ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ ಹಾಗೂ ಸರಕಾರದಿಂದ ವಂತಿಗೆ ಸ್ವೀಕರಿಸದೆ ದಿಗಂಭರೇಶ್ವರಮಠದ ಸದ್ಭಕ್ತರು ಸ್ವಂತ ದೇಣಿಗೆ ಸಂಗ್ರಹಿಸಿ 50 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಪ್ಪರ ಪಡಿಯಮ್ಮ ತಾಯಿ ಸಭಾ ಭವನವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ನಾವು ಯಾವುದೇ ಆಸ್ತಿಪಾಸ್ತಿ ಗಳಿಸಿದರೂ ನಮ್ಮ ಅಂತ್ಯವಾದಾಗ ನಮ್ಮ ಹಿಂದೆ ಬರುವದಿಲ್ಲ ಆದರೇ ನಾವು ಸಮಾಜದ ಅಭಿವೃದ್ದಿಗಾಗಿ, ಧಾನ ಧರ್ಮ ಸತ್ಕಾರ್ಯಗಳು, ಪರೋಪಕಾರ ಸೇವೆ ಮಾಡಿದರೇ, ಅದೇ ಸೇವೆ ಭಗವಂತನಿಗೆ ಅರ್ಪಿತವಾಗುತ್ತದೆ ಇದಕ್ಕೆ ಸಾಕ್ಷಿ ನಾಗರಾಳದ ದಿಗಂಬರೇಶ್ವರ ಮಠದ ಸದ್ಭಕರ ಸೇವೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ತಮ್ಮ ಪಾದಸ್ಪರ್ಶ ಮಾಡುತ್ತಾರೊ ಅದು ಪುಣ್ಯಕ್ಷೇತ್ರವಾಗುತ್ತದೆ.ಇಂದಿನ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ನಾವೆಲ್ಲ ಜನರು ಅರಿತು ಅರಿಯದೇ ಮಾಡಿದ ತಪ್ಪುಗಳನ್ನು ಇಂತಹ ಪುಣ್ಯ ಕ್ಷೇತ್ರಗಳಗೆ ಆಗಮಿಸಿ ಪುಣ್ಯ ಕಾರ್ಯಗಳನ್ನು ಮಾಡಿ ಕಳೆದುಕೊಳ್ಳಬೇಕು ಎಂದರು.

ನಾಗರಾಳ ವಿಗಂಬರೇಶ್ವರ ಮಠ ತನ್ನದೆಯಾದ ದೈವಿಕ ಶಕ್ತಿಯನ್ನು ಹೊಂದಿದೆ. ಸಿದ್ದಿ ಪುರುಷರಾಗಿರುವಂತ ದಿಗಂಬರೇಶ್ವರರು ಸಿದ್ಧಸಾಧಕರಾಗಿದ್ದರು ಈಗಿನ ಶ್ರೀ ಮಠದ ಪೀಠಾಧಿಕಾರಿ ಶೇಷಪ್ಪಯ್ಯ ಸ್ವಾಮಿಗಳು ಭಕ್ರರಿಂದ ಯಾವುದೇ ಫಲಾಪೇಕ್ಷೆ ಬಯಸದೇ ಶ್ರೀ ಮಠ ಇದು ಭಕ್ತರ ಮಠ ನಾನು ಭಗವಂತನ ಸೇವಕ ಎಂದು ತ್ಯಾಗ ಮನೋಭಾವನೆಯುಳ್ಳವರಾಗಿದ್ದು ಸದ್ಭಕ್ತರಿಗೆ ಸದಾ ಒಳಿತನ್ನು ಬಯಸುತ್ತಾರೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಹೇಳಿದರು.

ಈ ಸಂದರ್ಭದಲ್ಲಿ ಇಂಗಳೇಶ್ವರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ,ಬನಹಟ್ಟಿ ಹಿರೇಮಠ ಶರಣಬಸವ ಶಿವಾಚಾರ್ಯ ಸ್ವಾಮೀಜಿ,, ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ,ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಸ್ವಾಮೀಜಿ, ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಸ್ವಾಮೀಜಿ ಸುನಗದ ಅನ್ನಪೂರ್ಣೇಶ್ವರಿ ಬೃಹನ್ಮಠ ಶಿವಾನಂದ ಸ್ವಾಮೀಜಿ, ಬೀಳಗಿ ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಸಿದ್ದಾಪೂರ ಮಾನಪ್ಪಯ್ಯ ಹುಚ್ಚಪ್ಪಯ್ಯ ಸ್ವಾಮೀಜಿ,ಮತ್ತು ನಾಗರಾಳ ಸಕಲ ಸದ್ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕಿಂತ ಮೊದಲು ಕಪ್ಪರ ಪಡಿಯಮ್ಮಗೆ ರುದ್ರಾಭಿಷೇಕ, ಹೋಮ-ಹವನ, ಸಕಲ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಸಕಲ ವಾಧ್ಯವೃಂದದೊಂದಿಗೆ 501 ಸುಮಂಗಲಿಯರಿಂದ ಕುಂಭ ಮೇಳ ಹಾಗೂ ನಾಡದೇವಿ ಮೂರ್ತಿಯ ಭವ್ಯ ಮರುವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಠದ ಆವರಣಕ್ಕೆ ಆಗಮಿಸಿತು. 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ