ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಬರಹ: ಶ್ರೀಕಾಂತ ಸರಗಣಾಚಾರಿ

ಕುಷ್ಟಗಿ: ಹಿಂದೂ – ಮುಸ್ಲಿಂ ಭಾಂದವರು ಸೌಹಾರ್ಧತೆಯುತವಾಗಿ ಆಚರಿಸಿಕೊಂಡು ಬಂದಿರುವ ನಾಲ್ಕು ದಶಕಗಳ ಸಂಭ್ರಮದ ನಡೆವೆಯೂ ಪ್ರತಿವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ವಿಘ್ನ ನಿವಾರಣೆಗೆ:

ಪಟ್ಟಣವು ವಾಣ ಜ್ಯ ವಹಿವಾಟು ಮಾರುಕಟ್ಟೆಯ ಕೇಂದ್ರವಾಗಿದ್ದ ಈ ಹಿಂದಿನ ವೆಳೆಯಲ್ಲಿ ಹಳೆ ಬಜಾರ ಓಣ ಯ ಪ್ರತಿಯೊಬ್ಬ ಹಿಂದೂ- ಮುಸ್ಲಿಂ ಸಮುದಾಯದವರು ಸಭೆ ಸೇರಿ ವಿಘ್ನ ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಊರಿಗೆ ಒಳ್ಳೆಯದು ಆಗಲಿ ಎಂಬ ಸದುದ್ದೇಶದಿಂದ ಹಿಂದೂ, ಮುಸ್ಲಿಂ ಗೆಳೆಯರ ಬಳಗದವನ್ನು ರಚಿಸಿಕೊಂಡು ಗಣೇಶೋತ್ಸವ ಆರಂಭಿಸಲು ನಿರ್ಧಾರ ಮಾಡಿ, ೧೯೮೩ ರಲ್ಲಿ ಪ್ರಥಮ ಬಾರಿಗೆ ಗಣೇಶೋತ್ಸವ ಆರಂಭಿಸಿದರು.

ಅಲ್ಲಿಂದ ಇಲ್ಲಿಯ ವರೆಗೂ ಯಾವುದೇ ಅಡೆತಡೆಗಳು ಆಗದಂತೆ ನಿರಂತರವಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. ಹಿಂದು-ಮುಸ್ಲಿಂ ಧರ್ಮ ಸಮನ್ವಯತೆಗೆ ಸಾಕ್ಷಿಯಾಗುವ ಮೂಲಕ ಹಲವಾರು ಜನ ಜಾಗೃತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಜನ ಮನ್ನಣೆ ಗಳಿಸಿದ್ದಾರೆ.

ಭಾವೈಕ್ಯೆತೆಗೆ ಹೆಸರು ವಾಸಿ:

ಪ್ರತಿವರ್ಷವು ಪ್ರತಿಷ್ಠಾಪಿತ ಗಣೇಶ ಮೂರ್ತಿ ಒಂದು ವರ್ಷದಂತೆ ಇನ್ನೊಂದು ವರ್ಷದಲ್ಲಿ ವಿಭಿನ್ನವಾಗಿ ವಿವಿಧ ಅವತಾರಗಳಲ್ಲಿ ವೈವಿದ್ಯಮಯವಾಗಿ ಆಚರಿಕೊಂಡು ಬಂದಿರುವುದು ವಿಶೇಷ. ಹಿಂದಿನ ಕೆಲ ವರ್ಷಗಳ ಹಿಂದೆ ತೆಂಗಿನ ಕಾಯಿ, ಯಡೆಯೂರು ಸಿದ್ದಲಿಂಗೇಶ್ವರ, ಪುಟ್ಟರಾಜ ಕವಿ ಗವಾಯಿಗಳ ಮೂರ್ತಿ ಸೇರಿದಂತೆ ಇನ್ನೂ ಅನೇಕ ವಿಭಿನ್ನ ಗಣೇಶನನ್ನು ಕೂಡಿಸುತ್ತಾ ಬಂದಿದ್ದಾರೆ. ಹಳೆ ಬಜಾರದ ಗಣಪ ಎಂದರೆ ಪ್ರತಿ ವರ್ಷ ಒಂದಾಲ್ಲ ಒಂದು ರೀತಿ ವೈಶ್ಯಷ್ಠತೆಯಿಂದ ಕೂಡಿರಬೇಕು ಎಂಬ ಛಲದಿಂದ ವಿಘ್ನ ವಿನಾಯಕನನ್ನು ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಅದೇ ಪ್ರೀತಿ, ಅದೇ ವಿಶ್ವಾಸ ಮೇಳೈಸಿದ್ದು ಅದರಲ್ಲೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣ ಗೆಯಲ್ಲು ವಿಶೇಷತೆ ಉಳಿಸಿಕೊಂಡು ಬರುವ ಮೂಲಕ ಭಾವೈಕ್ಯೆತೆ ಸಾರುತ್ತಿದ್ದಾರೆ.

ಹಿನ್ನೆಯಲ್ಲಿ: ಗುಡಗೇರಿಯ ದ್ಯಾಮವ್ವನ ಗುಡಿಗೆ ಸಂತ ಶಿಶುನಾಳ ಶರೀಫರು ಹಾಗೂ ಅವರ ಗುರುಗಳಾದ ಗುರುಗೋವಿಂದ ಭಟ್ಟರು ಹೋಗಿದ್ದ ಸಂದರ್ಭದಲ್ಲಿ ಅವರ ಬಳಿ ಇದ್ದ (ಮದ್ಯ ) ಶಂಕರಿ ಖಾಲಿಯಾಗಿರುತ್ತದೆ. ಆವಾಗ ಅವರ ಹತ್ತಿರ ದುಡ್ಡುನೂ ಇಲ್ಲದ ಬಗ್ಗೆ ಗೋಂವಿದ ಭಟ್ಟರಿಗೆ ಸಂತ ಶಿಶು ಶರೀಫಜ್ಜನವರು ಹೇಳುತ್ತಾರೆ. ಆ ಸಂದರ್ಭದಲ್ಲಿ ಶ್ರೀದ್ಯಾಮವ್ವನ ಬಳಿ ಶರೀಪಜ್ಜನವರು ದ್ಯಾಮವ್ವ ನ ಬೇಡಿಕೊಂಡಾಗ ದ್ಯಾಮವ್ವ ದೇವರು ಪ್ರತ್ಯಕ್ಷಳಾಗಿ ಅವರಿಗೆ ನತ್ತು (ಮೂಗತಿ) ಕೊಡುತ್ತಾಳೆ. ಅವಾಗ ಅದನ್ನು ಕೊಟ್ಟು ಅದರಿಂದ ಅವರು (ಮದ್ಯ) ಶಂಕರಿ ಸರಾಯಿ ಖರೀದಿಸಿ ತಂದು ಸೇವೆನೆ ಮಾಡಿ ದ್ಯಾಮವ್ವನ ಗುಡಿಯಲ್ಲಿ ಮಲಗಿರುತ್ತಾರೆ.

ಬೆಳಿಗ್ಗೆ ಪೂಜಾರಿಯೂ ಪೂಜೆ ಮಾಡುವಾಗ ದೇವಿಯ ಮೂಗಿನಲ್ಲಿ ನತ್ತು ಕಾಣ ಸುವದಿಲ್ಲ. ಆಗ ಗ್ರಾಮಸ್ಥರು ಗುರು, ಶಿಷ್ಯರನ್ನು ಕರೆದು ವಿಚಾರಿಸಿದಾಗ ಪನಃ ಆ ನತ್ತು(ಮೂಗತಿ) ದೇವಿಯ ಮೂಗಿನಲಿರುತ್ತದೆ. ಆದನ್ನು ಕಂಡು ಗ್ರಾಮಸ್ಥರು ಆಶ್ಚರ್ಯಗೊಂಡು ಬಗ್ಗೆ ಇತಿಹಾಸ ತಿಳಿದುಕೊಂಡ ನಾವುಗಳು ಅದೇ ಹೊಲಿಕೆಯಲ್ಲಿ ಪಟ್ಟಣದ ಆರಾಧ್ಯ ದೇವಿತೆ ಹಾಗೂ ಗ್ರಾಮದೇವೆತೆ ಶ್ರೀದ್ಯಾಮವ್ವದೇವಿ ದೇವಸ್ಥಾನವನ್ನು ಹೊಲುವ ಪ್ರತಿರೂಪ ಪ್ರತಿಷ್ಠಾಪಿಸಿ, ದೇವಸ್ಥಾನದ ಕಟ್ಟೆಯ ಮೇಲೆ ಶ್ರೀಗಣೇಶ ನು ತಲೆಗೆ ರೂಮಾಲು ಸುತ್ತಿಕೊಂಡು ಕಟ್ಟಿಯ ಮೇಲೆ ಕುಳಿತಿರುವುದು ಮತ್ತು ಈಶ್ವರ ಮೂರ್ತಿ ಗಮನ ಸೆಳೆಯುತ್ತಿದೆ.

ಅದರಂತೆ, ಕಟ್ಟೆಯ ಬಲಭಾಗದಲ್ಲಿ ಸಂತ ಶಿಶುನಾಳ ಶರಿಫಜ್ಜನವರ ಪ್ರತಿರೂಪ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ ಪಿ ಜೆ ಅಬ್ದುಲ್ ಕಲಂರವರ ಮೂರ್ತಿ ಸ್ಥಾಪಿಸಲಾಗಿದೆ.

ಇದನ್ನೂ ಓದಿ: Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಆಕರ್ಷಣೆಯ ಕೇಂದ್ರ ಬಿಂದುವಾಗಿ ಸರ್ವಧರ್ಮದವರು ಸೌರ್ಹಾದತೆಯಿಂದ ಗಣೇಶೋತ್ಸವವನ್ನು ಆಚರಿಕೊಂಡು ಬರಲಾಗುತ್ತಿದೆ ಎಂದು ಶ್ರೀಧರ ಎನ್ ಘೋರ್ಪಡೆ, ಅನ್ವರ್ ಅತ್ತಾರ್, ಅಮಿನುದ್ದಿನ್ ಮುಲ್ಲಾ, ಸಂತೋಷ ಸರಗಣಚಾರಿ, ಬಸವರಾಜ ವಣಗೇರಿ, ರವಿ ಅಗಳಕೇರಿ, ಕಳಕಪ್ಪ ಬಸಿರಿಗಿಡದ, ಬಸವರಾಜ ಗುತ್ತೂರು, ಸಂಗಮೇಶ ಕುರ್ನಾಳ, ಶಿವಕುಮಾರ , ಗೋಪಾಲ ಶೆಟ್ಟರ್, ವಸಂತ ರಾಯ್ಕರ್ ಹಾಗೂ ಇತರರು ತಿಳಿಸಿದರು.

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ