DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

ಕನಕಪುರ, (ಆಗಸ್ಟ್.11); ಕುಮಾರಸ್ವಾಮಿ ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಅವರು ಮುಖ್ಯಮಂತ್ರಿ ಆಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕರಿಸಿದ್ದೆ, ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕುಳಿತುಕೊಳ್ಳಲು ಸಾಧ್ಯವೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕನಕಪುರದ ನಿವಾಸದಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜಿಲ್ಲೆಯ ಜನ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನನ್ನ ನೋಡಲು ಬೆಂಗಳೂರಿಗೆ ಬರುವುದನ್ನು ತಪ್ಪಿಸುವ ಸಲುವಾಗಿ ಇನ್ನು ಮುಂದೆ ತಿಂಗಳಲ್ಲಿ ಪ್ರತಿ ಎರಡು ಮತ್ತು ಮೂರನೇ ಶನಿವಾರ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಈ ವೇಳೆ ಕುಮಾರಸ್ವಾಮಿ ಹಾಗೂ ನಿಮ್ಮ ನಡುವೆ ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇದನ್ನು ಆರಂಭಿಸಿದ್ದು ಯಾರು?, ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಗುಡುಗಿದರು.

ಕಳೆದ 2-3 ವರ್ಷಗಳಿಂದ ಕುಮಾರಸ್ವಾಮಿಯಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿಮೀರಿದ್ದು ನಾನು ಎಷ್ಟು ದಿನ ಸಹಿಸಲಿ, ಅವರ ಹೇಳಿಕೆಗಳಿಗೆ ನಾನು ಉತ್ತರ ನೀಡಿದ್ದೇನೆ, ನನ್ನ ವಿರುದ್ಧ ಅವರ ಬಳಿ ಇರುವ ದಾಖಲೆಗಳನ್ನ ಆದಷ್ಟು ಬೇಗ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.

ಸದನದಲ್ಲಿ ಚರ್ಚೆ ಮಾಡಲಿ ನನ್ನ ವಿರುದ್ದ ಇಲ್ಲ- ಸಲ್ಲದ ಆರೋಪಗಳನ್ನು ಹಾದಿ-ಬೀದಿಯಲ್ಲಿ ಮಾಡುತ್ತಾ ಕಾಲ ಕಳೆಯುವ ಬದಲು ಸದನದಲ್ಲಿ ಚರ್ಚೆ ಮಾಡಲಿ, ಎಸ್‌.ಎಂ ಕೃಷ್ಣ ಅವರ ಅಳಿಯನ ಸಾವಿಗೆ ಯಾರು ಕಾರಣ ಎಂದು ಮೈಸೂರಿನಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನಾನು ಅವರ ತಂದೆ ದೇವೇಗೌಡರ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ, ನನ್ನ ಹಾಗೂಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೇನು ಗೊತ್ತು? ಅವರಿಗೆ ಹುಚ್ಚು ಹಿಡಿದಿದೆ ಎಂದು ನನಗೆ ಅನಿಸುತ್ತಿದ್ದು ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದ ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ ಎಂದು ಹೇಳಿದರು.

ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಚ್ಚಿಡಲಿ, ನಾನು ವಿಧವೆಯರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸ ಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪಿಸಿದ್ದು ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ದ ಎಫ್‌ಐ ಆರ್‌ದಾಖಲಿಸಲಿ ಎಂದು ಸವಾಲೆಸೆದರು.

ನಾನು ಯಾರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿ ಕೊಂಡಿದ್ದೇನೆ ಹೇಳಲಿ, ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೇಶ್ವ‌ರ್ ಮಾತನಾಡಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ, ಇನ್ನು ಮಾರಟವಾಗಲು ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿಸುತ್ತೇನೆ.

ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ, ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ, ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು, ನಾನು ಜೈಲಲ್ಲಿದ್ದಾಗ ಬಂದು ನನ್ನ ನೋಡಿದ್ದರು, ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನ ಮೇಲೆ, ನನ್ನ ಸಹೋದರ, ತಂಗಿ, ಪತ್ನಿ ಮೇಲೆ ಅದಿರು ಕಳ್ಳತನದ ಸುಳ್ಳು ಎಫ್‌ಐಆರ್‌ದಾಖಲಿಸಿದ್ದರು. ಅದೆಲ್ಲವನ್ನು ಮರೆತು ಅವರುಮುಖ್ಯಮಂತ್ರಿಯಾಗಲು ನೆರವಾಗಿದ್ದೆ, ಆನಂತರ ನಡೆದ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ ಎಂದರು.

ನಾನು ಪ್ರಧಾನಿ, ಮುಖ್ಯಮಂತ್ರಿಯ ಮಗನಾಗಿ ರಾಜಕೀಯಕ್ಕೆ ಬಂದಿಲ್ಲ. ನಾನು ಬಡವನಲ್ಲದಿದ್ದರೂ ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದವನು. ನನ್ನ ಆಸ್ತಿ ಮಾಹಿತಿ ತೆರೆದ ಪುಸ್ತಕದಂತೆ. ನಾನು ಬದುಕಲು ಸಾಧ್ಯವಾಗದಂತಹ ದಾಖಲೆ ಏನಿದೆಯೋ ಅದನ್ನು ಬಿಚ್ಚಿಡಲಿ. ನಾನು ಮಾಡಬಾರದ ತಪ್ಪು ಏನುಮಾಡಿದ್ದೇನೆ ತಿಳಿಸಲಿ. ನೀನು ದೆಹಲಿಯಲ್ಲಿ ನನ್ನ ವಿರುದ್ಧ ಯಾರಿಗೆ ಯಾವ ಪತ್ರ ನೀಡಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ತಂದೆ ಏನೇನು ಬರೆದಿದ್ದೀರಿ ಎಂದು ನನಗೆ ಮಾಹಿತಿ ಇದೆ,

ನನ್ನ ವಿರುದ್ಧ ದೆಹಲಿಯಲ್ಲಿ ಏನೆಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದಿದೆ. ನಾನು ಹಾಸನದಲ್ಲಿ ಪೆನ್‌ಡ್ರೈವ್ ಹಂಚಿದ್ದೇನೆ ಎಂದು ಕುಮಾರಸ್ವಾಮಿ ಯಾವ ಆಧಾರದಲ್ಲಿ ಆರೋಪ ಮಾಡಿದರು? ನಾನು ಅಂತಹ ಕೆಲಸ ಮಾಡಲು ಮೂರ್ಖನಲ್ಲ, ನಾನು ಅದನ್ನು ಚುನಾವಣೆಗೆ ಬಳಸಿಕೊಳ್ಳುವುದಾದರೆ ನೇರವಾಗಿಯೇ ಬಳಸಿಕೊಳ್ಳುತ್ತಿದ್ದೆ ಎಂದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ