ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ ಹಾಗೂ ಸರಕಾರದಿಂದ ವಂತಿಗೆ ಸ್ವೀಕರಿಸದೆ ದಿಗಂಭರೇಶ್ವರಮಠದ ಸದ್ಭಕ್ತರು ಸ್ವಂತ ದೇಣಿಗೆ ಸಂಗ್ರಹಿಸಿ 50 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಪ್ಪರ ಪಡಿಯಮ್ಮ ತಾಯಿ ಸಭಾ ಭವನವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ನಾವು ಯಾವುದೇ ಆಸ್ತಿಪಾಸ್ತಿ ಗಳಿಸಿದರೂ ನಮ್ಮ ಅಂತ್ಯವಾದಾಗ ನಮ್ಮ ಹಿಂದೆ ಬರುವದಿಲ್ಲ ಆದರೇ ನಾವು ಸಮಾಜದ ಅಭಿವೃದ್ದಿಗಾಗಿ, ಧಾನ ಧರ್ಮ ಸತ್ಕಾರ್ಯಗಳು, ಪರೋಪಕಾರ ಸೇವೆ ಮಾಡಿದರೇ, ಅದೇ ಸೇವೆ ಭಗವಂತನಿಗೆ ಅರ್ಪಿತವಾಗುತ್ತದೆ ಇದಕ್ಕೆ ಸಾಕ್ಷಿ ನಾಗರಾಳದ ದಿಗಂಬರೇಶ್ವರ ಮಠದ ಸದ್ಭಕರ ಸೇವೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ತಮ್ಮ ಪಾದಸ್ಪರ್ಶ ಮಾಡುತ್ತಾರೊ ಅದು ಪುಣ್ಯಕ್ಷೇತ್ರವಾಗುತ್ತದೆ.ಇಂದಿನ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ನಾವೆಲ್ಲ ಜನರು ಅರಿತು ಅರಿಯದೇ ಮಾಡಿದ ತಪ್ಪುಗಳನ್ನು ಇಂತಹ ಪುಣ್ಯ ಕ್ಷೇತ್ರಗಳಗೆ ಆಗಮಿಸಿ ಪುಣ್ಯ ಕಾರ್ಯಗಳನ್ನು ಮಾಡಿ ಕಳೆದುಕೊಳ್ಳಬೇಕು ಎಂದರು.

ನಾಗರಾಳ ವಿಗಂಬರೇಶ್ವರ ಮಠ ತನ್ನದೆಯಾದ ದೈವಿಕ ಶಕ್ತಿಯನ್ನು ಹೊಂದಿದೆ. ಸಿದ್ದಿ ಪುರುಷರಾಗಿರುವಂತ ದಿಗಂಬರೇಶ್ವರರು ಸಿದ್ಧಸಾಧಕರಾಗಿದ್ದರು ಈಗಿನ ಶ್ರೀ ಮಠದ ಪೀಠಾಧಿಕಾರಿ ಶೇಷಪ್ಪಯ್ಯ ಸ್ವಾಮಿಗಳು ಭಕ್ರರಿಂದ ಯಾವುದೇ ಫಲಾಪೇಕ್ಷೆ ಬಯಸದೇ ಶ್ರೀ ಮಠ ಇದು ಭಕ್ತರ ಮಠ ನಾನು ಭಗವಂತನ ಸೇವಕ ಎಂದು ತ್ಯಾಗ ಮನೋಭಾವನೆಯುಳ್ಳವರಾಗಿದ್ದು ಸದ್ಭಕ್ತರಿಗೆ ಸದಾ ಒಳಿತನ್ನು ಬಯಸುತ್ತಾರೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಹೇಳಿದರು.

ಈ ಸಂದರ್ಭದಲ್ಲಿ ಇಂಗಳೇಶ್ವರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ,ಬನಹಟ್ಟಿ ಹಿರೇಮಠ ಶರಣಬಸವ ಶಿವಾಚಾರ್ಯ ಸ್ವಾಮೀಜಿ,, ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ,ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಸ್ವಾಮೀಜಿ, ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಸ್ವಾಮೀಜಿ ಸುನಗದ ಅನ್ನಪೂರ್ಣೇಶ್ವರಿ ಬೃಹನ್ಮಠ ಶಿವಾನಂದ ಸ್ವಾಮೀಜಿ, ಬೀಳಗಿ ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಸಿದ್ದಾಪೂರ ಮಾನಪ್ಪಯ್ಯ ಹುಚ್ಚಪ್ಪಯ್ಯ ಸ್ವಾಮೀಜಿ,ಮತ್ತು ನಾಗರಾಳ ಸಕಲ ಸದ್ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕಿಂತ ಮೊದಲು ಕಪ್ಪರ ಪಡಿಯಮ್ಮಗೆ ರುದ್ರಾಭಿಷೇಕ, ಹೋಮ-ಹವನ, ಸಕಲ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಸಕಲ ವಾಧ್ಯವೃಂದದೊಂದಿಗೆ 501 ಸುಮಂಗಲಿಯರಿಂದ ಕುಂಭ ಮೇಳ ಹಾಗೂ ನಾಡದೇವಿ ಮೂರ್ತಿಯ ಭವ್ಯ ಮರುವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಠದ ಆವರಣಕ್ಕೆ ಆಗಮಿಸಿತು. 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ