ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ ಹಾಗೂ ಸರಕಾರದಿಂದ ವಂತಿಗೆ ಸ್ವೀಕರಿಸದೆ ದಿಗಂಭರೇಶ್ವರಮಠದ ಸದ್ಭಕ್ತರು ಸ್ವಂತ ದೇಣಿಗೆ ಸಂಗ್ರಹಿಸಿ 50 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಪ್ಪರ ಪಡಿಯಮ್ಮ ತಾಯಿ ಸಭಾ ಭವನವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ನಾವು ಯಾವುದೇ ಆಸ್ತಿಪಾಸ್ತಿ ಗಳಿಸಿದರೂ ನಮ್ಮ ಅಂತ್ಯವಾದಾಗ ನಮ್ಮ ಹಿಂದೆ ಬರುವದಿಲ್ಲ ಆದರೇ ನಾವು ಸಮಾಜದ ಅಭಿವೃದ್ದಿಗಾಗಿ, ಧಾನ ಧರ್ಮ ಸತ್ಕಾರ್ಯಗಳು, ಪರೋಪಕಾರ ಸೇವೆ ಮಾಡಿದರೇ, ಅದೇ ಸೇವೆ ಭಗವಂತನಿಗೆ ಅರ್ಪಿತವಾಗುತ್ತದೆ ಇದಕ್ಕೆ ಸಾಕ್ಷಿ ನಾಗರಾಳದ ದಿಗಂಬರೇಶ್ವರ ಮಠದ ಸದ್ಭಕರ ಸೇವೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ತಮ್ಮ ಪಾದಸ್ಪರ್ಶ ಮಾಡುತ್ತಾರೊ ಅದು ಪುಣ್ಯಕ್ಷೇತ್ರವಾಗುತ್ತದೆ.ಇಂದಿನ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ನಾವೆಲ್ಲ ಜನರು ಅರಿತು ಅರಿಯದೇ ಮಾಡಿದ ತಪ್ಪುಗಳನ್ನು ಇಂತಹ ಪುಣ್ಯ ಕ್ಷೇತ್ರಗಳಗೆ ಆಗಮಿಸಿ ಪುಣ್ಯ ಕಾರ್ಯಗಳನ್ನು ಮಾಡಿ ಕಳೆದುಕೊಳ್ಳಬೇಕು ಎಂದರು.

ನಾಗರಾಳ ವಿಗಂಬರೇಶ್ವರ ಮಠ ತನ್ನದೆಯಾದ ದೈವಿಕ ಶಕ್ತಿಯನ್ನು ಹೊಂದಿದೆ. ಸಿದ್ದಿ ಪುರುಷರಾಗಿರುವಂತ ದಿಗಂಬರೇಶ್ವರರು ಸಿದ್ಧಸಾಧಕರಾಗಿದ್ದರು ಈಗಿನ ಶ್ರೀ ಮಠದ ಪೀಠಾಧಿಕಾರಿ ಶೇಷಪ್ಪಯ್ಯ ಸ್ವಾಮಿಗಳು ಭಕ್ರರಿಂದ ಯಾವುದೇ ಫಲಾಪೇಕ್ಷೆ ಬಯಸದೇ ಶ್ರೀ ಮಠ ಇದು ಭಕ್ತರ ಮಠ ನಾನು ಭಗವಂತನ ಸೇವಕ ಎಂದು ತ್ಯಾಗ ಮನೋಭಾವನೆಯುಳ್ಳವರಾಗಿದ್ದು ಸದ್ಭಕ್ತರಿಗೆ ಸದಾ ಒಳಿತನ್ನು ಬಯಸುತ್ತಾರೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಹೇಳಿದರು.

ಈ ಸಂದರ್ಭದಲ್ಲಿ ಇಂಗಳೇಶ್ವರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ,ಬನಹಟ್ಟಿ ಹಿರೇಮಠ ಶರಣಬಸವ ಶಿವಾಚಾರ್ಯ ಸ್ವಾಮೀಜಿ,, ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ,ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಸ್ವಾಮೀಜಿ, ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಸ್ವಾಮೀಜಿ ಸುನಗದ ಅನ್ನಪೂರ್ಣೇಶ್ವರಿ ಬೃಹನ್ಮಠ ಶಿವಾನಂದ ಸ್ವಾಮೀಜಿ, ಬೀಳಗಿ ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಸಿದ್ದಾಪೂರ ಮಾನಪ್ಪಯ್ಯ ಹುಚ್ಚಪ್ಪಯ್ಯ ಸ್ವಾಮೀಜಿ,ಮತ್ತು ನಾಗರಾಳ ಸಕಲ ಸದ್ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕಿಂತ ಮೊದಲು ಕಪ್ಪರ ಪಡಿಯಮ್ಮಗೆ ರುದ್ರಾಭಿಷೇಕ, ಹೋಮ-ಹವನ, ಸಕಲ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಸಕಲ ವಾಧ್ಯವೃಂದದೊಂದಿಗೆ 501 ಸುಮಂಗಲಿಯರಿಂದ ಕುಂಭ ಮೇಳ ಹಾಗೂ ನಾಡದೇವಿ ಮೂರ್ತಿಯ ಭವ್ಯ ಮರುವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಠದ ಆವರಣಕ್ಕೆ ಆಗಮಿಸಿತು. 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ