India's effective response to Pahalgam attack: MLA Nad Gowda

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಸಿರಿವಂತ ದೇಶವಾಗಿದೆ.ನಮಗೆ ಕಾನೂನು ಚೌಕಟ್ಟಿನಲ್ಲಿ ಸ್ವಾತಂತ್ರ್ಯವಿದೆ. ವಾಕ್ ಸ್ವಾತಂತ್ರ್ಯ ಎಂದರೆ ಯಾರನ್ನೂ ಬೇಕಾದರೂ ಟೀಕೆ ಮಾಡುವುದಲ್ಲ. ಯೂಟ್ಯೂಬ್‌ಗಳನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ. ಸಾಮಾಜಿಕ ಜಾಲತಾಣಗಳನ್ನು ಗೆಳೆಯರ ಜೊತೆಗೆ ಅಧ್ಯಯನಕ್ಕೆ , ಸಾಂಸ್ಕೃತಿಕ ಚಟುವಟಿಕೆಗೆ ಬಳಸಿಕೊಳ್ಳಬೇಕೆ ಹೊರತು ಸಮಾಜವನ್ನು ಒಡೆಯುವುದಕ್ಕೆ, ಮತ್ತೊಬ್ಬರನ್ನು ಹೀಯಾಳಿಸುವುದಕ್ಕೆ ಬಳಸಬಾರದ ಎಂದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಕೀರ್ತಿ ಚಾಲಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಮುಖಂಡ ಎಂ.ಬಿ.ನಾವದಗಿ, ತಾಪಂ ಇಒ ನಿಂಗಪ್ಪ ಮಸಳಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸಿಪಿಐ ಮೊಹ್ಮದ ಫಸಿವುದ್ದೀನ, ಬಿಇಒ ಬಿ.ಎಸ್.ಸಾವಳಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ಪ್ರಭು ಕಡಿ ಪುರಸಭೆ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪಥ ಸಂಚಲನದಲ್ಲಿ ಚಿನ್ಮಯ ಜೆಸಿ ಶಾಲೆ ಪ್ರಥಮ, ಅಂಜುಮನ್ ಪ್ರೌಢಶಾಲೆ ದ್ವಿತೀಯ, ಅಭ್ಯುದಯ ಇಂಟರನ್ಯಾಶನಲ್ ಶಾಲೆ ತೃತೀಯ ಸ್ಥಾನ ಪಡೆದುಕೊಂಡಿತು.
ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮದಲ್ಲಿ ಕೆಬಿಎಂಪಿಎಸ್ ಶಾಲೆ ಪ್ರಥಮ, ಎಂ.ಜಿ.ಎಂ.ಕೆ ಎರಡನೇ ಸ್ಥಾನ ಹಾಗೂ ವಿದ್ಯಾಚೇತನ ಶಾಲೆ ಮೂರನೇ ಸ್ಥಾನ ಪಡೆದುಕೊಂಡಿತು. ಆಪರೇಷನ್ ಸಿಂಧೂರ ಪ್ರದರ್ಶನ ನೀಡಿದ ಎಂ.ಜಿ.ಎಂ.ಕೆ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಜನಮನ್ನಣೆ ದೊರೆಯಿತು.

ಪ್ರಶಸ್ತಿ ಸ್ವೀಕರಿಸಲು ನಿರಾಕರಣೆ:
ವಿದ್ಯಾಚೇತನ ಶಾಲೆಯ ಮುಖ್ಯಗುರುಗಳು ತಮ್ಮ ಶಾಲೆಗೆ ಬಂದಿದ್ದ ಮೂರನೇ ಸ್ಥಾನದ ಪ್ರಶಸ್ತಿ ಸ್ವೀಕರಿಸದೇ ವೇದಿಕೆಯಲ್ಲಿದ್ದ ಶಾಸಕರ ಮುಂದೆ ನಾವು ಪ್ರಶಸ್ತಿ ಸ್ವೀಕರಿಸುವುದಿಲ್ಲ. ರಿಮಿಕ್ಸ್ ಹಾಡುಗಳಿಗೆ ಅವಕಾಶ ಇಲ್ಲ ಎಂದು ಮೊದಲು ಹೇಳಿದವರು ಈಗ ರಿಮಿಕ್ಸ್ ಹಾಡುಗಳಿಗೆ ಅವಕಾಶ ಕೊಟ್ಟಿದ್ದೂ ಅಲ್ಲದೇ ಬಹುಮಾನಕ್ಕೆ ಆದ್ಯತೆ ನೀಡಿದ್ದನ್ನು ಖಂಡಿಸುವುದಾಗಿ ಹೇಳಿ ಪ್ರಶಸ್ತಿ ಸ್ವೀಕರಿಸದೇ ವಾಪಸ್ ತೆರಳಿದ ಘಟನೆ ನಡೆಯಿತು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್