DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

ಕನಕಪುರ, (ಆಗಸ್ಟ್.11); ಕುಮಾರಸ್ವಾಮಿ ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಅವರು ಮುಖ್ಯಮಂತ್ರಿ ಆಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕರಿಸಿದ್ದೆ, ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕುಳಿತುಕೊಳ್ಳಲು ಸಾಧ್ಯವೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕನಕಪುರದ ನಿವಾಸದಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜಿಲ್ಲೆಯ ಜನ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನನ್ನ ನೋಡಲು ಬೆಂಗಳೂರಿಗೆ ಬರುವುದನ್ನು ತಪ್ಪಿಸುವ ಸಲುವಾಗಿ ಇನ್ನು ಮುಂದೆ ತಿಂಗಳಲ್ಲಿ ಪ್ರತಿ ಎರಡು ಮತ್ತು ಮೂರನೇ ಶನಿವಾರ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಈ ವೇಳೆ ಕುಮಾರಸ್ವಾಮಿ ಹಾಗೂ ನಿಮ್ಮ ನಡುವೆ ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇದನ್ನು ಆರಂಭಿಸಿದ್ದು ಯಾರು?, ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಗುಡುಗಿದರು.

ಕಳೆದ 2-3 ವರ್ಷಗಳಿಂದ ಕುಮಾರಸ್ವಾಮಿಯಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿಮೀರಿದ್ದು ನಾನು ಎಷ್ಟು ದಿನ ಸಹಿಸಲಿ, ಅವರ ಹೇಳಿಕೆಗಳಿಗೆ ನಾನು ಉತ್ತರ ನೀಡಿದ್ದೇನೆ, ನನ್ನ ವಿರುದ್ಧ ಅವರ ಬಳಿ ಇರುವ ದಾಖಲೆಗಳನ್ನ ಆದಷ್ಟು ಬೇಗ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.

ಸದನದಲ್ಲಿ ಚರ್ಚೆ ಮಾಡಲಿ ನನ್ನ ವಿರುದ್ದ ಇಲ್ಲ- ಸಲ್ಲದ ಆರೋಪಗಳನ್ನು ಹಾದಿ-ಬೀದಿಯಲ್ಲಿ ಮಾಡುತ್ತಾ ಕಾಲ ಕಳೆಯುವ ಬದಲು ಸದನದಲ್ಲಿ ಚರ್ಚೆ ಮಾಡಲಿ, ಎಸ್‌.ಎಂ ಕೃಷ್ಣ ಅವರ ಅಳಿಯನ ಸಾವಿಗೆ ಯಾರು ಕಾರಣ ಎಂದು ಮೈಸೂರಿನಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನಾನು ಅವರ ತಂದೆ ದೇವೇಗೌಡರ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ, ನನ್ನ ಹಾಗೂಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೇನು ಗೊತ್ತು? ಅವರಿಗೆ ಹುಚ್ಚು ಹಿಡಿದಿದೆ ಎಂದು ನನಗೆ ಅನಿಸುತ್ತಿದ್ದು ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದ ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ ಎಂದು ಹೇಳಿದರು.

ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಚ್ಚಿಡಲಿ, ನಾನು ವಿಧವೆಯರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸ ಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪಿಸಿದ್ದು ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ದ ಎಫ್‌ಐ ಆರ್‌ದಾಖಲಿಸಲಿ ಎಂದು ಸವಾಲೆಸೆದರು.

ನಾನು ಯಾರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿ ಕೊಂಡಿದ್ದೇನೆ ಹೇಳಲಿ, ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೇಶ್ವ‌ರ್ ಮಾತನಾಡಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ, ಇನ್ನು ಮಾರಟವಾಗಲು ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿಸುತ್ತೇನೆ.

ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ, ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ, ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು, ನಾನು ಜೈಲಲ್ಲಿದ್ದಾಗ ಬಂದು ನನ್ನ ನೋಡಿದ್ದರು, ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನ ಮೇಲೆ, ನನ್ನ ಸಹೋದರ, ತಂಗಿ, ಪತ್ನಿ ಮೇಲೆ ಅದಿರು ಕಳ್ಳತನದ ಸುಳ್ಳು ಎಫ್‌ಐಆರ್‌ದಾಖಲಿಸಿದ್ದರು. ಅದೆಲ್ಲವನ್ನು ಮರೆತು ಅವರುಮುಖ್ಯಮಂತ್ರಿಯಾಗಲು ನೆರವಾಗಿದ್ದೆ, ಆನಂತರ ನಡೆದ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ ಎಂದರು.

ನಾನು ಪ್ರಧಾನಿ, ಮುಖ್ಯಮಂತ್ರಿಯ ಮಗನಾಗಿ ರಾಜಕೀಯಕ್ಕೆ ಬಂದಿಲ್ಲ. ನಾನು ಬಡವನಲ್ಲದಿದ್ದರೂ ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದವನು. ನನ್ನ ಆಸ್ತಿ ಮಾಹಿತಿ ತೆರೆದ ಪುಸ್ತಕದಂತೆ. ನಾನು ಬದುಕಲು ಸಾಧ್ಯವಾಗದಂತಹ ದಾಖಲೆ ಏನಿದೆಯೋ ಅದನ್ನು ಬಿಚ್ಚಿಡಲಿ. ನಾನು ಮಾಡಬಾರದ ತಪ್ಪು ಏನುಮಾಡಿದ್ದೇನೆ ತಿಳಿಸಲಿ. ನೀನು ದೆಹಲಿಯಲ್ಲಿ ನನ್ನ ವಿರುದ್ಧ ಯಾರಿಗೆ ಯಾವ ಪತ್ರ ನೀಡಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ತಂದೆ ಏನೇನು ಬರೆದಿದ್ದೀರಿ ಎಂದು ನನಗೆ ಮಾಹಿತಿ ಇದೆ,

ನನ್ನ ವಿರುದ್ಧ ದೆಹಲಿಯಲ್ಲಿ ಏನೆಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದಿದೆ. ನಾನು ಹಾಸನದಲ್ಲಿ ಪೆನ್‌ಡ್ರೈವ್ ಹಂಚಿದ್ದೇನೆ ಎಂದು ಕುಮಾರಸ್ವಾಮಿ ಯಾವ ಆಧಾರದಲ್ಲಿ ಆರೋಪ ಮಾಡಿದರು? ನಾನು ಅಂತಹ ಕೆಲಸ ಮಾಡಲು ಮೂರ್ಖನಲ್ಲ, ನಾನು ಅದನ್ನು ಚುನಾವಣೆಗೆ ಬಳಸಿಕೊಳ್ಳುವುದಾದರೆ ನೇರವಾಗಿಯೇ ಬಳಸಿಕೊಳ್ಳುತ್ತಿದ್ದೆ ಎಂದರು.

Latest News

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ