ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಬರಹ: ಶ್ರೀಕಾಂತ ಸರಗಣಾಚಾರಿ

ಕುಷ್ಟಗಿ: ಹಿಂದೂ – ಮುಸ್ಲಿಂ ಭಾಂದವರು ಸೌಹಾರ್ಧತೆಯುತವಾಗಿ ಆಚರಿಸಿಕೊಂಡು ಬಂದಿರುವ ನಾಲ್ಕು ದಶಕಗಳ ಸಂಭ್ರಮದ ನಡೆವೆಯೂ ಪ್ರತಿವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ವಿಘ್ನ ನಿವಾರಣೆಗೆ:

ಪಟ್ಟಣವು ವಾಣ ಜ್ಯ ವಹಿವಾಟು ಮಾರುಕಟ್ಟೆಯ ಕೇಂದ್ರವಾಗಿದ್ದ ಈ ಹಿಂದಿನ ವೆಳೆಯಲ್ಲಿ ಹಳೆ ಬಜಾರ ಓಣ ಯ ಪ್ರತಿಯೊಬ್ಬ ಹಿಂದೂ- ಮುಸ್ಲಿಂ ಸಮುದಾಯದವರು ಸಭೆ ಸೇರಿ ವಿಘ್ನ ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಊರಿಗೆ ಒಳ್ಳೆಯದು ಆಗಲಿ ಎಂಬ ಸದುದ್ದೇಶದಿಂದ ಹಿಂದೂ, ಮುಸ್ಲಿಂ ಗೆಳೆಯರ ಬಳಗದವನ್ನು ರಚಿಸಿಕೊಂಡು ಗಣೇಶೋತ್ಸವ ಆರಂಭಿಸಲು ನಿರ್ಧಾರ ಮಾಡಿ, ೧೯೮೩ ರಲ್ಲಿ ಪ್ರಥಮ ಬಾರಿಗೆ ಗಣೇಶೋತ್ಸವ ಆರಂಭಿಸಿದರು.

ಅಲ್ಲಿಂದ ಇಲ್ಲಿಯ ವರೆಗೂ ಯಾವುದೇ ಅಡೆತಡೆಗಳು ಆಗದಂತೆ ನಿರಂತರವಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. ಹಿಂದು-ಮುಸ್ಲಿಂ ಧರ್ಮ ಸಮನ್ವಯತೆಗೆ ಸಾಕ್ಷಿಯಾಗುವ ಮೂಲಕ ಹಲವಾರು ಜನ ಜಾಗೃತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಜನ ಮನ್ನಣೆ ಗಳಿಸಿದ್ದಾರೆ.

ಭಾವೈಕ್ಯೆತೆಗೆ ಹೆಸರು ವಾಸಿ:

ಪ್ರತಿವರ್ಷವು ಪ್ರತಿಷ್ಠಾಪಿತ ಗಣೇಶ ಮೂರ್ತಿ ಒಂದು ವರ್ಷದಂತೆ ಇನ್ನೊಂದು ವರ್ಷದಲ್ಲಿ ವಿಭಿನ್ನವಾಗಿ ವಿವಿಧ ಅವತಾರಗಳಲ್ಲಿ ವೈವಿದ್ಯಮಯವಾಗಿ ಆಚರಿಕೊಂಡು ಬಂದಿರುವುದು ವಿಶೇಷ. ಹಿಂದಿನ ಕೆಲ ವರ್ಷಗಳ ಹಿಂದೆ ತೆಂಗಿನ ಕಾಯಿ, ಯಡೆಯೂರು ಸಿದ್ದಲಿಂಗೇಶ್ವರ, ಪುಟ್ಟರಾಜ ಕವಿ ಗವಾಯಿಗಳ ಮೂರ್ತಿ ಸೇರಿದಂತೆ ಇನ್ನೂ ಅನೇಕ ವಿಭಿನ್ನ ಗಣೇಶನನ್ನು ಕೂಡಿಸುತ್ತಾ ಬಂದಿದ್ದಾರೆ. ಹಳೆ ಬಜಾರದ ಗಣಪ ಎಂದರೆ ಪ್ರತಿ ವರ್ಷ ಒಂದಾಲ್ಲ ಒಂದು ರೀತಿ ವೈಶ್ಯಷ್ಠತೆಯಿಂದ ಕೂಡಿರಬೇಕು ಎಂಬ ಛಲದಿಂದ ವಿಘ್ನ ವಿನಾಯಕನನ್ನು ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಅದೇ ಪ್ರೀತಿ, ಅದೇ ವಿಶ್ವಾಸ ಮೇಳೈಸಿದ್ದು ಅದರಲ್ಲೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣ ಗೆಯಲ್ಲು ವಿಶೇಷತೆ ಉಳಿಸಿಕೊಂಡು ಬರುವ ಮೂಲಕ ಭಾವೈಕ್ಯೆತೆ ಸಾರುತ್ತಿದ್ದಾರೆ.

ಹಿನ್ನೆಯಲ್ಲಿ: ಗುಡಗೇರಿಯ ದ್ಯಾಮವ್ವನ ಗುಡಿಗೆ ಸಂತ ಶಿಶುನಾಳ ಶರೀಫರು ಹಾಗೂ ಅವರ ಗುರುಗಳಾದ ಗುರುಗೋವಿಂದ ಭಟ್ಟರು ಹೋಗಿದ್ದ ಸಂದರ್ಭದಲ್ಲಿ ಅವರ ಬಳಿ ಇದ್ದ (ಮದ್ಯ ) ಶಂಕರಿ ಖಾಲಿಯಾಗಿರುತ್ತದೆ. ಆವಾಗ ಅವರ ಹತ್ತಿರ ದುಡ್ಡುನೂ ಇಲ್ಲದ ಬಗ್ಗೆ ಗೋಂವಿದ ಭಟ್ಟರಿಗೆ ಸಂತ ಶಿಶು ಶರೀಫಜ್ಜನವರು ಹೇಳುತ್ತಾರೆ. ಆ ಸಂದರ್ಭದಲ್ಲಿ ಶ್ರೀದ್ಯಾಮವ್ವನ ಬಳಿ ಶರೀಪಜ್ಜನವರು ದ್ಯಾಮವ್ವ ನ ಬೇಡಿಕೊಂಡಾಗ ದ್ಯಾಮವ್ವ ದೇವರು ಪ್ರತ್ಯಕ್ಷಳಾಗಿ ಅವರಿಗೆ ನತ್ತು (ಮೂಗತಿ) ಕೊಡುತ್ತಾಳೆ. ಅವಾಗ ಅದನ್ನು ಕೊಟ್ಟು ಅದರಿಂದ ಅವರು (ಮದ್ಯ) ಶಂಕರಿ ಸರಾಯಿ ಖರೀದಿಸಿ ತಂದು ಸೇವೆನೆ ಮಾಡಿ ದ್ಯಾಮವ್ವನ ಗುಡಿಯಲ್ಲಿ ಮಲಗಿರುತ್ತಾರೆ.

ಬೆಳಿಗ್ಗೆ ಪೂಜಾರಿಯೂ ಪೂಜೆ ಮಾಡುವಾಗ ದೇವಿಯ ಮೂಗಿನಲ್ಲಿ ನತ್ತು ಕಾಣ ಸುವದಿಲ್ಲ. ಆಗ ಗ್ರಾಮಸ್ಥರು ಗುರು, ಶಿಷ್ಯರನ್ನು ಕರೆದು ವಿಚಾರಿಸಿದಾಗ ಪನಃ ಆ ನತ್ತು(ಮೂಗತಿ) ದೇವಿಯ ಮೂಗಿನಲಿರುತ್ತದೆ. ಆದನ್ನು ಕಂಡು ಗ್ರಾಮಸ್ಥರು ಆಶ್ಚರ್ಯಗೊಂಡು ಬಗ್ಗೆ ಇತಿಹಾಸ ತಿಳಿದುಕೊಂಡ ನಾವುಗಳು ಅದೇ ಹೊಲಿಕೆಯಲ್ಲಿ ಪಟ್ಟಣದ ಆರಾಧ್ಯ ದೇವಿತೆ ಹಾಗೂ ಗ್ರಾಮದೇವೆತೆ ಶ್ರೀದ್ಯಾಮವ್ವದೇವಿ ದೇವಸ್ಥಾನವನ್ನು ಹೊಲುವ ಪ್ರತಿರೂಪ ಪ್ರತಿಷ್ಠಾಪಿಸಿ, ದೇವಸ್ಥಾನದ ಕಟ್ಟೆಯ ಮೇಲೆ ಶ್ರೀಗಣೇಶ ನು ತಲೆಗೆ ರೂಮಾಲು ಸುತ್ತಿಕೊಂಡು ಕಟ್ಟಿಯ ಮೇಲೆ ಕುಳಿತಿರುವುದು ಮತ್ತು ಈಶ್ವರ ಮೂರ್ತಿ ಗಮನ ಸೆಳೆಯುತ್ತಿದೆ.

ಅದರಂತೆ, ಕಟ್ಟೆಯ ಬಲಭಾಗದಲ್ಲಿ ಸಂತ ಶಿಶುನಾಳ ಶರಿಫಜ್ಜನವರ ಪ್ರತಿರೂಪ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ ಪಿ ಜೆ ಅಬ್ದುಲ್ ಕಲಂರವರ ಮೂರ್ತಿ ಸ್ಥಾಪಿಸಲಾಗಿದೆ.

ಇದನ್ನೂ ಓದಿ: Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಆಕರ್ಷಣೆಯ ಕೇಂದ್ರ ಬಿಂದುವಾಗಿ ಸರ್ವಧರ್ಮದವರು ಸೌರ್ಹಾದತೆಯಿಂದ ಗಣೇಶೋತ್ಸವವನ್ನು ಆಚರಿಕೊಂಡು ಬರಲಾಗುತ್ತಿದೆ ಎಂದು ಶ್ರೀಧರ ಎನ್ ಘೋರ್ಪಡೆ, ಅನ್ವರ್ ಅತ್ತಾರ್, ಅಮಿನುದ್ದಿನ್ ಮುಲ್ಲಾ, ಸಂತೋಷ ಸರಗಣಚಾರಿ, ಬಸವರಾಜ ವಣಗೇರಿ, ರವಿ ಅಗಳಕೇರಿ, ಕಳಕಪ್ಪ ಬಸಿರಿಗಿಡದ, ಬಸವರಾಜ ಗುತ್ತೂರು, ಸಂಗಮೇಶ ಕುರ್ನಾಳ, ಶಿವಕುಮಾರ , ಗೋಪಾಲ ಶೆಟ್ಟರ್, ವಸಂತ ರಾಯ್ಕರ್ ಹಾಗೂ ಇತರರು ತಿಳಿಸಿದರು.

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ