Is it wrong to question the Prime Ministers of the country?: Minister Lad

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ಧಾರವಾಡ, ಜುಲೈ 14: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಹುಲ್‌ ಗಾಂಧಿ, ಇಂದಿರಾ ಗಾಂಧಿ, ನೆಹರು ಬಗ್ಗೆ ಮಾತನಾಡಬಹುದು. ಪ್ರಪಂಚದ ಎಲ್ಲ ನಾಯಕರ ಬಗ್ಗೆ ಮಾತನಾಡಬಹುದು. ಆದರೆ ಕಾಂಗ್ರೆಸ್‌ನವರು ಮಾತ್ರ ಅವರಿಗೆ ಏನೂ ಕೇಳಬಾರದು. ಇವರಿಗೆ ಸರಿಯಾದ ಒಂದೇ ಪ್ರಶ್ನೆ ಕೇಳಬಾರದು. ಮುಜುಗರ ಆಗುವ ಪ್ರಶ್ನೆ ಕೇಳಬಾರದು. ಕೇಳಿದರೆ ಸಂತೋಷ್‌ ಲಾಡ್‌ ಹಾಗೆ ಮಾತನಾಡುತ್ತಾನೆ. ಹೀಗೆ ಮಾತನಾಡುತ್ತಾನೆ ಎಂದು ಹೇಳ್ತಾರೆ ಎಂದು ಹೇಳಿದರು.

ಟ್ರಂಪ್‌ ಯಾರ ಫ್ರೆಂಡ್‌
ಭಾರತ ಮತ್ತು ಪಾಕಿಸ್ತನ ನಡುವಿನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕಳೆದ ನಲವತ್ತು ಐವತ್ತು ದಿನಗಳಲ್ಲಿ ಹಲವಾರು ಬಾರಿ ಹೇಳಿದ್ದಾರೆ. ಹಾಗಾದರೆ ಟ್ರಂಪ್‌ ಯಾರ ಫ್ರೆಂಡ್‌. ಟ್ರಂಪ್‌ ಹೇಳಿಕೆ ಬಗ್ಗೆ ಕೇಂದ್ರದ ಯಾವುದೇ ಸಚಿವರು, ಹೋಗಲಿ ಪ್ರಧಾನಿ ಇದಕ್ಕೆ ಉತ್ತರ ಕೊಡುತ್ತಿಲ್ಲ. ಇದನ್ನು ಪ್ರಶ್ನೆ ಮಾಡಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಮೋದಿ ಅವರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಏನು ವಾಗ್ದಾನ ಮಾಡಿದ್ರು. ಅದನ್ನು ನಾವು ಯಾವಾಗಲೂ ಪ್ರಶ್ನೆ ಮಾಡ್ತ ಇದ್ದೇವೆ. ಅವರಿಗೂ ನಮಗೂ ಯಾವುದೇ ವೈಯಕ್ತಿಯ ಅಜೆಂಡಾ ಇಲ್ಲ. ಆಗ ಇವರು ಸ್ಥಳೀಯ ವಿಷಯ ಮಾತ್ರ ಮಾತನಾಡಬೇಕು ಎನ್ನುತ್ತಾರೆ. ನಮ್ಮ ದೇಶದ ಪ್ರಧಾನಿಗೆ ಯಾರೇ ಪ್ರಶ್ನೆ ಮಾಡುವ ಹಕ್ಕು ಇದೆ. ಆ ಆವಕಾಶ ಚಲಾಯಿಸುತ್ತಿದ್ದೇವೆ. ನಾನು ಕೇಳುವ ಪ್ರಶ್ನೆಯಲ್ಲಿ ತಪ್ಪಿದ್ದರೆ ತಿದ್ದಿಕೊಳ್ಳುವೆ ಎಂದರು.

ಭಾರತಕ್ಕಿಂತ ಮೋದಿ ವರ್ಚಸ್ಸು ದೊಡ್ಡದಾಯ್ತಾ?
ಭಾರತಕ್ಕಿಂತ ಮೋದಿ ಅವರ ವರ್ಚಸ್ಸು ದೊಡ್ಡದಾ? ಈ ದೇಶ ಬರೀ ಕಾಂಗ್ರೆಸ್‌ ಬಿಜೆಪಿಯದ್ದಲ್ಲ. ದೇಶ ಎಲ್ಲರಿಗೂ ಸೇರಿದ್ದು. ಮೋದಿ ಅವರು ಕೇವಲ ಈ ದೇಶದ ಪ್ರಧಾನಿ ಅಷ್ಟೇ ಎಂದರು.

ಭಾರತದ ಸಾಧನೆ ಏನು
ಕಳೆದ ಹನ್ನೊಂದು ವರ್ಷದಲ್ಲಿ ಭಾರತ ಯಾವುದರಲ್ಲಿ ಮುಂದೆ ಇದೆ. ಏನು ಸಾಧನೆ ಮಾಡಿದೆ. ಯಾವ ಇಲಾಖೆಯಲ್ಲಿ ಸಾಧನೆ ಮಾಡಿದೆ ಎಂಬುದನ್ನು ತೋರಿಸಲಿ. ಡಾ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ̇87 ನೇ ರ್ಯಾಂಕಿಂಗ್‌ ನಲ್ಲಿ ಇದ್ದ ಭಾರತ ಇಂದು 150ನೇ ರ್ಯಾಂಕಿಂಗ್‌ಗೆ ಇಳಿದಿದೆ. ಇದು ನಾಚಿಕೆಗೇಡು ಅಲ್ಲವೇ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲಿ ಇಂಗ್ಲಿಷ್‌ ಮಾತನಾಡುವವರು ಇಲ್ಲವೇ
ಪ್ರಧಾನಿ ಮೋದಿ ಅವರು ಈವರೆಗೆ 90 ದೇಶಕ್ಕೆ ಹೋಗಿದ್ದಾರೆ. ಶಶಿತರೂರ್‌ ಅವರು ಇವರಿಗೆ ಯಾಕೆ ಬೇಕು. ಇವರು ವಿಶ್ವಗುರು ಅಲ್ಲವೇ. ಬಿಜೆಪಿಯಲ್ಲಿ ಇಂಗ್ಲಿಷ್‌ ನಲ್ಲಿ ಸಮರ್ಥವಾಗಿ ಮಾತನಾಡುವವರು ಯಾರು ಇಲ್ಲವೇ. ಮೋದಿ ಅವರ ಕಾಲದಲ್ಲಿ ಭಾರತಕ್ಕೆ ವಿಶ್ವದ ಬೆಂಬಲದ ಕಡಿಮೆ ಆಗಿದೆ ಎಂದು ಹೇಳಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ