ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಇಂಗಳಗೇರಿ ಗ್ರಾ.ಪಂಗೆ ಮಾಲಗತ್ತಿ ಅಧ್ಯಕ್ಷ,ಶೀಲವಂತಿ ಉಪಾಧ್ಯಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ಇಂಗಳಗೇರಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರಕಾಶ ಮಾಲಗತ್ತಿ ಒಂದು ಮತದ ಅಂತರದಿAದ ಪೀರಣ್ಣಿ ಕೆಳಗಿನಮನಿ ಅವರ ವಿರುದ್ಧ ಜಯಸಾಧಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಚುನಾವಣೆ ಪ್ರಕ್ರಿಯೆಲ್ಲಿ 15 ಸದಸ್ಯ ಬಲದಲ್ಲಿ ಎಲ್ಲ ಸದಸ್ಯರು ಹಾಜರಾಗಿದ್ದರು.ಎರಡೂ ಬಣದವರು ಕಾಂಗ್ರೆಸ್ ಪಕ್ಷದ ಬೆಂಬಲಿತರೇ ಆಗಿದ್ದರೂ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಾಲಗತ್ತಿ, ಪಿರಣ್ಣಿ ಕೆಳಗಿನಮನಿ ನಾಮಪತ್ರ ಸಲ್ಲಿಸಿದ್ದರು.ಅದರಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ತಾಪಂ ಇಒ ವೆಂಕಟೇಶ ವಂದಾಲ, ಸದಸ್ಯರ ಸಹಮತದೊಂದಿಗೆ ಗೌಪ್ಯ ಮತದಾನ ಮಾಡುವ ತೀರ್ಮಾನದಂತೆ ಸದಸ್ಯರು ಗೌಪ್ಯವಾಗಿ ಮತ ಚಲಾಯಿಸಿದರು.ಅದರಲ್ಲಿ ಪ್ರಕಾಶ ಮಾಲಗತ್ತಿ ಅವರಿಗೆ 8, ಪೀರಣ್ಣಿ ಕೆಳಗಿನಮನಿ ಅವರಿಗೆ 7 ಮತಗಳು ಲಭಿಸಿ ಸೋಲನುಭವಿಸಿದರು.

ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿದ್ದರಿಂದ ಶೀಲವಂತಿ ಮಾದರ ಒಬ್ಬರೇ ಸದಸ್ಯೆಯಾಗಿದ್ದು ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.ಚುನಾವಣಾ ಕಾರ್ಯಕ್ಕೆ ಪಿಡಿಒ ಮುಕ್ಕಣ್ಣ ನಾಯಕ,ಕಾರ್ಯದರ್ಶಿ ಜಿ.ಎಲ್.ಬಿರಾದಾರ,ಸಿಬ್ಬಂದಿ ಎಸ್.ಆಯ್.ಹೆಬ್ಬಾಳ,ಬಿ.ಎಲ್.ಮಾದರ,ಸಿ.ಎಸ್.ಬೇವಿನಗಿಡ,ಸಂಗಪ್ಪ ತಳವಾರ,ಕಾಶೀನಾಥ ಮಾದರ ಸಹಕಾರ ನೀಡಿದರು.


ಚುನಾವಾಣಾಧಿಕಾರಿಯೊಂದಿಗೆ ವಾಗ್ವಾದ :
ಪರಾಜಿತ ಅಭ್ಯರ್ಥಿ ಪಿರಣ್ಣಿ ಕೆಳಗಿನಮನಿ ಚುನಾವಣೆಯಲ್ಲಿ ತಮ್ಮ ಜೊತೆಗೆ ಗುರುತಿಸಿಕೊಂಡಿದ್ದ ಸದಸ್ಯರೊಬ್ಬರನ್ನು ಹೈಜಾಕ್ ಮಾಡಲಾಗಿದೆ ಎಂದು ಆರೋಪಿಸಿ ಗೌಪ್ಯ ಮತದಾನದ ವೇಳೆ ದಾರಿ ತಪ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ ವಂದಾಲ ಅವರೊಂದಿಗೆ ವಾಗ್ವಾದ ನಡೆಸಿದರು.ಚುನಾವಣಾಧಿಕಾರಿ ವಂದಾಲ ಚುನಾವಣಾ ಪ್ರಕ್ರಿಯೆಗಳ ಕುರಿತು ಆಕ್ರೋಶಗೊಂಡಿದ್ದ ಕೆಳಗಿನಮನಿ ಬೆಂಬಲಿಗರಿಗೆ ಮನವರಿಕೆ ಮಾಡಿದ ಬಳಿಕ ಪ್ರತಿಭಟಿಸಲು ಮುಂದಾದವರು ಸಮಾಧಾನಗೊಂಡರು.ಪಿಎಸೈ ಜ್ಯೋತಿ ಖೋತ ,ಎ.ಎಸ್.ಐ ಪಿ.ಬಿ.ದೊಡಮನಿ, ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ