿರೀಕ್ಷೆ ಮಾಡುತ್ತಿದ್ದಾರೆ.

ಭಾರತ ಕೊನೆಯ ಬಾರಿಗೆ ಲಂಕಾ ವಿರುದ್ಧ ಏಕದಿನ ಸರಣಿ ಸೋತಿದ್ದು 1997ರಲ್ಲಿ. ಅರ್ಜುನ ರಣತುಂಗಾ ನೇತೃತ್ವದ ಲಂಕಾ ತಂಡ ಭಾರತವನ್ನು 0-3ರಲ್ಲಿ ಮಣಿಸಿತ್ತು. ಆ ಬಳಿಕ ಉಭಯ ತಂಡಗಳ ನಡುವೆ ಎರಡೂ ದೇಶಗಳಲ್ಲಿ ಒಟ್ಟು 13 ಏಕದಿನ ಸರಣೆಗಳು ನಡೆದಿದ್ದು, ಭಾರತ ಸೋತೇ ಇಲ್ಲ.

ಈ ಸರಣಿಯ ಮೊದಲ ಪಂದ್ಯ ಟ್ರೈ ಆದ ಬಳಿಕ, 2ನೇ ಪಂದ್ಯದಲ್ಲಿ ಭಾರತ 32 ರನ್‌ ಗಳಿಂದ ಸೋತಿತ್ತು. ಸರಣಿ ಸೋಲು ತಪ್ಪಿಸಲು ಈ ಪಂದ್ಯ ಗೆದ್ದು, ಸರಣಿ ಡ್ರಾ ಮಾಡಿಕೊಳ್ಳಲು ಒತ್ತಡದಲ್ಲಿ ರೋಹಿತ್ ಪಡೆ ಇದೆ. ಇದಕ್ಕಾಗಿ, ಭಾರತೀಯ ಬ್ಯಾಟರ್‌ಗಳ ಮೇಲೆ ಭಾರಿ ಒತ್ತಡ ಇದೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ