It is our merit to have performed duty where Basavanna walked: CPI Sunil Savadi

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು.

ಪಟ್ಟಣದ ಗುರು ಭವನದಲ್ಲಿ ಗುರವಾರ ನಡೆದ ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು ಬೀಳ್ಕೋಡಿಗೆ ಸಮಾರಂಭ ಹಾಗೂ ನೂತನ ಡಿವೃಎಸ್ಪಿ ಸ್ವಾಗತ  ಕಾರ್ಯಕ್ರಮದಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆಯು ಇದೀಗ ಪೂರ್ತಿಯಾಗಿ ಜನಸ್ನೇಹಿ ಪೋಲಿಸ್ ಆಗಿದೆ. ಸಂವಿಧಾನದ ಹಾಗೂ ಕಾನೂನಿನ ನಿಯಮಾವಳಿಯ ಚೌಕಟ್ಟಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು. ನಮಗೆ ನಮ್ಮ ಇಲಾಖೆಯ ಮೇಲೆ ಜವಾಬ್ದಾರಿ ಬಹಳಷ್ಟು ಇರುತ್ತದೆ. ಪೋಲಿಸ್ ರು ನೊಂದವರ, ಬಡವರಿಗೆ ನ್ಯಾಯ ಕೊಡುಸುವ ಕೆಲಸ ಮಾಡಬೇಕು.
ಹೆಂಡತಿ- ಮಕ್ಕಳ ಹೊಟ್ಟೆಗಾಗಿ ಹಾಗೂ ಕುಟುಂಭದ ಉದ್ದಾರದ ಭಾವನೆಯಿಂದ ಕೆಲಸ ಮಾಡುತ್ತಿದ್ದಾರೆ. ಅದು ವ್ಯರ್ಥ, ನಮಗಿರುವ ಶಕ್ತಿಯನ್ನು ವೈಯಕ್ತಿಕ ಬಳಸಿಕೊಳ್ಳದೆ, ಸಮಾಜ ಶಾಂತಿ ಸುವ್ಯವಸ್ಥೆಗೆ ಬಳಕೆ ಮಾಡಿದರೆ ಈ ಹುದ್ದೆಗೆ ಸೇರಿದ್ದು ಸಾರ್ಥಕವಾಗುತ್ತದೆ. ಸೇವೆಗೆ ಅವಕಾಶ ನೀಡಿದ ಹುನಗುಂದ ಇಲಕಲ್ಲ, ಅಮೀನಗಡದ ಭಾಗದ ಎಲ್ಲ ಸಾರ್ವಜನಿಕರಿಗೆ ನಮ್ಮ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಮಾತನಾಡಿ, ಕಳೆದ ಎರಡು ವರ್ಷ ಅವಧಿಯಲ್ಲಿ ಹುನಗುಂದ ಉಪವಿಭಾಗ ನನಗೆ ಅತ್ಯಂತ ಖುಷಿ ತಂದಿದೆ. ಆದರೆ ನಾವು ಹೇಗೆ ಕೆಲಸ ಮಾಡುತ್ತೇವೆ, ಅಧಿಕಾರ ಬಳಸುವುದರ  ಮೂಲಕ ನಮ್ಮ ಕೆಲಸ ಮುಖ್ಯವಾಗುತ್ತದೆ.  ಸಾರ್ವಜನಿಕರು, ರಾಜಕೀಯ ಮುಖಂಡರು, ಮಾಧ್ಯಮ ಮಿತ್ರರರು ಎಲ್ಲ ಸಹಕಾರದಿಂದಲೇ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು. ಸರ್ಕಾರಿ ಸೇವೆಯಲ್ಲಿ ಬದಲಾವಣೆಯೂ ಸಹಜ ಆದರೆ ಸರ್ಕಾರ ನಿಯಮಗಳ ಮೂಲಕ ಪೋಲಿಸ್ ಇಲಾಖೆಯೂ ಬದಲಾವಣೆಯಾಗುತ್ತಿದ್ದಂತೆ ಅದರಂತೆ ನಾವು ಬದಲಾಗಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು. ನಮ್ಮ ಕೆಲಸವನ್ನು ಶ್ರದ್ದೆಯಿಂದ ಮಾಡಿದರೆ ನಮ್ಮ ಕೆಲಸ ಸಾರ್ಥಕವಾಗುತ್ತದೆ. ನಮ್ಮ ಮೇಲಾಧಿಕಾರಿಗಳು ಸಹಕಾರದಿಂದ ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇವೆ. ಉತ್ತಮ‌ ಸಮಾಜ ನಿರ್ಮಾಣದಲ್ಲಿ  ಪೋಲಿಸ ಇಲಾಖೆಯ ಪಾತ್ರವು ಮಹತ್ವವಿದೆ ಎಂದರು.

ನೂತನ ಡಿವೈಎಸ್ಪಿ ಸಂತೋಷ ಬನ್ನಿಟ್ಟಿ ಮಾತನಾಡಿ, ಎಲ್ಲರೂ ಮೊದಲಿನಂತೆ ನಮಗೂ ಸಹಕಾರಿ ನೀಡಿ ಸಾರ್ವಜನಿಕರ ಯಾವುದೇ ಸಮಸ್ಯೆಗೆ ಪರಿಹಾರಕ್ಕೆ ನಮ್ಮ ಇಲಾಖೆಯೂ ಸ್ಪಂದಿಸುತ್ತದೆ ಎಂದು ತಿಳಿಸಿದರು.

ಕಾನಿಪ ಅಧ್ಯಕ್ಷ ಅಮರೇಶ ನಾಗೂರ, ಕಾರ್ಯದರ್ಶಿ‌ ಮಲ್ಲಿಕಾರ್ಜುನ ಹೊಸಮನಿ, ಮಾಜಿ ಸೈನಿಕ ವಿಜಯ ದಳವಾಯಿ, ಇಳಕಲ್ಲ ಪಿಎಸ್ ಐ ಎಸ್.ಆರ್.ನಾಯಕ ಮಾತನಾಡಿದರು.

ಬದಾಮಿ ಸಿಪಿಐ  ಕರಿಯಪ್ಪ ಬನ್ನಿ , ಹುನಗುಂದ ಪಿಎಸ್ಐ ಎಸ್. ಜಿ. ಆಲದಕಟ್ಟಿ , ಅಮೀನಗಡ ಪಿಎಸ್ ಐ ಜ್ಯೋತಿ ವಾಲೀಕಾರ, ಮಂಜುನಾಥ ಪಾಟೀಲ್, ಸೇರಿದಂತೆ ಇತರರು ಇದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,