ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿಪಡಿಸಿದ ಇನ್ಸೂರೆನ್ಸ ಕಂಪನಿಯವರು ಬ್ರಹ್ಮಾಂಡ ಬ್ರಷ್ಟಾಚಾರದಲ್ಲಿ ತೊಡಗಿದ್ದು ತಕ್ಷಣ ಸರಕಾರ ಈ ಹಗರಣವನ್ನು ಸಿ.ಬಿ.ಐ ಇಲ್ಲವೆ ಸಿ.ಐ.ಡಿ ತನಿಖೆಗೊಳಪಡಿಸಿ ರೈತರಿಗೆ ಹಲವಾರು ವರ್ಷಗಳಿಂದ ಆಗಿರುವ ಮೋಸಕ್ಕೆ ನ್ಯಾಯ ದೊರಕಿಸಿಕೊಂಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.

ಅವರು ನಗರದ ತಹಶೀಲ್ದಾರ ಕಚೇರಿ ಮುಂದೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಘಟಕ ಹಾಗೂ ಇಲಕಲ್ ತಾಲೂಕು ಘಟಕದ ನೇತ್ರತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ನಂತರ ಮಾತನಾಡಿದರು.

ಇಲಕಲ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವರಗಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆಗಳಾದ ಈರುಳ್ಳಿ, ಗೋವಿನಜೋಳ, ಸಜ್ಜೆ, ತೊಗರಿ, ಹೆಸರು,ಹತ್ತಿ, ಜೋಳ, ಮೆಣಸಿನಕಾಯಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆಯ ವಿವಿಧ ಬೆಳೆಗಳು ನೀರುಪಾಲಾಗಿದ್ದು, ರೈತರು ಈ ಬೆಳೆಗಳನ್ನು ಬೆಳೆಯಲು ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ರೈತರಿಗೆ ಸರಕಾರ ಯಾವುದೇ ತಾಂತ್ರಿಕ ತೊಂದರೆ ನೆಪ ಹೇಳದೆ, ಸರಕಾರ ಬೆಳೆ ಹಾನಿಯಾದ ಜಮೀನಗಳ ಸಮೀಕ್ಷೆ ನಡೆಸಿ ನ್ಯಾಯೋಚಿತ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹ ಪಡಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ, ರೈತರಿಗೆ ಅತ್ಯಂತ ಲಾಭದಾಯಕವಾಗಿದ್ದು. ಆದರೆ, ಹೋಬಳಿವಾರು ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಪಾವತಿಗೆ ಅವಕಾಶ ನೀಡಿದ್ದು ಎಲ್ಲ ಬೆಳೆಗಳಿಗೆ ವಿಮೆ ಪಾವತಿಸಲು ಅವಕಾಶ ನೀಡಬೇಕು. ಬೆಳೆ ವಿಮೆ ಪಾವತಿಸುವ ಅವಧಿಯನ್ನು ಮುಂದುವರೆಸಬೇಕು, ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಒತ್ತಾಯಿಸಿದರು.

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆಗಳಿಗೆ ಆರ್.ಸಿ.ಎಪ್.ಜೈಕಿಸಾನ್ ದ ಜುವಾರಿ ಯೂರಿಯಾ ರಸಗೊಬ್ಬರ ಕೊರತೆಯಾಗಿದ್ದು ಈಗ ಅವಶಕತೆ ಇದ್ದು ತಕ್ಷಣ ಪೂರೈಸಬೇಕು. ಅತಿವೃಷ್ಡಿಯಿಂದಾಗಿ ಮನೆಗಳು ಬೀಳುತ್ತಿದ್ದು ಮರು ನಿರ್ಮಾಣಕ್ಕೆ ಪರಿಹಾರ ಒದಗಿಸಬೇಕು.ಈ ಮೇಲ್ಕಾಣಿಸಿದ ಎಲ್ಲ ಬೇಡಿಕೆಗಳನ್ಬು ಶೀಘ್ರದಲ್ಲಿ ಈಡೇರಿಸಬೇಕೆಂದು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರೈತರು ಉಗ್ರಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪಾಧ್ಯಕ್ಷ ಚಂದ್ರು ಗೌಡರ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಗುಡಗುಂಟಿ, ದುರೀಣರಾದ ಬಸವರಾಜ ಅಂಗಡಿ,ಶರಷು ಗುಡಿಹಾಳ, ಬಸವರಾಜ ಕಂದಕೂರ, ರಾಚನಗೌಡ ಪಾಟೀಲ, ವೆಂಕಟೇಶ ಗದಗಿ, ವಿಶ್ವನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ