ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿಪಡಿಸಿದ ಇನ್ಸೂರೆನ್ಸ ಕಂಪನಿಯವರು ಬ್ರಹ್ಮಾಂಡ ಬ್ರಷ್ಟಾಚಾರದಲ್ಲಿ ತೊಡಗಿದ್ದು ತಕ್ಷಣ ಸರಕಾರ ಈ ಹಗರಣವನ್ನು ಸಿ.ಬಿ.ಐ ಇಲ್ಲವೆ ಸಿ.ಐ.ಡಿ ತನಿಖೆಗೊಳಪಡಿಸಿ ರೈತರಿಗೆ ಹಲವಾರು ವರ್ಷಗಳಿಂದ ಆಗಿರುವ ಮೋಸಕ್ಕೆ ನ್ಯಾಯ ದೊರಕಿಸಿಕೊಂಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.

ಅವರು ನಗರದ ತಹಶೀಲ್ದಾರ ಕಚೇರಿ ಮುಂದೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಘಟಕ ಹಾಗೂ ಇಲಕಲ್ ತಾಲೂಕು ಘಟಕದ ನೇತ್ರತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ನಂತರ ಮಾತನಾಡಿದರು.

ಇಲಕಲ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವರಗಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆಗಳಾದ ಈರುಳ್ಳಿ, ಗೋವಿನಜೋಳ, ಸಜ್ಜೆ, ತೊಗರಿ, ಹೆಸರು,ಹತ್ತಿ, ಜೋಳ, ಮೆಣಸಿನಕಾಯಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆಯ ವಿವಿಧ ಬೆಳೆಗಳು ನೀರುಪಾಲಾಗಿದ್ದು, ರೈತರು ಈ ಬೆಳೆಗಳನ್ನು ಬೆಳೆಯಲು ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ರೈತರಿಗೆ ಸರಕಾರ ಯಾವುದೇ ತಾಂತ್ರಿಕ ತೊಂದರೆ ನೆಪ ಹೇಳದೆ, ಸರಕಾರ ಬೆಳೆ ಹಾನಿಯಾದ ಜಮೀನಗಳ ಸಮೀಕ್ಷೆ ನಡೆಸಿ ನ್ಯಾಯೋಚಿತ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹ ಪಡಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ, ರೈತರಿಗೆ ಅತ್ಯಂತ ಲಾಭದಾಯಕವಾಗಿದ್ದು. ಆದರೆ, ಹೋಬಳಿವಾರು ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಪಾವತಿಗೆ ಅವಕಾಶ ನೀಡಿದ್ದು ಎಲ್ಲ ಬೆಳೆಗಳಿಗೆ ವಿಮೆ ಪಾವತಿಸಲು ಅವಕಾಶ ನೀಡಬೇಕು. ಬೆಳೆ ವಿಮೆ ಪಾವತಿಸುವ ಅವಧಿಯನ್ನು ಮುಂದುವರೆಸಬೇಕು, ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಒತ್ತಾಯಿಸಿದರು.

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆಗಳಿಗೆ ಆರ್.ಸಿ.ಎಪ್.ಜೈಕಿಸಾನ್ ದ ಜುವಾರಿ ಯೂರಿಯಾ ರಸಗೊಬ್ಬರ ಕೊರತೆಯಾಗಿದ್ದು ಈಗ ಅವಶಕತೆ ಇದ್ದು ತಕ್ಷಣ ಪೂರೈಸಬೇಕು. ಅತಿವೃಷ್ಡಿಯಿಂದಾಗಿ ಮನೆಗಳು ಬೀಳುತ್ತಿದ್ದು ಮರು ನಿರ್ಮಾಣಕ್ಕೆ ಪರಿಹಾರ ಒದಗಿಸಬೇಕು.ಈ ಮೇಲ್ಕಾಣಿಸಿದ ಎಲ್ಲ ಬೇಡಿಕೆಗಳನ್ಬು ಶೀಘ್ರದಲ್ಲಿ ಈಡೇರಿಸಬೇಕೆಂದು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರೈತರು ಉಗ್ರಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪಾಧ್ಯಕ್ಷ ಚಂದ್ರು ಗೌಡರ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಗುಡಗುಂಟಿ, ದುರೀಣರಾದ ಬಸವರಾಜ ಅಂಗಡಿ,ಶರಷು ಗುಡಿಹಾಳ, ಬಸವರಾಜ ಕಂದಕೂರ, ರಾಚನಗೌಡ ಪಾಟೀಲ, ವೆಂಕಟೇಶ ಗದಗಿ, ವಿಶ್ವನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ