ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ಇಂಗಳಗೇರಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರಕಾಶ ಮಾಲಗತ್ತಿ ಒಂದು ಮತದ ಅಂತರದಿAದ ಪೀರಣ್ಣಿ ಕೆಳಗಿನಮನಿ ಅವರ ವಿರುದ್ಧ ಜಯಸಾಧಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಚುನಾವಣೆ ಪ್ರಕ್ರಿಯೆಲ್ಲಿ 15 ಸದಸ್ಯ ಬಲದಲ್ಲಿ ಎಲ್ಲ ಸದಸ್ಯರು ಹಾಜರಾಗಿದ್ದರು.ಎರಡೂ ಬಣದವರು ಕಾಂಗ್ರೆಸ್ ಪಕ್ಷದ ಬೆಂಬಲಿತರೇ ಆಗಿದ್ದರೂ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಾಲಗತ್ತಿ, ಪಿರಣ್ಣಿ ಕೆಳಗಿನಮನಿ ನಾಮಪತ್ರ ಸಲ್ಲಿಸಿದ್ದರು.ಅದರಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ತಾಪಂ ಇಒ ವೆಂಕಟೇಶ ವಂದಾಲ, ಸದಸ್ಯರ ಸಹಮತದೊಂದಿಗೆ ಗೌಪ್ಯ ಮತದಾನ ಮಾಡುವ ತೀರ್ಮಾನದಂತೆ ಸದಸ್ಯರು ಗೌಪ್ಯವಾಗಿ ಮತ ಚಲಾಯಿಸಿದರು.ಅದರಲ್ಲಿ ಪ್ರಕಾಶ ಮಾಲಗತ್ತಿ ಅವರಿಗೆ 8, ಪೀರಣ್ಣಿ ಕೆಳಗಿನಮನಿ ಅವರಿಗೆ 7 ಮತಗಳು ಲಭಿಸಿ ಸೋಲನುಭವಿಸಿದರು.

ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿದ್ದರಿಂದ ಶೀಲವಂತಿ ಮಾದರ ಒಬ್ಬರೇ ಸದಸ್ಯೆಯಾಗಿದ್ದು ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.ಚುನಾವಣಾ ಕಾರ್ಯಕ್ಕೆ ಪಿಡಿಒ ಮುಕ್ಕಣ್ಣ ನಾಯಕ,ಕಾರ್ಯದರ್ಶಿ ಜಿ.ಎಲ್.ಬಿರಾದಾರ,ಸಿಬ್ಬಂದಿ ಎಸ್.ಆಯ್.ಹೆಬ್ಬಾಳ,ಬಿ.ಎಲ್.ಮಾದರ,ಸಿ.ಎಸ್.ಬೇವಿನಗಿಡ,ಸಂಗಪ್ಪ ತಳವಾರ,ಕಾಶೀನಾಥ ಮಾದರ ಸಹಕಾರ ನೀಡಿದರು.


ಚುನಾವಾಣಾಧಿಕಾರಿಯೊಂದಿಗೆ ವಾಗ್ವಾದ :
ಪರಾಜಿತ ಅಭ್ಯರ್ಥಿ ಪಿರಣ್ಣಿ ಕೆಳಗಿನಮನಿ ಚುನಾವಣೆಯಲ್ಲಿ ತಮ್ಮ ಜೊತೆಗೆ ಗುರುತಿಸಿಕೊಂಡಿದ್ದ ಸದಸ್ಯರೊಬ್ಬರನ್ನು ಹೈಜಾಕ್ ಮಾಡಲಾಗಿದೆ ಎಂದು ಆರೋಪಿಸಿ ಗೌಪ್ಯ ಮತದಾನದ ವೇಳೆ ದಾರಿ ತಪ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ ವಂದಾಲ ಅವರೊಂದಿಗೆ ವಾಗ್ವಾದ ನಡೆಸಿದರು.ಚುನಾವಣಾಧಿಕಾರಿ ವಂದಾಲ ಚುನಾವಣಾ ಪ್ರಕ್ರಿಯೆಗಳ ಕುರಿತು ಆಕ್ರೋಶಗೊಂಡಿದ್ದ ಕೆಳಗಿನಮನಿ ಬೆಂಬಲಿಗರಿಗೆ ಮನವರಿಕೆ ಮಾಡಿದ ಬಳಿಕ ಪ್ರತಿಭಟಿಸಲು ಮುಂದಾದವರು ಸಮಾಧಾನಗೊಂಡರು.ಪಿಎಸೈ ಜ್ಯೋತಿ ಖೋತ ,ಎ.ಎಸ್.ಐ ಪಿ.ಬಿ.ದೊಡಮನಿ, ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.

Latest News

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.