Is it wrong to question the Prime Ministers of the country?: Minister Lad

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ?: ಸಚಿವ ಲಾಡ್

ಧಾರವಾಡ, ಜುಲೈ 14: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಹುಲ್‌ ಗಾಂಧಿ, ಇಂದಿರಾ ಗಾಂಧಿ, ನೆಹರು ಬಗ್ಗೆ ಮಾತನಾಡಬಹುದು. ಪ್ರಪಂಚದ ಎಲ್ಲ ನಾಯಕರ ಬಗ್ಗೆ ಮಾತನಾಡಬಹುದು. ಆದರೆ ಕಾಂಗ್ರೆಸ್‌ನವರು ಮಾತ್ರ ಅವರಿಗೆ ಏನೂ ಕೇಳಬಾರದು. ಇವರಿಗೆ ಸರಿಯಾದ ಒಂದೇ ಪ್ರಶ್ನೆ ಕೇಳಬಾರದು. ಮುಜುಗರ ಆಗುವ ಪ್ರಶ್ನೆ ಕೇಳಬಾರದು. ಕೇಳಿದರೆ ಸಂತೋಷ್‌ ಲಾಡ್‌ ಹಾಗೆ ಮಾತನಾಡುತ್ತಾನೆ. ಹೀಗೆ ಮಾತನಾಡುತ್ತಾನೆ ಎಂದು ಹೇಳ್ತಾರೆ ಎಂದು ಹೇಳಿದರು.

ಟ್ರಂಪ್‌ ಯಾರ ಫ್ರೆಂಡ್‌
ಭಾರತ ಮತ್ತು ಪಾಕಿಸ್ತನ ನಡುವಿನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕಳೆದ ನಲವತ್ತು ಐವತ್ತು ದಿನಗಳಲ್ಲಿ ಹಲವಾರು ಬಾರಿ ಹೇಳಿದ್ದಾರೆ. ಹಾಗಾದರೆ ಟ್ರಂಪ್‌ ಯಾರ ಫ್ರೆಂಡ್‌. ಟ್ರಂಪ್‌ ಹೇಳಿಕೆ ಬಗ್ಗೆ ಕೇಂದ್ರದ ಯಾವುದೇ ಸಚಿವರು, ಹೋಗಲಿ ಪ್ರಧಾನಿ ಇದಕ್ಕೆ ಉತ್ತರ ಕೊಡುತ್ತಿಲ್ಲ. ಇದನ್ನು ಪ್ರಶ್ನೆ ಮಾಡಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಮೋದಿ ಅವರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಏನು ವಾಗ್ದಾನ ಮಾಡಿದ್ರು. ಅದನ್ನು ನಾವು ಯಾವಾಗಲೂ ಪ್ರಶ್ನೆ ಮಾಡ್ತ ಇದ್ದೇವೆ. ಅವರಿಗೂ ನಮಗೂ ಯಾವುದೇ ವೈಯಕ್ತಿಯ ಅಜೆಂಡಾ ಇಲ್ಲ. ಆಗ ಇವರು ಸ್ಥಳೀಯ ವಿಷಯ ಮಾತ್ರ ಮಾತನಾಡಬೇಕು ಎನ್ನುತ್ತಾರೆ. ನಮ್ಮ ದೇಶದ ಪ್ರಧಾನಿಗೆ ಯಾರೇ ಪ್ರಶ್ನೆ ಮಾಡುವ ಹಕ್ಕು ಇದೆ. ಆ ಆವಕಾಶ ಚಲಾಯಿಸುತ್ತಿದ್ದೇವೆ. ನಾನು ಕೇಳುವ ಪ್ರಶ್ನೆಯಲ್ಲಿ ತಪ್ಪಿದ್ದರೆ ತಿದ್ದಿಕೊಳ್ಳುವೆ ಎಂದರು.

ಭಾರತಕ್ಕಿಂತ ಮೋದಿ ವರ್ಚಸ್ಸು ದೊಡ್ಡದಾಯ್ತಾ?
ಭಾರತಕ್ಕಿಂತ ಮೋದಿ ಅವರ ವರ್ಚಸ್ಸು ದೊಡ್ಡದಾ? ಈ ದೇಶ ಬರೀ ಕಾಂಗ್ರೆಸ್‌ ಬಿಜೆಪಿಯದ್ದಲ್ಲ. ದೇಶ ಎಲ್ಲರಿಗೂ ಸೇರಿದ್ದು. ಮೋದಿ ಅವರು ಕೇವಲ ಈ ದೇಶದ ಪ್ರಧಾನಿ ಅಷ್ಟೇ ಎಂದರು.

ಭಾರತದ ಸಾಧನೆ ಏನು
ಕಳೆದ ಹನ್ನೊಂದು ವರ್ಷದಲ್ಲಿ ಭಾರತ ಯಾವುದರಲ್ಲಿ ಮುಂದೆ ಇದೆ. ಏನು ಸಾಧನೆ ಮಾಡಿದೆ. ಯಾವ ಇಲಾಖೆಯಲ್ಲಿ ಸಾಧನೆ ಮಾಡಿದೆ ಎಂಬುದನ್ನು ತೋರಿಸಲಿ. ಡಾ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ̇87 ನೇ ರ್ಯಾಂಕಿಂಗ್‌ ನಲ್ಲಿ ಇದ್ದ ಭಾರತ ಇಂದು 150ನೇ ರ್ಯಾಂಕಿಂಗ್‌ಗೆ ಇಳಿದಿದೆ. ಇದು ನಾಚಿಕೆಗೇಡು ಅಲ್ಲವೇ ಎಂದು ವ್ಯಂಗ್ಯವಾಡಿದರು.

ಬಿಜೆಪಿಯಲ್ಲಿ ಇಂಗ್ಲಿಷ್‌ ಮಾತನಾಡುವವರು ಇಲ್ಲವೇ
ಪ್ರಧಾನಿ ಮೋದಿ ಅವರು ಈವರೆಗೆ 90 ದೇಶಕ್ಕೆ ಹೋಗಿದ್ದಾರೆ. ಶಶಿತರೂರ್‌ ಅವರು ಇವರಿಗೆ ಯಾಕೆ ಬೇಕು. ಇವರು ವಿಶ್ವಗುರು ಅಲ್ಲವೇ. ಬಿಜೆಪಿಯಲ್ಲಿ ಇಂಗ್ಲಿಷ್‌ ನಲ್ಲಿ ಸಮರ್ಥವಾಗಿ ಮಾತನಾಡುವವರು ಯಾರು ಇಲ್ಲವೇ. ಮೋದಿ ಅವರ ಕಾಲದಲ್ಲಿ ಭಾರತಕ್ಕೆ ವಿಶ್ವದ ಬೆಂಬಲದ ಕಡಿಮೆ ಆಗಿದೆ ಎಂದು ಹೇಳಿದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ