DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

ಕನಕಪುರ, (ಆಗಸ್ಟ್.11); ಕುಮಾರಸ್ವಾಮಿ ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಅವರು ಮುಖ್ಯಮಂತ್ರಿ ಆಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕರಿಸಿದ್ದೆ, ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕುಳಿತುಕೊಳ್ಳಲು ಸಾಧ್ಯವೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕನಕಪುರದ ನಿವಾಸದಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜಿಲ್ಲೆಯ ಜನ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನನ್ನ ನೋಡಲು ಬೆಂಗಳೂರಿಗೆ ಬರುವುದನ್ನು ತಪ್ಪಿಸುವ ಸಲುವಾಗಿ ಇನ್ನು ಮುಂದೆ ತಿಂಗಳಲ್ಲಿ ಪ್ರತಿ ಎರಡು ಮತ್ತು ಮೂರನೇ ಶನಿವಾರ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಈ ವೇಳೆ ಕುಮಾರಸ್ವಾಮಿ ಹಾಗೂ ನಿಮ್ಮ ನಡುವೆ ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇದನ್ನು ಆರಂಭಿಸಿದ್ದು ಯಾರು?, ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಗುಡುಗಿದರು.

ಕಳೆದ 2-3 ವರ್ಷಗಳಿಂದ ಕುಮಾರಸ್ವಾಮಿಯಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿಮೀರಿದ್ದು ನಾನು ಎಷ್ಟು ದಿನ ಸಹಿಸಲಿ, ಅವರ ಹೇಳಿಕೆಗಳಿಗೆ ನಾನು ಉತ್ತರ ನೀಡಿದ್ದೇನೆ, ನನ್ನ ವಿರುದ್ಧ ಅವರ ಬಳಿ ಇರುವ ದಾಖಲೆಗಳನ್ನ ಆದಷ್ಟು ಬೇಗ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.

ಸದನದಲ್ಲಿ ಚರ್ಚೆ ಮಾಡಲಿ ನನ್ನ ವಿರುದ್ದ ಇಲ್ಲ- ಸಲ್ಲದ ಆರೋಪಗಳನ್ನು ಹಾದಿ-ಬೀದಿಯಲ್ಲಿ ಮಾಡುತ್ತಾ ಕಾಲ ಕಳೆಯುವ ಬದಲು ಸದನದಲ್ಲಿ ಚರ್ಚೆ ಮಾಡಲಿ, ಎಸ್‌.ಎಂ ಕೃಷ್ಣ ಅವರ ಅಳಿಯನ ಸಾವಿಗೆ ಯಾರು ಕಾರಣ ಎಂದು ಮೈಸೂರಿನಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನಾನು ಅವರ ತಂದೆ ದೇವೇಗೌಡರ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ, ನನ್ನ ಹಾಗೂಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೇನು ಗೊತ್ತು? ಅವರಿಗೆ ಹುಚ್ಚು ಹಿಡಿದಿದೆ ಎಂದು ನನಗೆ ಅನಿಸುತ್ತಿದ್ದು ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದ ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ ಎಂದು ಹೇಳಿದರು.

ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಚ್ಚಿಡಲಿ, ನಾನು ವಿಧವೆಯರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸ ಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪಿಸಿದ್ದು ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ದ ಎಫ್‌ಐ ಆರ್‌ದಾಖಲಿಸಲಿ ಎಂದು ಸವಾಲೆಸೆದರು.

ನಾನು ಯಾರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿ ಕೊಂಡಿದ್ದೇನೆ ಹೇಳಲಿ, ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೇಶ್ವ‌ರ್ ಮಾತನಾಡಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ, ಇನ್ನು ಮಾರಟವಾಗಲು ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿಸುತ್ತೇನೆ.

ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ, ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ, ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು, ನಾನು ಜೈಲಲ್ಲಿದ್ದಾಗ ಬಂದು ನನ್ನ ನೋಡಿದ್ದರು, ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನ ಮೇಲೆ, ನನ್ನ ಸಹೋದರ, ತಂಗಿ, ಪತ್ನಿ ಮೇಲೆ ಅದಿರು ಕಳ್ಳತನದ ಸುಳ್ಳು ಎಫ್‌ಐಆರ್‌ದಾಖಲಿಸಿದ್ದರು. ಅದೆಲ್ಲವನ್ನು ಮರೆತು ಅವರುಮುಖ್ಯಮಂತ್ರಿಯಾಗಲು ನೆರವಾಗಿದ್ದೆ, ಆನಂತರ ನಡೆದ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ ಎಂದರು.

ನಾನು ಪ್ರಧಾನಿ, ಮುಖ್ಯಮಂತ್ರಿಯ ಮಗನಾಗಿ ರಾಜಕೀಯಕ್ಕೆ ಬಂದಿಲ್ಲ. ನಾನು ಬಡವನಲ್ಲದಿದ್ದರೂ ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದವನು. ನನ್ನ ಆಸ್ತಿ ಮಾಹಿತಿ ತೆರೆದ ಪುಸ್ತಕದಂತೆ. ನಾನು ಬದುಕಲು ಸಾಧ್ಯವಾಗದಂತಹ ದಾಖಲೆ ಏನಿದೆಯೋ ಅದನ್ನು ಬಿಚ್ಚಿಡಲಿ. ನಾನು ಮಾಡಬಾರದ ತಪ್ಪು ಏನುಮಾಡಿದ್ದೇನೆ ತಿಳಿಸಲಿ. ನೀನು ದೆಹಲಿಯಲ್ಲಿ ನನ್ನ ವಿರುದ್ಧ ಯಾರಿಗೆ ಯಾವ ಪತ್ರ ನೀಡಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ತಂದೆ ಏನೇನು ಬರೆದಿದ್ದೀರಿ ಎಂದು ನನಗೆ ಮಾಹಿತಿ ಇದೆ,

ನನ್ನ ವಿರುದ್ಧ ದೆಹಲಿಯಲ್ಲಿ ಏನೆಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದಿದೆ. ನಾನು ಹಾಸನದಲ್ಲಿ ಪೆನ್‌ಡ್ರೈವ್ ಹಂಚಿದ್ದೇನೆ ಎಂದು ಕುಮಾರಸ್ವಾಮಿ ಯಾವ ಆಧಾರದಲ್ಲಿ ಆರೋಪ ಮಾಡಿದರು? ನಾನು ಅಂತಹ ಕೆಲಸ ಮಾಡಲು ಮೂರ್ಖನಲ್ಲ, ನಾನು ಅದನ್ನು ಚುನಾವಣೆಗೆ ಬಳಸಿಕೊಳ್ಳುವುದಾದರೆ ನೇರವಾಗಿಯೇ ಬಳಸಿಕೊಳ್ಳುತ್ತಿದ್ದೆ ಎಂದರು.

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ