Is it wrong to question the Prime Ministers of the country?: Minister Lad

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ಧಾರವಾಡ, ಜುಲೈ 14: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಹುಲ್‌ ಗಾಂಧಿ, ಇಂದಿರಾ ಗಾಂಧಿ, ನೆಹರು ಬಗ್ಗೆ ಮಾತನಾಡಬಹುದು. ಪ್ರಪಂಚದ ಎಲ್ಲ ನಾಯಕರ ಬಗ್ಗೆ ಮಾತನಾಡಬಹುದು. ಆದರೆ ಕಾಂಗ್ರೆಸ್‌ನವರು ಮಾತ್ರ ಅವರಿಗೆ ಏನೂ ಕೇಳಬಾರದು. ಇವರಿಗೆ ಸರಿಯಾದ ಒಂದೇ ಪ್ರಶ್ನೆ ಕೇಳಬಾರದು. ಮುಜುಗರ ಆಗುವ ಪ್ರಶ್ನೆ ಕೇಳಬಾರದು. ಕೇಳಿದರೆ ಸಂತೋಷ್‌ ಲಾಡ್‌ ಹಾಗೆ ಮಾತನಾಡುತ್ತಾನೆ. ಹೀಗೆ ಮಾತನಾಡುತ್ತಾನೆ ಎಂದು ಹೇಳ್ತಾರೆ ಎಂದು ಹೇಳಿದರು.

ಟ್ರಂಪ್‌ ಯಾರ ಫ್ರೆಂಡ್‌
ಭಾರತ ಮತ್ತು ಪಾಕಿಸ್ತನ ನಡುವಿನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕಳೆದ ನಲವತ್ತು ಐವತ್ತು ದಿನಗಳಲ್ಲಿ ಹಲವಾರು ಬಾರಿ ಹೇಳಿದ್ದಾರೆ. ಹಾಗಾದರೆ ಟ್ರಂಪ್‌ ಯಾರ ಫ್ರೆಂಡ್‌. ಟ್ರಂಪ್‌ ಹೇಳಿಕೆ ಬಗ್ಗೆ ಕೇಂದ್ರದ ಯಾವುದೇ ಸಚಿವರು, ಹೋಗಲಿ ಪ್ರಧಾನಿ ಇದಕ್ಕೆ ಉತ್ತರ ಕೊಡುತ್ತಿಲ್ಲ. ಇದನ್ನು ಪ್ರಶ್ನೆ ಮಾಡಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಮೋದಿ ಅವರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಏನು ವಾಗ್ದಾನ ಮಾಡಿದ್ರು. ಅದನ್ನು ನಾವು ಯಾವಾಗಲೂ ಪ್ರಶ್ನೆ ಮಾಡ್ತ ಇದ್ದೇವೆ. ಅವರಿಗೂ ನಮಗೂ ಯಾವುದೇ ವೈಯಕ್ತಿಯ ಅಜೆಂಡಾ ಇಲ್ಲ. ಆಗ ಇವರು ಸ್ಥಳೀಯ ವಿಷಯ ಮಾತ್ರ ಮಾತನಾಡಬೇಕು ಎನ್ನುತ್ತಾರೆ. ನಮ್ಮ ದೇಶದ ಪ್ರಧಾನಿಗೆ ಯಾರೇ ಪ್ರಶ್ನೆ ಮಾಡುವ ಹಕ್ಕು ಇದೆ. ಆ ಆವಕಾಶ ಚಲಾಯಿಸುತ್ತಿದ್ದೇವೆ. ನಾನು ಕೇಳುವ ಪ್ರಶ್ನೆಯಲ್ಲಿ ತಪ್ಪಿದ್ದರೆ ತಿದ್ದಿಕೊಳ್ಳುವೆ ಎಂದರು.

ಭಾರತಕ್ಕಿಂತ ಮೋದಿ ವರ್ಚಸ್ಸು ದೊಡ್ಡದಾಯ್ತಾ?
ಭಾರತಕ್ಕಿಂತ ಮೋದಿ ಅವರ ವರ್ಚಸ್ಸು ದೊಡ್ಡದಾ? ಈ ದೇಶ ಬರೀ ಕಾಂಗ್ರೆಸ್‌ ಬಿಜೆಪಿಯದ್ದಲ್ಲ. ದೇಶ ಎಲ್ಲರಿಗೂ ಸೇರಿದ್ದು. ಮೋದಿ ಅವರು ಕೇವಲ ಈ ದೇಶದ ಪ್ರಧಾನಿ ಅಷ್ಟೇ ಎಂದರು.

ಭಾರತದ ಸಾಧನೆ ಏನು
ಕಳೆದ ಹನ್ನೊಂದು ವರ್ಷದಲ್ಲಿ ಭಾರತ ಯಾವುದರಲ್ಲಿ ಮುಂದೆ ಇದೆ. ಏನು ಸಾಧನೆ ಮಾಡಿದೆ. ಯಾವ ಇಲಾಖೆಯಲ್ಲಿ ಸಾಧನೆ ಮಾಡಿದೆ ಎಂಬುದನ್ನು ತೋರಿಸಲಿ. ಡಾ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ̇87 ನೇ ರ್ಯಾಂಕಿಂಗ್‌ ನಲ್ಲಿ ಇದ್ದ ಭಾರತ ಇಂದು 150ನೇ ರ್ಯಾಂಕಿಂಗ್‌ಗೆ ಇಳಿದಿದೆ. ಇದು ನಾಚಿಕೆಗೇಡು ಅಲ್ಲವೇ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲಿ ಇಂಗ್ಲಿಷ್‌ ಮಾತನಾಡುವವರು ಇಲ್ಲವೇ
ಪ್ರಧಾನಿ ಮೋದಿ ಅವರು ಈವರೆಗೆ 90 ದೇಶಕ್ಕೆ ಹೋಗಿದ್ದಾರೆ. ಶಶಿತರೂರ್‌ ಅವರು ಇವರಿಗೆ ಯಾಕೆ ಬೇಕು. ಇವರು ವಿಶ್ವಗುರು ಅಲ್ಲವೇ. ಬಿಜೆಪಿಯಲ್ಲಿ ಇಂಗ್ಲಿಷ್‌ ನಲ್ಲಿ ಸಮರ್ಥವಾಗಿ ಮಾತನಾಡುವವರು ಯಾರು ಇಲ್ಲವೇ. ಮೋದಿ ಅವರ ಕಾಲದಲ್ಲಿ ಭಾರತಕ್ಕೆ ವಿಶ್ವದ ಬೆಂಬಲದ ಕಡಿಮೆ ಆಗಿದೆ ಎಂದು ಹೇಳಿದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ