ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿಪಡಿಸಿದ ಇನ್ಸೂರೆನ್ಸ ಕಂಪನಿಯವರು ಬ್ರಹ್ಮಾಂಡ ಬ್ರಷ್ಟಾಚಾರದಲ್ಲಿ ತೊಡಗಿದ್ದು ತಕ್ಷಣ ಸರಕಾರ ಈ ಹಗರಣವನ್ನು ಸಿ.ಬಿ.ಐ ಇಲ್ಲವೆ ಸಿ.ಐ.ಡಿ ತನಿಖೆಗೊಳಪಡಿಸಿ ರೈತರಿಗೆ ಹಲವಾರು ವರ್ಷಗಳಿಂದ ಆಗಿರುವ ಮೋಸಕ್ಕೆ ನ್ಯಾಯ ದೊರಕಿಸಿಕೊಂಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.

ಅವರು ನಗರದ ತಹಶೀಲ್ದಾರ ಕಚೇರಿ ಮುಂದೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಘಟಕ ಹಾಗೂ ಇಲಕಲ್ ತಾಲೂಕು ಘಟಕದ ನೇತ್ರತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ನಂತರ ಮಾತನಾಡಿದರು.

ಇಲಕಲ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವರಗಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆಗಳಾದ ಈರುಳ್ಳಿ, ಗೋವಿನಜೋಳ, ಸಜ್ಜೆ, ತೊಗರಿ, ಹೆಸರು,ಹತ್ತಿ, ಜೋಳ, ಮೆಣಸಿನಕಾಯಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆಯ ವಿವಿಧ ಬೆಳೆಗಳು ನೀರುಪಾಲಾಗಿದ್ದು, ರೈತರು ಈ ಬೆಳೆಗಳನ್ನು ಬೆಳೆಯಲು ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ರೈತರಿಗೆ ಸರಕಾರ ಯಾವುದೇ ತಾಂತ್ರಿಕ ತೊಂದರೆ ನೆಪ ಹೇಳದೆ, ಸರಕಾರ ಬೆಳೆ ಹಾನಿಯಾದ ಜಮೀನಗಳ ಸಮೀಕ್ಷೆ ನಡೆಸಿ ನ್ಯಾಯೋಚಿತ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹ ಪಡಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ, ರೈತರಿಗೆ ಅತ್ಯಂತ ಲಾಭದಾಯಕವಾಗಿದ್ದು. ಆದರೆ, ಹೋಬಳಿವಾರು ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಪಾವತಿಗೆ ಅವಕಾಶ ನೀಡಿದ್ದು ಎಲ್ಲ ಬೆಳೆಗಳಿಗೆ ವಿಮೆ ಪಾವತಿಸಲು ಅವಕಾಶ ನೀಡಬೇಕು. ಬೆಳೆ ವಿಮೆ ಪಾವತಿಸುವ ಅವಧಿಯನ್ನು ಮುಂದುವರೆಸಬೇಕು, ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಒತ್ತಾಯಿಸಿದರು.

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆಗಳಿಗೆ ಆರ್.ಸಿ.ಎಪ್.ಜೈಕಿಸಾನ್ ದ ಜುವಾರಿ ಯೂರಿಯಾ ರಸಗೊಬ್ಬರ ಕೊರತೆಯಾಗಿದ್ದು ಈಗ ಅವಶಕತೆ ಇದ್ದು ತಕ್ಷಣ ಪೂರೈಸಬೇಕು. ಅತಿವೃಷ್ಡಿಯಿಂದಾಗಿ ಮನೆಗಳು ಬೀಳುತ್ತಿದ್ದು ಮರು ನಿರ್ಮಾಣಕ್ಕೆ ಪರಿಹಾರ ಒದಗಿಸಬೇಕು.ಈ ಮೇಲ್ಕಾಣಿಸಿದ ಎಲ್ಲ ಬೇಡಿಕೆಗಳನ್ಬು ಶೀಘ್ರದಲ್ಲಿ ಈಡೇರಿಸಬೇಕೆಂದು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರೈತರು ಉಗ್ರಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪಾಧ್ಯಕ್ಷ ಚಂದ್ರು ಗೌಡರ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಗುಡಗುಂಟಿ, ದುರೀಣರಾದ ಬಸವರಾಜ ಅಂಗಡಿ,ಶರಷು ಗುಡಿಹಾಳ, ಬಸವರಾಜ ಕಂದಕೂರ, ರಾಚನಗೌಡ ಪಾಟೀಲ, ವೆಂಕಟೇಶ ಗದಗಿ, ವಿಶ್ವನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ