ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿಪಡಿಸಿದ ಇನ್ಸೂರೆನ್ಸ ಕಂಪನಿಯವರು ಬ್ರಹ್ಮಾಂಡ ಬ್ರಷ್ಟಾಚಾರದಲ್ಲಿ ತೊಡಗಿದ್ದು ತಕ್ಷಣ ಸರಕಾರ ಈ ಹಗರಣವನ್ನು ಸಿ.ಬಿ.ಐ ಇಲ್ಲವೆ ಸಿ.ಐ.ಡಿ ತನಿಖೆಗೊಳಪಡಿಸಿ ರೈತರಿಗೆ ಹಲವಾರು ವರ್ಷಗಳಿಂದ ಆಗಿರುವ ಮೋಸಕ್ಕೆ ನ್ಯಾಯ ದೊರಕಿಸಿಕೊಂಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.

ಅವರು ನಗರದ ತಹಶೀಲ್ದಾರ ಕಚೇರಿ ಮುಂದೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಘಟಕ ಹಾಗೂ ಇಲಕಲ್ ತಾಲೂಕು ಘಟಕದ ನೇತ್ರತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ನಂತರ ಮಾತನಾಡಿದರು.

ಇಲಕಲ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವರಗಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆಗಳಾದ ಈರುಳ್ಳಿ, ಗೋವಿನಜೋಳ, ಸಜ್ಜೆ, ತೊಗರಿ, ಹೆಸರು,ಹತ್ತಿ, ಜೋಳ, ಮೆಣಸಿನಕಾಯಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆಯ ವಿವಿಧ ಬೆಳೆಗಳು ನೀರುಪಾಲಾಗಿದ್ದು, ರೈತರು ಈ ಬೆಳೆಗಳನ್ನು ಬೆಳೆಯಲು ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ರೈತರಿಗೆ ಸರಕಾರ ಯಾವುದೇ ತಾಂತ್ರಿಕ ತೊಂದರೆ ನೆಪ ಹೇಳದೆ, ಸರಕಾರ ಬೆಳೆ ಹಾನಿಯಾದ ಜಮೀನಗಳ ಸಮೀಕ್ಷೆ ನಡೆಸಿ ನ್ಯಾಯೋಚಿತ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹ ಪಡಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ, ರೈತರಿಗೆ ಅತ್ಯಂತ ಲಾಭದಾಯಕವಾಗಿದ್ದು. ಆದರೆ, ಹೋಬಳಿವಾರು ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಪಾವತಿಗೆ ಅವಕಾಶ ನೀಡಿದ್ದು ಎಲ್ಲ ಬೆಳೆಗಳಿಗೆ ವಿಮೆ ಪಾವತಿಸಲು ಅವಕಾಶ ನೀಡಬೇಕು. ಬೆಳೆ ವಿಮೆ ಪಾವತಿಸುವ ಅವಧಿಯನ್ನು ಮುಂದುವರೆಸಬೇಕು, ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಒತ್ತಾಯಿಸಿದರು.

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆಗಳಿಗೆ ಆರ್.ಸಿ.ಎಪ್.ಜೈಕಿಸಾನ್ ದ ಜುವಾರಿ ಯೂರಿಯಾ ರಸಗೊಬ್ಬರ ಕೊರತೆಯಾಗಿದ್ದು ಈಗ ಅವಶಕತೆ ಇದ್ದು ತಕ್ಷಣ ಪೂರೈಸಬೇಕು. ಅತಿವೃಷ್ಡಿಯಿಂದಾಗಿ ಮನೆಗಳು ಬೀಳುತ್ತಿದ್ದು ಮರು ನಿರ್ಮಾಣಕ್ಕೆ ಪರಿಹಾರ ಒದಗಿಸಬೇಕು.ಈ ಮೇಲ್ಕಾಣಿಸಿದ ಎಲ್ಲ ಬೇಡಿಕೆಗಳನ್ಬು ಶೀಘ್ರದಲ್ಲಿ ಈಡೇರಿಸಬೇಕೆಂದು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರೈತರು ಉಗ್ರಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪಾಧ್ಯಕ್ಷ ಚಂದ್ರು ಗೌಡರ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಗುಡಗುಂಟಿ, ದುರೀಣರಾದ ಬಸವರಾಜ ಅಂಗಡಿ,ಶರಷು ಗುಡಿಹಾಳ, ಬಸವರಾಜ ಕಂದಕೂರ, ರಾಚನಗೌಡ ಪಾಟೀಲ, ವೆಂಕಟೇಶ ಗದಗಿ, ವಿಶ್ವನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ