ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಬರಹ: ಶ್ರೀಕಾಂತ ಸರಗಣಾಚಾರಿ

ಕುಷ್ಟಗಿ: ಹಿಂದೂ – ಮುಸ್ಲಿಂ ಭಾಂದವರು ಸೌಹಾರ್ಧತೆಯುತವಾಗಿ ಆಚರಿಸಿಕೊಂಡು ಬಂದಿರುವ ನಾಲ್ಕು ದಶಕಗಳ ಸಂಭ್ರಮದ ನಡೆವೆಯೂ ಪ್ರತಿವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ವಿಘ್ನ ನಿವಾರಣೆಗೆ:

ಪಟ್ಟಣವು ವಾಣ ಜ್ಯ ವಹಿವಾಟು ಮಾರುಕಟ್ಟೆಯ ಕೇಂದ್ರವಾಗಿದ್ದ ಈ ಹಿಂದಿನ ವೆಳೆಯಲ್ಲಿ ಹಳೆ ಬಜಾರ ಓಣ ಯ ಪ್ರತಿಯೊಬ್ಬ ಹಿಂದೂ- ಮುಸ್ಲಿಂ ಸಮುದಾಯದವರು ಸಭೆ ಸೇರಿ ವಿಘ್ನ ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಊರಿಗೆ ಒಳ್ಳೆಯದು ಆಗಲಿ ಎಂಬ ಸದುದ್ದೇಶದಿಂದ ಹಿಂದೂ, ಮುಸ್ಲಿಂ ಗೆಳೆಯರ ಬಳಗದವನ್ನು ರಚಿಸಿಕೊಂಡು ಗಣೇಶೋತ್ಸವ ಆರಂಭಿಸಲು ನಿರ್ಧಾರ ಮಾಡಿ, ೧೯೮೩ ರಲ್ಲಿ ಪ್ರಥಮ ಬಾರಿಗೆ ಗಣೇಶೋತ್ಸವ ಆರಂಭಿಸಿದರು.

ಅಲ್ಲಿಂದ ಇಲ್ಲಿಯ ವರೆಗೂ ಯಾವುದೇ ಅಡೆತಡೆಗಳು ಆಗದಂತೆ ನಿರಂತರವಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. ಹಿಂದು-ಮುಸ್ಲಿಂ ಧರ್ಮ ಸಮನ್ವಯತೆಗೆ ಸಾಕ್ಷಿಯಾಗುವ ಮೂಲಕ ಹಲವಾರು ಜನ ಜಾಗೃತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಜನ ಮನ್ನಣೆ ಗಳಿಸಿದ್ದಾರೆ.

ಭಾವೈಕ್ಯೆತೆಗೆ ಹೆಸರು ವಾಸಿ:

ಪ್ರತಿವರ್ಷವು ಪ್ರತಿಷ್ಠಾಪಿತ ಗಣೇಶ ಮೂರ್ತಿ ಒಂದು ವರ್ಷದಂತೆ ಇನ್ನೊಂದು ವರ್ಷದಲ್ಲಿ ವಿಭಿನ್ನವಾಗಿ ವಿವಿಧ ಅವತಾರಗಳಲ್ಲಿ ವೈವಿದ್ಯಮಯವಾಗಿ ಆಚರಿಕೊಂಡು ಬಂದಿರುವುದು ವಿಶೇಷ. ಹಿಂದಿನ ಕೆಲ ವರ್ಷಗಳ ಹಿಂದೆ ತೆಂಗಿನ ಕಾಯಿ, ಯಡೆಯೂರು ಸಿದ್ದಲಿಂಗೇಶ್ವರ, ಪುಟ್ಟರಾಜ ಕವಿ ಗವಾಯಿಗಳ ಮೂರ್ತಿ ಸೇರಿದಂತೆ ಇನ್ನೂ ಅನೇಕ ವಿಭಿನ್ನ ಗಣೇಶನನ್ನು ಕೂಡಿಸುತ್ತಾ ಬಂದಿದ್ದಾರೆ. ಹಳೆ ಬಜಾರದ ಗಣಪ ಎಂದರೆ ಪ್ರತಿ ವರ್ಷ ಒಂದಾಲ್ಲ ಒಂದು ರೀತಿ ವೈಶ್ಯಷ್ಠತೆಯಿಂದ ಕೂಡಿರಬೇಕು ಎಂಬ ಛಲದಿಂದ ವಿಘ್ನ ವಿನಾಯಕನನ್ನು ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಅದೇ ಪ್ರೀತಿ, ಅದೇ ವಿಶ್ವಾಸ ಮೇಳೈಸಿದ್ದು ಅದರಲ್ಲೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣ ಗೆಯಲ್ಲು ವಿಶೇಷತೆ ಉಳಿಸಿಕೊಂಡು ಬರುವ ಮೂಲಕ ಭಾವೈಕ್ಯೆತೆ ಸಾರುತ್ತಿದ್ದಾರೆ.

ಹಿನ್ನೆಯಲ್ಲಿ: ಗುಡಗೇರಿಯ ದ್ಯಾಮವ್ವನ ಗುಡಿಗೆ ಸಂತ ಶಿಶುನಾಳ ಶರೀಫರು ಹಾಗೂ ಅವರ ಗುರುಗಳಾದ ಗುರುಗೋವಿಂದ ಭಟ್ಟರು ಹೋಗಿದ್ದ ಸಂದರ್ಭದಲ್ಲಿ ಅವರ ಬಳಿ ಇದ್ದ (ಮದ್ಯ ) ಶಂಕರಿ ಖಾಲಿಯಾಗಿರುತ್ತದೆ. ಆವಾಗ ಅವರ ಹತ್ತಿರ ದುಡ್ಡುನೂ ಇಲ್ಲದ ಬಗ್ಗೆ ಗೋಂವಿದ ಭಟ್ಟರಿಗೆ ಸಂತ ಶಿಶು ಶರೀಫಜ್ಜನವರು ಹೇಳುತ್ತಾರೆ. ಆ ಸಂದರ್ಭದಲ್ಲಿ ಶ್ರೀದ್ಯಾಮವ್ವನ ಬಳಿ ಶರೀಪಜ್ಜನವರು ದ್ಯಾಮವ್ವ ನ ಬೇಡಿಕೊಂಡಾಗ ದ್ಯಾಮವ್ವ ದೇವರು ಪ್ರತ್ಯಕ್ಷಳಾಗಿ ಅವರಿಗೆ ನತ್ತು (ಮೂಗತಿ) ಕೊಡುತ್ತಾಳೆ. ಅವಾಗ ಅದನ್ನು ಕೊಟ್ಟು ಅದರಿಂದ ಅವರು (ಮದ್ಯ) ಶಂಕರಿ ಸರಾಯಿ ಖರೀದಿಸಿ ತಂದು ಸೇವೆನೆ ಮಾಡಿ ದ್ಯಾಮವ್ವನ ಗುಡಿಯಲ್ಲಿ ಮಲಗಿರುತ್ತಾರೆ.

ಬೆಳಿಗ್ಗೆ ಪೂಜಾರಿಯೂ ಪೂಜೆ ಮಾಡುವಾಗ ದೇವಿಯ ಮೂಗಿನಲ್ಲಿ ನತ್ತು ಕಾಣ ಸುವದಿಲ್ಲ. ಆಗ ಗ್ರಾಮಸ್ಥರು ಗುರು, ಶಿಷ್ಯರನ್ನು ಕರೆದು ವಿಚಾರಿಸಿದಾಗ ಪನಃ ಆ ನತ್ತು(ಮೂಗತಿ) ದೇವಿಯ ಮೂಗಿನಲಿರುತ್ತದೆ. ಆದನ್ನು ಕಂಡು ಗ್ರಾಮಸ್ಥರು ಆಶ್ಚರ್ಯಗೊಂಡು ಬಗ್ಗೆ ಇತಿಹಾಸ ತಿಳಿದುಕೊಂಡ ನಾವುಗಳು ಅದೇ ಹೊಲಿಕೆಯಲ್ಲಿ ಪಟ್ಟಣದ ಆರಾಧ್ಯ ದೇವಿತೆ ಹಾಗೂ ಗ್ರಾಮದೇವೆತೆ ಶ್ರೀದ್ಯಾಮವ್ವದೇವಿ ದೇವಸ್ಥಾನವನ್ನು ಹೊಲುವ ಪ್ರತಿರೂಪ ಪ್ರತಿಷ್ಠಾಪಿಸಿ, ದೇವಸ್ಥಾನದ ಕಟ್ಟೆಯ ಮೇಲೆ ಶ್ರೀಗಣೇಶ ನು ತಲೆಗೆ ರೂಮಾಲು ಸುತ್ತಿಕೊಂಡು ಕಟ್ಟಿಯ ಮೇಲೆ ಕುಳಿತಿರುವುದು ಮತ್ತು ಈಶ್ವರ ಮೂರ್ತಿ ಗಮನ ಸೆಳೆಯುತ್ತಿದೆ.

ಅದರಂತೆ, ಕಟ್ಟೆಯ ಬಲಭಾಗದಲ್ಲಿ ಸಂತ ಶಿಶುನಾಳ ಶರಿಫಜ್ಜನವರ ಪ್ರತಿರೂಪ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ ಪಿ ಜೆ ಅಬ್ದುಲ್ ಕಲಂರವರ ಮೂರ್ತಿ ಸ್ಥಾಪಿಸಲಾಗಿದೆ.

ಇದನ್ನೂ ಓದಿ: Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಆಕರ್ಷಣೆಯ ಕೇಂದ್ರ ಬಿಂದುವಾಗಿ ಸರ್ವಧರ್ಮದವರು ಸೌರ್ಹಾದತೆಯಿಂದ ಗಣೇಶೋತ್ಸವವನ್ನು ಆಚರಿಕೊಂಡು ಬರಲಾಗುತ್ತಿದೆ ಎಂದು ಶ್ರೀಧರ ಎನ್ ಘೋರ್ಪಡೆ, ಅನ್ವರ್ ಅತ್ತಾರ್, ಅಮಿನುದ್ದಿನ್ ಮುಲ್ಲಾ, ಸಂತೋಷ ಸರಗಣಚಾರಿ, ಬಸವರಾಜ ವಣಗೇರಿ, ರವಿ ಅಗಳಕೇರಿ, ಕಳಕಪ್ಪ ಬಸಿರಿಗಿಡದ, ಬಸವರಾಜ ಗುತ್ತೂರು, ಸಂಗಮೇಶ ಕುರ್ನಾಳ, ಶಿವಕುಮಾರ , ಗೋಪಾಲ ಶೆಟ್ಟರ್, ವಸಂತ ರಾಯ್ಕರ್ ಹಾಗೂ ಇತರರು ತಿಳಿಸಿದರು.

Latest News

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ ಸಂಸ್ಥೆಯ ವತಿಯಿಂದ “ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್” ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ. ಈ ಪರೀಕ್ಷೆ ಮಾರ್ಚ್ 29ರಂದು (ಭಾನುವಾರ) ಬೆಳಿಗ್ಗೆ 10:30 ಗಂಟೆಗೆ ನಡೆಯಲಿದ್ದು, 3ನೇ ಮತ್ತು 4ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಪರೀಕ್ಷೆಯು ವಿಜಯಪುರ ಜಿಲ್ಲೆಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ಬರೆದುಕೊಡುವುದು ಅನಿವಾರ್ಯವಾಗುತ್ತದೆ.ಇಂತಹ ಸಮಯದಲ್ಲಿ ನಾಗರಿಕರು ಆರೋಗ್ಯ ಇಲಾಖೆ ವೈದ್ಯರು,ಸಿಬ್ಬಂದಿಯೊAದಿಗೆ ಸಂಯಮದಿAದ ನಡೆದುಕೊಳ್ಳಬೇಕು ಎಂದು ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯ ಅಭಿಪ್ರಾಯಪಟ್ಟರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಮೊದಲಿನಂತೆ ಈಗ ವೈದ್ಯಕೀಯ ಸೇವೆ ಅಷ್ಟೊಂದು