DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

ಕನಕಪುರ, (ಆಗಸ್ಟ್.11); ಕುಮಾರಸ್ವಾಮಿ ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಅವರು ಮುಖ್ಯಮಂತ್ರಿ ಆಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕರಿಸಿದ್ದೆ, ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕುಳಿತುಕೊಳ್ಳಲು ಸಾಧ್ಯವೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕನಕಪುರದ ನಿವಾಸದಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜಿಲ್ಲೆಯ ಜನ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನನ್ನ ನೋಡಲು ಬೆಂಗಳೂರಿಗೆ ಬರುವುದನ್ನು ತಪ್ಪಿಸುವ ಸಲುವಾಗಿ ಇನ್ನು ಮುಂದೆ ತಿಂಗಳಲ್ಲಿ ಪ್ರತಿ ಎರಡು ಮತ್ತು ಮೂರನೇ ಶನಿವಾರ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಈ ವೇಳೆ ಕುಮಾರಸ್ವಾಮಿ ಹಾಗೂ ನಿಮ್ಮ ನಡುವೆ ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇದನ್ನು ಆರಂಭಿಸಿದ್ದು ಯಾರು?, ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಗುಡುಗಿದರು.

ಕಳೆದ 2-3 ವರ್ಷಗಳಿಂದ ಕುಮಾರಸ್ವಾಮಿಯಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿಮೀರಿದ್ದು ನಾನು ಎಷ್ಟು ದಿನ ಸಹಿಸಲಿ, ಅವರ ಹೇಳಿಕೆಗಳಿಗೆ ನಾನು ಉತ್ತರ ನೀಡಿದ್ದೇನೆ, ನನ್ನ ವಿರುದ್ಧ ಅವರ ಬಳಿ ಇರುವ ದಾಖಲೆಗಳನ್ನ ಆದಷ್ಟು ಬೇಗ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.

ಸದನದಲ್ಲಿ ಚರ್ಚೆ ಮಾಡಲಿ ನನ್ನ ವಿರುದ್ದ ಇಲ್ಲ- ಸಲ್ಲದ ಆರೋಪಗಳನ್ನು ಹಾದಿ-ಬೀದಿಯಲ್ಲಿ ಮಾಡುತ್ತಾ ಕಾಲ ಕಳೆಯುವ ಬದಲು ಸದನದಲ್ಲಿ ಚರ್ಚೆ ಮಾಡಲಿ, ಎಸ್‌.ಎಂ ಕೃಷ್ಣ ಅವರ ಅಳಿಯನ ಸಾವಿಗೆ ಯಾರು ಕಾರಣ ಎಂದು ಮೈಸೂರಿನಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನಾನು ಅವರ ತಂದೆ ದೇವೇಗೌಡರ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ, ನನ್ನ ಹಾಗೂಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೇನು ಗೊತ್ತು? ಅವರಿಗೆ ಹುಚ್ಚು ಹಿಡಿದಿದೆ ಎಂದು ನನಗೆ ಅನಿಸುತ್ತಿದ್ದು ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದ ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ ಎಂದು ಹೇಳಿದರು.

ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಚ್ಚಿಡಲಿ, ನಾನು ವಿಧವೆಯರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸ ಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪಿಸಿದ್ದು ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ದ ಎಫ್‌ಐ ಆರ್‌ದಾಖಲಿಸಲಿ ಎಂದು ಸವಾಲೆಸೆದರು.

ನಾನು ಯಾರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿ ಕೊಂಡಿದ್ದೇನೆ ಹೇಳಲಿ, ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೇಶ್ವ‌ರ್ ಮಾತನಾಡಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ, ಇನ್ನು ಮಾರಟವಾಗಲು ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿಸುತ್ತೇನೆ.

ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ, ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ, ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು, ನಾನು ಜೈಲಲ್ಲಿದ್ದಾಗ ಬಂದು ನನ್ನ ನೋಡಿದ್ದರು, ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನ ಮೇಲೆ, ನನ್ನ ಸಹೋದರ, ತಂಗಿ, ಪತ್ನಿ ಮೇಲೆ ಅದಿರು ಕಳ್ಳತನದ ಸುಳ್ಳು ಎಫ್‌ಐಆರ್‌ದಾಖಲಿಸಿದ್ದರು. ಅದೆಲ್ಲವನ್ನು ಮರೆತು ಅವರುಮುಖ್ಯಮಂತ್ರಿಯಾಗಲು ನೆರವಾಗಿದ್ದೆ, ಆನಂತರ ನಡೆದ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ ಎಂದರು.

ನಾನು ಪ್ರಧಾನಿ, ಮುಖ್ಯಮಂತ್ರಿಯ ಮಗನಾಗಿ ರಾಜಕೀಯಕ್ಕೆ ಬಂದಿಲ್ಲ. ನಾನು ಬಡವನಲ್ಲದಿದ್ದರೂ ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದವನು. ನನ್ನ ಆಸ್ತಿ ಮಾಹಿತಿ ತೆರೆದ ಪುಸ್ತಕದಂತೆ. ನಾನು ಬದುಕಲು ಸಾಧ್ಯವಾಗದಂತಹ ದಾಖಲೆ ಏನಿದೆಯೋ ಅದನ್ನು ಬಿಚ್ಚಿಡಲಿ. ನಾನು ಮಾಡಬಾರದ ತಪ್ಪು ಏನುಮಾಡಿದ್ದೇನೆ ತಿಳಿಸಲಿ. ನೀನು ದೆಹಲಿಯಲ್ಲಿ ನನ್ನ ವಿರುದ್ಧ ಯಾರಿಗೆ ಯಾವ ಪತ್ರ ನೀಡಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ತಂದೆ ಏನೇನು ಬರೆದಿದ್ದೀರಿ ಎಂದು ನನಗೆ ಮಾಹಿತಿ ಇದೆ,

ನನ್ನ ವಿರುದ್ಧ ದೆಹಲಿಯಲ್ಲಿ ಏನೆಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದಿದೆ. ನಾನು ಹಾಸನದಲ್ಲಿ ಪೆನ್‌ಡ್ರೈವ್ ಹಂಚಿದ್ದೇನೆ ಎಂದು ಕುಮಾರಸ್ವಾಮಿ ಯಾವ ಆಧಾರದಲ್ಲಿ ಆರೋಪ ಮಾಡಿದರು? ನಾನು ಅಂತಹ ಕೆಲಸ ಮಾಡಲು ಮೂರ್ಖನಲ್ಲ, ನಾನು ಅದನ್ನು ಚುನಾವಣೆಗೆ ಬಳಸಿಕೊಳ್ಳುವುದಾದರೆ ನೇರವಾಗಿಯೇ ಬಳಸಿಕೊಳ್ಳುತ್ತಿದ್ದೆ ಎಂದರು.

Latest News

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್ 2025-26ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಮೀನುಗಾರಿಕಾ ಇಲಾಖೆಯ ನೂತನ ಕಚೇರಿಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮ್ಮಿಶ್ರ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ ಯುವಕರು ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸುವುದರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅವರಿಗೆ