ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಬರಹ: ಶ್ರೀಕಾಂತ ಸರಗಣಾಚಾರಿ

ಕುಷ್ಟಗಿ: ಹಿಂದೂ – ಮುಸ್ಲಿಂ ಭಾಂದವರು ಸೌಹಾರ್ಧತೆಯುತವಾಗಿ ಆಚರಿಸಿಕೊಂಡು ಬಂದಿರುವ ನಾಲ್ಕು ದಶಕಗಳ ಸಂಭ್ರಮದ ನಡೆವೆಯೂ ಪ್ರತಿವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ವಿಘ್ನ ನಿವಾರಣೆಗೆ:

ಪಟ್ಟಣವು ವಾಣ ಜ್ಯ ವಹಿವಾಟು ಮಾರುಕಟ್ಟೆಯ ಕೇಂದ್ರವಾಗಿದ್ದ ಈ ಹಿಂದಿನ ವೆಳೆಯಲ್ಲಿ ಹಳೆ ಬಜಾರ ಓಣ ಯ ಪ್ರತಿಯೊಬ್ಬ ಹಿಂದೂ- ಮುಸ್ಲಿಂ ಸಮುದಾಯದವರು ಸಭೆ ಸೇರಿ ವಿಘ್ನ ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಊರಿಗೆ ಒಳ್ಳೆಯದು ಆಗಲಿ ಎಂಬ ಸದುದ್ದೇಶದಿಂದ ಹಿಂದೂ, ಮುಸ್ಲಿಂ ಗೆಳೆಯರ ಬಳಗದವನ್ನು ರಚಿಸಿಕೊಂಡು ಗಣೇಶೋತ್ಸವ ಆರಂಭಿಸಲು ನಿರ್ಧಾರ ಮಾಡಿ, ೧೯೮೩ ರಲ್ಲಿ ಪ್ರಥಮ ಬಾರಿಗೆ ಗಣೇಶೋತ್ಸವ ಆರಂಭಿಸಿದರು.

ಅಲ್ಲಿಂದ ಇಲ್ಲಿಯ ವರೆಗೂ ಯಾವುದೇ ಅಡೆತಡೆಗಳು ಆಗದಂತೆ ನಿರಂತರವಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. ಹಿಂದು-ಮುಸ್ಲಿಂ ಧರ್ಮ ಸಮನ್ವಯತೆಗೆ ಸಾಕ್ಷಿಯಾಗುವ ಮೂಲಕ ಹಲವಾರು ಜನ ಜಾಗೃತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಜನ ಮನ್ನಣೆ ಗಳಿಸಿದ್ದಾರೆ.

ಭಾವೈಕ್ಯೆತೆಗೆ ಹೆಸರು ವಾಸಿ:

ಪ್ರತಿವರ್ಷವು ಪ್ರತಿಷ್ಠಾಪಿತ ಗಣೇಶ ಮೂರ್ತಿ ಒಂದು ವರ್ಷದಂತೆ ಇನ್ನೊಂದು ವರ್ಷದಲ್ಲಿ ವಿಭಿನ್ನವಾಗಿ ವಿವಿಧ ಅವತಾರಗಳಲ್ಲಿ ವೈವಿದ್ಯಮಯವಾಗಿ ಆಚರಿಕೊಂಡು ಬಂದಿರುವುದು ವಿಶೇಷ. ಹಿಂದಿನ ಕೆಲ ವರ್ಷಗಳ ಹಿಂದೆ ತೆಂಗಿನ ಕಾಯಿ, ಯಡೆಯೂರು ಸಿದ್ದಲಿಂಗೇಶ್ವರ, ಪುಟ್ಟರಾಜ ಕವಿ ಗವಾಯಿಗಳ ಮೂರ್ತಿ ಸೇರಿದಂತೆ ಇನ್ನೂ ಅನೇಕ ವಿಭಿನ್ನ ಗಣೇಶನನ್ನು ಕೂಡಿಸುತ್ತಾ ಬಂದಿದ್ದಾರೆ. ಹಳೆ ಬಜಾರದ ಗಣಪ ಎಂದರೆ ಪ್ರತಿ ವರ್ಷ ಒಂದಾಲ್ಲ ಒಂದು ರೀತಿ ವೈಶ್ಯಷ್ಠತೆಯಿಂದ ಕೂಡಿರಬೇಕು ಎಂಬ ಛಲದಿಂದ ವಿಘ್ನ ವಿನಾಯಕನನ್ನು ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಅದೇ ಪ್ರೀತಿ, ಅದೇ ವಿಶ್ವಾಸ ಮೇಳೈಸಿದ್ದು ಅದರಲ್ಲೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣ ಗೆಯಲ್ಲು ವಿಶೇಷತೆ ಉಳಿಸಿಕೊಂಡು ಬರುವ ಮೂಲಕ ಭಾವೈಕ್ಯೆತೆ ಸಾರುತ್ತಿದ್ದಾರೆ.

ಹಿನ್ನೆಯಲ್ಲಿ: ಗುಡಗೇರಿಯ ದ್ಯಾಮವ್ವನ ಗುಡಿಗೆ ಸಂತ ಶಿಶುನಾಳ ಶರೀಫರು ಹಾಗೂ ಅವರ ಗುರುಗಳಾದ ಗುರುಗೋವಿಂದ ಭಟ್ಟರು ಹೋಗಿದ್ದ ಸಂದರ್ಭದಲ್ಲಿ ಅವರ ಬಳಿ ಇದ್ದ (ಮದ್ಯ ) ಶಂಕರಿ ಖಾಲಿಯಾಗಿರುತ್ತದೆ. ಆವಾಗ ಅವರ ಹತ್ತಿರ ದುಡ್ಡುನೂ ಇಲ್ಲದ ಬಗ್ಗೆ ಗೋಂವಿದ ಭಟ್ಟರಿಗೆ ಸಂತ ಶಿಶು ಶರೀಫಜ್ಜನವರು ಹೇಳುತ್ತಾರೆ. ಆ ಸಂದರ್ಭದಲ್ಲಿ ಶ್ರೀದ್ಯಾಮವ್ವನ ಬಳಿ ಶರೀಪಜ್ಜನವರು ದ್ಯಾಮವ್ವ ನ ಬೇಡಿಕೊಂಡಾಗ ದ್ಯಾಮವ್ವ ದೇವರು ಪ್ರತ್ಯಕ್ಷಳಾಗಿ ಅವರಿಗೆ ನತ್ತು (ಮೂಗತಿ) ಕೊಡುತ್ತಾಳೆ. ಅವಾಗ ಅದನ್ನು ಕೊಟ್ಟು ಅದರಿಂದ ಅವರು (ಮದ್ಯ) ಶಂಕರಿ ಸರಾಯಿ ಖರೀದಿಸಿ ತಂದು ಸೇವೆನೆ ಮಾಡಿ ದ್ಯಾಮವ್ವನ ಗುಡಿಯಲ್ಲಿ ಮಲಗಿರುತ್ತಾರೆ.

ಬೆಳಿಗ್ಗೆ ಪೂಜಾರಿಯೂ ಪೂಜೆ ಮಾಡುವಾಗ ದೇವಿಯ ಮೂಗಿನಲ್ಲಿ ನತ್ತು ಕಾಣ ಸುವದಿಲ್ಲ. ಆಗ ಗ್ರಾಮಸ್ಥರು ಗುರು, ಶಿಷ್ಯರನ್ನು ಕರೆದು ವಿಚಾರಿಸಿದಾಗ ಪನಃ ಆ ನತ್ತು(ಮೂಗತಿ) ದೇವಿಯ ಮೂಗಿನಲಿರುತ್ತದೆ. ಆದನ್ನು ಕಂಡು ಗ್ರಾಮಸ್ಥರು ಆಶ್ಚರ್ಯಗೊಂಡು ಬಗ್ಗೆ ಇತಿಹಾಸ ತಿಳಿದುಕೊಂಡ ನಾವುಗಳು ಅದೇ ಹೊಲಿಕೆಯಲ್ಲಿ ಪಟ್ಟಣದ ಆರಾಧ್ಯ ದೇವಿತೆ ಹಾಗೂ ಗ್ರಾಮದೇವೆತೆ ಶ್ರೀದ್ಯಾಮವ್ವದೇವಿ ದೇವಸ್ಥಾನವನ್ನು ಹೊಲುವ ಪ್ರತಿರೂಪ ಪ್ರತಿಷ್ಠಾಪಿಸಿ, ದೇವಸ್ಥಾನದ ಕಟ್ಟೆಯ ಮೇಲೆ ಶ್ರೀಗಣೇಶ ನು ತಲೆಗೆ ರೂಮಾಲು ಸುತ್ತಿಕೊಂಡು ಕಟ್ಟಿಯ ಮೇಲೆ ಕುಳಿತಿರುವುದು ಮತ್ತು ಈಶ್ವರ ಮೂರ್ತಿ ಗಮನ ಸೆಳೆಯುತ್ತಿದೆ.

ಅದರಂತೆ, ಕಟ್ಟೆಯ ಬಲಭಾಗದಲ್ಲಿ ಸಂತ ಶಿಶುನಾಳ ಶರಿಫಜ್ಜನವರ ಪ್ರತಿರೂಪ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ ಪಿ ಜೆ ಅಬ್ದುಲ್ ಕಲಂರವರ ಮೂರ್ತಿ ಸ್ಥಾಪಿಸಲಾಗಿದೆ.

ಇದನ್ನೂ ಓದಿ: Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಆಕರ್ಷಣೆಯ ಕೇಂದ್ರ ಬಿಂದುವಾಗಿ ಸರ್ವಧರ್ಮದವರು ಸೌರ್ಹಾದತೆಯಿಂದ ಗಣೇಶೋತ್ಸವವನ್ನು ಆಚರಿಕೊಂಡು ಬರಲಾಗುತ್ತಿದೆ ಎಂದು ಶ್ರೀಧರ ಎನ್ ಘೋರ್ಪಡೆ, ಅನ್ವರ್ ಅತ್ತಾರ್, ಅಮಿನುದ್ದಿನ್ ಮುಲ್ಲಾ, ಸಂತೋಷ ಸರಗಣಚಾರಿ, ಬಸವರಾಜ ವಣಗೇರಿ, ರವಿ ಅಗಳಕೇರಿ, ಕಳಕಪ್ಪ ಬಸಿರಿಗಿಡದ, ಬಸವರಾಜ ಗುತ್ತೂರು, ಸಂಗಮೇಶ ಕುರ್ನಾಳ, ಶಿವಕುಮಾರ , ಗೋಪಾಲ ಶೆಟ್ಟರ್, ವಸಂತ ರಾಯ್ಕರ್ ಹಾಗೂ ಇತರರು ತಿಳಿಸಿದರು.

Latest News

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈಗಿರುವ ಸಮಯದ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಿಗ್ಗೆ 8 ರಿಂದ ಮದ್ಯಾಹ್ನ 1.30ಕ್ಕೆ ಬದಲಾಯಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ