ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ಇಂಗಳಗೇರಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರಕಾಶ ಮಾಲಗತ್ತಿ ಒಂದು ಮತದ ಅಂತರದಿAದ ಪೀರಣ್ಣಿ ಕೆಳಗಿನಮನಿ ಅವರ ವಿರುದ್ಧ ಜಯಸಾಧಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಚುನಾವಣೆ ಪ್ರಕ್ರಿಯೆಲ್ಲಿ 15 ಸದಸ್ಯ ಬಲದಲ್ಲಿ ಎಲ್ಲ ಸದಸ್ಯರು ಹಾಜರಾಗಿದ್ದರು.ಎರಡೂ ಬಣದವರು ಕಾಂಗ್ರೆಸ್ ಪಕ್ಷದ ಬೆಂಬಲಿತರೇ ಆಗಿದ್ದರೂ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಾಲಗತ್ತಿ, ಪಿರಣ್ಣಿ ಕೆಳಗಿನಮನಿ ನಾಮಪತ್ರ ಸಲ್ಲಿಸಿದ್ದರು.ಅದರಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ತಾಪಂ ಇಒ ವೆಂಕಟೇಶ ವಂದಾಲ, ಸದಸ್ಯರ ಸಹಮತದೊಂದಿಗೆ ಗೌಪ್ಯ ಮತದಾನ ಮಾಡುವ ತೀರ್ಮಾನದಂತೆ ಸದಸ್ಯರು ಗೌಪ್ಯವಾಗಿ ಮತ ಚಲಾಯಿಸಿದರು.ಅದರಲ್ಲಿ ಪ್ರಕಾಶ ಮಾಲಗತ್ತಿ ಅವರಿಗೆ 8, ಪೀರಣ್ಣಿ ಕೆಳಗಿನಮನಿ ಅವರಿಗೆ 7 ಮತಗಳು ಲಭಿಸಿ ಸೋಲನುಭವಿಸಿದರು.

ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿದ್ದರಿಂದ ಶೀಲವಂತಿ ಮಾದರ ಒಬ್ಬರೇ ಸದಸ್ಯೆಯಾಗಿದ್ದು ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.ಚುನಾವಣಾ ಕಾರ್ಯಕ್ಕೆ ಪಿಡಿಒ ಮುಕ್ಕಣ್ಣ ನಾಯಕ,ಕಾರ್ಯದರ್ಶಿ ಜಿ.ಎಲ್.ಬಿರಾದಾರ,ಸಿಬ್ಬಂದಿ ಎಸ್.ಆಯ್.ಹೆಬ್ಬಾಳ,ಬಿ.ಎಲ್.ಮಾದರ,ಸಿ.ಎಸ್.ಬೇವಿನಗಿಡ,ಸಂಗಪ್ಪ ತಳವಾರ,ಕಾಶೀನಾಥ ಮಾದರ ಸಹಕಾರ ನೀಡಿದರು.


ಚುನಾವಾಣಾಧಿಕಾರಿಯೊಂದಿಗೆ ವಾಗ್ವಾದ :
ಪರಾಜಿತ ಅಭ್ಯರ್ಥಿ ಪಿರಣ್ಣಿ ಕೆಳಗಿನಮನಿ ಚುನಾವಣೆಯಲ್ಲಿ ತಮ್ಮ ಜೊತೆಗೆ ಗುರುತಿಸಿಕೊಂಡಿದ್ದ ಸದಸ್ಯರೊಬ್ಬರನ್ನು ಹೈಜಾಕ್ ಮಾಡಲಾಗಿದೆ ಎಂದು ಆರೋಪಿಸಿ ಗೌಪ್ಯ ಮತದಾನದ ವೇಳೆ ದಾರಿ ತಪ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ ವಂದಾಲ ಅವರೊಂದಿಗೆ ವಾಗ್ವಾದ ನಡೆಸಿದರು.ಚುನಾವಣಾಧಿಕಾರಿ ವಂದಾಲ ಚುನಾವಣಾ ಪ್ರಕ್ರಿಯೆಗಳ ಕುರಿತು ಆಕ್ರೋಶಗೊಂಡಿದ್ದ ಕೆಳಗಿನಮನಿ ಬೆಂಬಲಿಗರಿಗೆ ಮನವರಿಕೆ ಮಾಡಿದ ಬಳಿಕ ಪ್ರತಿಭಟಿಸಲು ಮುಂದಾದವರು ಸಮಾಧಾನಗೊಂಡರು.ಪಿಎಸೈ ಜ್ಯೋತಿ ಖೋತ ,ಎ.ಎಸ್.ಐ ಪಿ.ಬಿ.ದೊಡಮನಿ, ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ