India's effective response to Pahalgam attack: MLA Nad Gowda

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಸಿರಿವಂತ ದೇಶವಾಗಿದೆ.ನಮಗೆ ಕಾನೂನು ಚೌಕಟ್ಟಿನಲ್ಲಿ ಸ್ವಾತಂತ್ರ್ಯವಿದೆ. ವಾಕ್ ಸ್ವಾತಂತ್ರ್ಯ ಎಂದರೆ ಯಾರನ್ನೂ ಬೇಕಾದರೂ ಟೀಕೆ ಮಾಡುವುದಲ್ಲ. ಯೂಟ್ಯೂಬ್‌ಗಳನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ. ಸಾಮಾಜಿಕ ಜಾಲತಾಣಗಳನ್ನು ಗೆಳೆಯರ ಜೊತೆಗೆ ಅಧ್ಯಯನಕ್ಕೆ , ಸಾಂಸ್ಕೃತಿಕ ಚಟುವಟಿಕೆಗೆ ಬಳಸಿಕೊಳ್ಳಬೇಕೆ ಹೊರತು ಸಮಾಜವನ್ನು ಒಡೆಯುವುದಕ್ಕೆ, ಮತ್ತೊಬ್ಬರನ್ನು ಹೀಯಾಳಿಸುವುದಕ್ಕೆ ಬಳಸಬಾರದ ಎಂದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಕೀರ್ತಿ ಚಾಲಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಮುಖಂಡ ಎಂ.ಬಿ.ನಾವದಗಿ, ತಾಪಂ ಇಒ ನಿಂಗಪ್ಪ ಮಸಳಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸಿಪಿಐ ಮೊಹ್ಮದ ಫಸಿವುದ್ದೀನ, ಬಿಇಒ ಬಿ.ಎಸ್.ಸಾವಳಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ಪ್ರಭು ಕಡಿ ಪುರಸಭೆ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪಥ ಸಂಚಲನದಲ್ಲಿ ಚಿನ್ಮಯ ಜೆಸಿ ಶಾಲೆ ಪ್ರಥಮ, ಅಂಜುಮನ್ ಪ್ರೌಢಶಾಲೆ ದ್ವಿತೀಯ, ಅಭ್ಯುದಯ ಇಂಟರನ್ಯಾಶನಲ್ ಶಾಲೆ ತೃತೀಯ ಸ್ಥಾನ ಪಡೆದುಕೊಂಡಿತು.
ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮದಲ್ಲಿ ಕೆಬಿಎಂಪಿಎಸ್ ಶಾಲೆ ಪ್ರಥಮ, ಎಂ.ಜಿ.ಎಂ.ಕೆ ಎರಡನೇ ಸ್ಥಾನ ಹಾಗೂ ವಿದ್ಯಾಚೇತನ ಶಾಲೆ ಮೂರನೇ ಸ್ಥಾನ ಪಡೆದುಕೊಂಡಿತು. ಆಪರೇಷನ್ ಸಿಂಧೂರ ಪ್ರದರ್ಶನ ನೀಡಿದ ಎಂ.ಜಿ.ಎಂ.ಕೆ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಜನಮನ್ನಣೆ ದೊರೆಯಿತು.

ಪ್ರಶಸ್ತಿ ಸ್ವೀಕರಿಸಲು ನಿರಾಕರಣೆ:
ವಿದ್ಯಾಚೇತನ ಶಾಲೆಯ ಮುಖ್ಯಗುರುಗಳು ತಮ್ಮ ಶಾಲೆಗೆ ಬಂದಿದ್ದ ಮೂರನೇ ಸ್ಥಾನದ ಪ್ರಶಸ್ತಿ ಸ್ವೀಕರಿಸದೇ ವೇದಿಕೆಯಲ್ಲಿದ್ದ ಶಾಸಕರ ಮುಂದೆ ನಾವು ಪ್ರಶಸ್ತಿ ಸ್ವೀಕರಿಸುವುದಿಲ್ಲ. ರಿಮಿಕ್ಸ್ ಹಾಡುಗಳಿಗೆ ಅವಕಾಶ ಇಲ್ಲ ಎಂದು ಮೊದಲು ಹೇಳಿದವರು ಈಗ ರಿಮಿಕ್ಸ್ ಹಾಡುಗಳಿಗೆ ಅವಕಾಶ ಕೊಟ್ಟಿದ್ದೂ ಅಲ್ಲದೇ ಬಹುಮಾನಕ್ಕೆ ಆದ್ಯತೆ ನೀಡಿದ್ದನ್ನು ಖಂಡಿಸುವುದಾಗಿ ಹೇಳಿ ಪ್ರಶಸ್ತಿ ಸ್ವೀಕರಿಸದೇ ವಾಪಸ್ ತೆರಳಿದ ಘಟನೆ ನಡೆಯಿತು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ