Is it wrong to question the Prime Ministers of the country?: Minister Lad

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ಧಾರವಾಡ, ಜುಲೈ 14: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಹುಲ್‌ ಗಾಂಧಿ, ಇಂದಿರಾ ಗಾಂಧಿ, ನೆಹರು ಬಗ್ಗೆ ಮಾತನಾಡಬಹುದು. ಪ್ರಪಂಚದ ಎಲ್ಲ ನಾಯಕರ ಬಗ್ಗೆ ಮಾತನಾಡಬಹುದು. ಆದರೆ ಕಾಂಗ್ರೆಸ್‌ನವರು ಮಾತ್ರ ಅವರಿಗೆ ಏನೂ ಕೇಳಬಾರದು. ಇವರಿಗೆ ಸರಿಯಾದ ಒಂದೇ ಪ್ರಶ್ನೆ ಕೇಳಬಾರದು. ಮುಜುಗರ ಆಗುವ ಪ್ರಶ್ನೆ ಕೇಳಬಾರದು. ಕೇಳಿದರೆ ಸಂತೋಷ್‌ ಲಾಡ್‌ ಹಾಗೆ ಮಾತನಾಡುತ್ತಾನೆ. ಹೀಗೆ ಮಾತನಾಡುತ್ತಾನೆ ಎಂದು ಹೇಳ್ತಾರೆ ಎಂದು ಹೇಳಿದರು.

ಟ್ರಂಪ್‌ ಯಾರ ಫ್ರೆಂಡ್‌
ಭಾರತ ಮತ್ತು ಪಾಕಿಸ್ತನ ನಡುವಿನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕಳೆದ ನಲವತ್ತು ಐವತ್ತು ದಿನಗಳಲ್ಲಿ ಹಲವಾರು ಬಾರಿ ಹೇಳಿದ್ದಾರೆ. ಹಾಗಾದರೆ ಟ್ರಂಪ್‌ ಯಾರ ಫ್ರೆಂಡ್‌. ಟ್ರಂಪ್‌ ಹೇಳಿಕೆ ಬಗ್ಗೆ ಕೇಂದ್ರದ ಯಾವುದೇ ಸಚಿವರು, ಹೋಗಲಿ ಪ್ರಧಾನಿ ಇದಕ್ಕೆ ಉತ್ತರ ಕೊಡುತ್ತಿಲ್ಲ. ಇದನ್ನು ಪ್ರಶ್ನೆ ಮಾಡಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಮೋದಿ ಅವರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಏನು ವಾಗ್ದಾನ ಮಾಡಿದ್ರು. ಅದನ್ನು ನಾವು ಯಾವಾಗಲೂ ಪ್ರಶ್ನೆ ಮಾಡ್ತ ಇದ್ದೇವೆ. ಅವರಿಗೂ ನಮಗೂ ಯಾವುದೇ ವೈಯಕ್ತಿಯ ಅಜೆಂಡಾ ಇಲ್ಲ. ಆಗ ಇವರು ಸ್ಥಳೀಯ ವಿಷಯ ಮಾತ್ರ ಮಾತನಾಡಬೇಕು ಎನ್ನುತ್ತಾರೆ. ನಮ್ಮ ದೇಶದ ಪ್ರಧಾನಿಗೆ ಯಾರೇ ಪ್ರಶ್ನೆ ಮಾಡುವ ಹಕ್ಕು ಇದೆ. ಆ ಆವಕಾಶ ಚಲಾಯಿಸುತ್ತಿದ್ದೇವೆ. ನಾನು ಕೇಳುವ ಪ್ರಶ್ನೆಯಲ್ಲಿ ತಪ್ಪಿದ್ದರೆ ತಿದ್ದಿಕೊಳ್ಳುವೆ ಎಂದರು.

ಭಾರತಕ್ಕಿಂತ ಮೋದಿ ವರ್ಚಸ್ಸು ದೊಡ್ಡದಾಯ್ತಾ?
ಭಾರತಕ್ಕಿಂತ ಮೋದಿ ಅವರ ವರ್ಚಸ್ಸು ದೊಡ್ಡದಾ? ಈ ದೇಶ ಬರೀ ಕಾಂಗ್ರೆಸ್‌ ಬಿಜೆಪಿಯದ್ದಲ್ಲ. ದೇಶ ಎಲ್ಲರಿಗೂ ಸೇರಿದ್ದು. ಮೋದಿ ಅವರು ಕೇವಲ ಈ ದೇಶದ ಪ್ರಧಾನಿ ಅಷ್ಟೇ ಎಂದರು.

ಭಾರತದ ಸಾಧನೆ ಏನು
ಕಳೆದ ಹನ್ನೊಂದು ವರ್ಷದಲ್ಲಿ ಭಾರತ ಯಾವುದರಲ್ಲಿ ಮುಂದೆ ಇದೆ. ಏನು ಸಾಧನೆ ಮಾಡಿದೆ. ಯಾವ ಇಲಾಖೆಯಲ್ಲಿ ಸಾಧನೆ ಮಾಡಿದೆ ಎಂಬುದನ್ನು ತೋರಿಸಲಿ. ಡಾ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ̇87 ನೇ ರ್ಯಾಂಕಿಂಗ್‌ ನಲ್ಲಿ ಇದ್ದ ಭಾರತ ಇಂದು 150ನೇ ರ್ಯಾಂಕಿಂಗ್‌ಗೆ ಇಳಿದಿದೆ. ಇದು ನಾಚಿಕೆಗೇಡು ಅಲ್ಲವೇ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲಿ ಇಂಗ್ಲಿಷ್‌ ಮಾತನಾಡುವವರು ಇಲ್ಲವೇ
ಪ್ರಧಾನಿ ಮೋದಿ ಅವರು ಈವರೆಗೆ 90 ದೇಶಕ್ಕೆ ಹೋಗಿದ್ದಾರೆ. ಶಶಿತರೂರ್‌ ಅವರು ಇವರಿಗೆ ಯಾಕೆ ಬೇಕು. ಇವರು ವಿಶ್ವಗುರು ಅಲ್ಲವೇ. ಬಿಜೆಪಿಯಲ್ಲಿ ಇಂಗ್ಲಿಷ್‌ ನಲ್ಲಿ ಸಮರ್ಥವಾಗಿ ಮಾತನಾಡುವವರು ಯಾರು ಇಲ್ಲವೇ. ಮೋದಿ ಅವರ ಕಾಲದಲ್ಲಿ ಭಾರತಕ್ಕೆ ವಿಶ್ವದ ಬೆಂಬಲದ ಕಡಿಮೆ ಆಗಿದೆ ಎಂದು ಹೇಳಿದರು.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ