DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

ಕನಕಪುರ, (ಆಗಸ್ಟ್.11); ಕುಮಾರಸ್ವಾಮಿ ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಅವರು ಮುಖ್ಯಮಂತ್ರಿ ಆಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕರಿಸಿದ್ದೆ, ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕುಳಿತುಕೊಳ್ಳಲು ಸಾಧ್ಯವೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕನಕಪುರದ ನಿವಾಸದಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜಿಲ್ಲೆಯ ಜನ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನನ್ನ ನೋಡಲು ಬೆಂಗಳೂರಿಗೆ ಬರುವುದನ್ನು ತಪ್ಪಿಸುವ ಸಲುವಾಗಿ ಇನ್ನು ಮುಂದೆ ತಿಂಗಳಲ್ಲಿ ಪ್ರತಿ ಎರಡು ಮತ್ತು ಮೂರನೇ ಶನಿವಾರ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಈ ವೇಳೆ ಕುಮಾರಸ್ವಾಮಿ ಹಾಗೂ ನಿಮ್ಮ ನಡುವೆ ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇದನ್ನು ಆರಂಭಿಸಿದ್ದು ಯಾರು?, ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಗುಡುಗಿದರು.

ಕಳೆದ 2-3 ವರ್ಷಗಳಿಂದ ಕುಮಾರಸ್ವಾಮಿಯಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿಮೀರಿದ್ದು ನಾನು ಎಷ್ಟು ದಿನ ಸಹಿಸಲಿ, ಅವರ ಹೇಳಿಕೆಗಳಿಗೆ ನಾನು ಉತ್ತರ ನೀಡಿದ್ದೇನೆ, ನನ್ನ ವಿರುದ್ಧ ಅವರ ಬಳಿ ಇರುವ ದಾಖಲೆಗಳನ್ನ ಆದಷ್ಟು ಬೇಗ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.

ಸದನದಲ್ಲಿ ಚರ್ಚೆ ಮಾಡಲಿ ನನ್ನ ವಿರುದ್ದ ಇಲ್ಲ- ಸಲ್ಲದ ಆರೋಪಗಳನ್ನು ಹಾದಿ-ಬೀದಿಯಲ್ಲಿ ಮಾಡುತ್ತಾ ಕಾಲ ಕಳೆಯುವ ಬದಲು ಸದನದಲ್ಲಿ ಚರ್ಚೆ ಮಾಡಲಿ, ಎಸ್‌.ಎಂ ಕೃಷ್ಣ ಅವರ ಅಳಿಯನ ಸಾವಿಗೆ ಯಾರು ಕಾರಣ ಎಂದು ಮೈಸೂರಿನಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನಾನು ಅವರ ತಂದೆ ದೇವೇಗೌಡರ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ, ನನ್ನ ಹಾಗೂಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೇನು ಗೊತ್ತು? ಅವರಿಗೆ ಹುಚ್ಚು ಹಿಡಿದಿದೆ ಎಂದು ನನಗೆ ಅನಿಸುತ್ತಿದ್ದು ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದ ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ ಎಂದು ಹೇಳಿದರು.

ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಚ್ಚಿಡಲಿ, ನಾನು ವಿಧವೆಯರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸ ಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪಿಸಿದ್ದು ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ದ ಎಫ್‌ಐ ಆರ್‌ದಾಖಲಿಸಲಿ ಎಂದು ಸವಾಲೆಸೆದರು.

ನಾನು ಯಾರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿ ಕೊಂಡಿದ್ದೇನೆ ಹೇಳಲಿ, ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೇಶ್ವ‌ರ್ ಮಾತನಾಡಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ, ಇನ್ನು ಮಾರಟವಾಗಲು ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿಸುತ್ತೇನೆ.

ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ, ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ, ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು, ನಾನು ಜೈಲಲ್ಲಿದ್ದಾಗ ಬಂದು ನನ್ನ ನೋಡಿದ್ದರು, ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನ ಮೇಲೆ, ನನ್ನ ಸಹೋದರ, ತಂಗಿ, ಪತ್ನಿ ಮೇಲೆ ಅದಿರು ಕಳ್ಳತನದ ಸುಳ್ಳು ಎಫ್‌ಐಆರ್‌ದಾಖಲಿಸಿದ್ದರು. ಅದೆಲ್ಲವನ್ನು ಮರೆತು ಅವರುಮುಖ್ಯಮಂತ್ರಿಯಾಗಲು ನೆರವಾಗಿದ್ದೆ, ಆನಂತರ ನಡೆದ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ ಎಂದರು.

ನಾನು ಪ್ರಧಾನಿ, ಮುಖ್ಯಮಂತ್ರಿಯ ಮಗನಾಗಿ ರಾಜಕೀಯಕ್ಕೆ ಬಂದಿಲ್ಲ. ನಾನು ಬಡವನಲ್ಲದಿದ್ದರೂ ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದವನು. ನನ್ನ ಆಸ್ತಿ ಮಾಹಿತಿ ತೆರೆದ ಪುಸ್ತಕದಂತೆ. ನಾನು ಬದುಕಲು ಸಾಧ್ಯವಾಗದಂತಹ ದಾಖಲೆ ಏನಿದೆಯೋ ಅದನ್ನು ಬಿಚ್ಚಿಡಲಿ. ನಾನು ಮಾಡಬಾರದ ತಪ್ಪು ಏನುಮಾಡಿದ್ದೇನೆ ತಿಳಿಸಲಿ. ನೀನು ದೆಹಲಿಯಲ್ಲಿ ನನ್ನ ವಿರುದ್ಧ ಯಾರಿಗೆ ಯಾವ ಪತ್ರ ನೀಡಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ತಂದೆ ಏನೇನು ಬರೆದಿದ್ದೀರಿ ಎಂದು ನನಗೆ ಮಾಹಿತಿ ಇದೆ,

ನನ್ನ ವಿರುದ್ಧ ದೆಹಲಿಯಲ್ಲಿ ಏನೆಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದಿದೆ. ನಾನು ಹಾಸನದಲ್ಲಿ ಪೆನ್‌ಡ್ರೈವ್ ಹಂಚಿದ್ದೇನೆ ಎಂದು ಕುಮಾರಸ್ವಾಮಿ ಯಾವ ಆಧಾರದಲ್ಲಿ ಆರೋಪ ಮಾಡಿದರು? ನಾನು ಅಂತಹ ಕೆಲಸ ಮಾಡಲು ಮೂರ್ಖನಲ್ಲ, ನಾನು ಅದನ್ನು ಚುನಾವಣೆಗೆ ಬಳಸಿಕೊಳ್ಳುವುದಾದರೆ ನೇರವಾಗಿಯೇ ಬಳಸಿಕೊಳ್ಳುತ್ತಿದ್ದೆ ಎಂದರು.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್