India's effective response to Pahalgam attack: MLA Nad Gowda

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಸಿರಿವಂತ ದೇಶವಾಗಿದೆ.ನಮಗೆ ಕಾನೂನು ಚೌಕಟ್ಟಿನಲ್ಲಿ ಸ್ವಾತಂತ್ರ್ಯವಿದೆ. ವಾಕ್ ಸ್ವಾತಂತ್ರ್ಯ ಎಂದರೆ ಯಾರನ್ನೂ ಬೇಕಾದರೂ ಟೀಕೆ ಮಾಡುವುದಲ್ಲ. ಯೂಟ್ಯೂಬ್‌ಗಳನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ. ಸಾಮಾಜಿಕ ಜಾಲತಾಣಗಳನ್ನು ಗೆಳೆಯರ ಜೊತೆಗೆ ಅಧ್ಯಯನಕ್ಕೆ , ಸಾಂಸ್ಕೃತಿಕ ಚಟುವಟಿಕೆಗೆ ಬಳಸಿಕೊಳ್ಳಬೇಕೆ ಹೊರತು ಸಮಾಜವನ್ನು ಒಡೆಯುವುದಕ್ಕೆ, ಮತ್ತೊಬ್ಬರನ್ನು ಹೀಯಾಳಿಸುವುದಕ್ಕೆ ಬಳಸಬಾರದ ಎಂದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಕೀರ್ತಿ ಚಾಲಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಮುಖಂಡ ಎಂ.ಬಿ.ನಾವದಗಿ, ತಾಪಂ ಇಒ ನಿಂಗಪ್ಪ ಮಸಳಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸಿಪಿಐ ಮೊಹ್ಮದ ಫಸಿವುದ್ದೀನ, ಬಿಇಒ ಬಿ.ಎಸ್.ಸಾವಳಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ಪ್ರಭು ಕಡಿ ಪುರಸಭೆ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪಥ ಸಂಚಲನದಲ್ಲಿ ಚಿನ್ಮಯ ಜೆಸಿ ಶಾಲೆ ಪ್ರಥಮ, ಅಂಜುಮನ್ ಪ್ರೌಢಶಾಲೆ ದ್ವಿತೀಯ, ಅಭ್ಯುದಯ ಇಂಟರನ್ಯಾಶನಲ್ ಶಾಲೆ ತೃತೀಯ ಸ್ಥಾನ ಪಡೆದುಕೊಂಡಿತು.
ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮದಲ್ಲಿ ಕೆಬಿಎಂಪಿಎಸ್ ಶಾಲೆ ಪ್ರಥಮ, ಎಂ.ಜಿ.ಎಂ.ಕೆ ಎರಡನೇ ಸ್ಥಾನ ಹಾಗೂ ವಿದ್ಯಾಚೇತನ ಶಾಲೆ ಮೂರನೇ ಸ್ಥಾನ ಪಡೆದುಕೊಂಡಿತು. ಆಪರೇಷನ್ ಸಿಂಧೂರ ಪ್ರದರ್ಶನ ನೀಡಿದ ಎಂ.ಜಿ.ಎಂ.ಕೆ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಜನಮನ್ನಣೆ ದೊರೆಯಿತು.

ಪ್ರಶಸ್ತಿ ಸ್ವೀಕರಿಸಲು ನಿರಾಕರಣೆ:
ವಿದ್ಯಾಚೇತನ ಶಾಲೆಯ ಮುಖ್ಯಗುರುಗಳು ತಮ್ಮ ಶಾಲೆಗೆ ಬಂದಿದ್ದ ಮೂರನೇ ಸ್ಥಾನದ ಪ್ರಶಸ್ತಿ ಸ್ವೀಕರಿಸದೇ ವೇದಿಕೆಯಲ್ಲಿದ್ದ ಶಾಸಕರ ಮುಂದೆ ನಾವು ಪ್ರಶಸ್ತಿ ಸ್ವೀಕರಿಸುವುದಿಲ್ಲ. ರಿಮಿಕ್ಸ್ ಹಾಡುಗಳಿಗೆ ಅವಕಾಶ ಇಲ್ಲ ಎಂದು ಮೊದಲು ಹೇಳಿದವರು ಈಗ ರಿಮಿಕ್ಸ್ ಹಾಡುಗಳಿಗೆ ಅವಕಾಶ ಕೊಟ್ಟಿದ್ದೂ ಅಲ್ಲದೇ ಬಹುಮಾನಕ್ಕೆ ಆದ್ಯತೆ ನೀಡಿದ್ದನ್ನು ಖಂಡಿಸುವುದಾಗಿ ಹೇಳಿ ಪ್ರಶಸ್ತಿ ಸ್ವೀಕರಿಸದೇ ವಾಪಸ್ ತೆರಳಿದ ಘಟನೆ ನಡೆಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ