ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು.

ಪಟ್ಟಣದ ಗುರು ಭವನದ ನಡೆದ ಗುರವಾರ   ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು  ಬೀಳ್ಕೋಡಿಗೆ ಸಮಾರಂಭ ಹಾಗೂ ನೂತನ ಡಿವೃಎಸ್ಪಿ ಸ್ವಾಗತ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು   ಪೋಲೀಸ್ ಇಲಾಖೆಯು ಇದೀಗ ಪೂರ್ತಿಯಾಗಿ ಜನಸ್ನೇಹಿ ಪೋಲಿಸ್ಆಗಿದೆ. ಸಂವಿಧಾನದ ಹಾಗೂ ಕಾನೂನುನಿನ ನಿಯಮಾವಳಿಯ ಚೌಕಟ್ಟಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು.ನಮಗೆ ನಮ್ಮ ಇಲಾಖೆಯ ಮೇಲೆ ಜವಾಬ್ದಾರಿ ಬಹಳಷ್ಟು ಇರುತ್ತದೆ. ಪೋಲಿಸ್ ರು ನೊಂದವರ, ಬಡವರಿಗೆ ನ್ಯಾಯ ಕೊಡುಸುವ ಕೆಲಸ ಮಾಡಬೇಕು ಎಂದರು.


ಹೆಂಡತಿ- ಮಕ್ಕಳ ಹೊಟ್ಟೆಗಾಗಿ ಹಾಗೂ ಕುಟುಂಭದ ಉದ್ದಾರದ ಭಾವನೆಯಿಂದ ಕೆಲಸ ಮಾಡುತ್ತಿದ್ದರೆ ಅದು ವ್ಯರ್ಥ, ನಮಗಿರುವ ಶಕ್ತಿಯನ್ನು ವ್ಯಯಕ್ತಿಕ ಬಳಸಿಕೊಳ್ಳದೆ. ಸಮಾಜ ಶಾಂತಿ ಸುವ್ಯವಸ್ಥೆ ಗೆ ಬಳಕೆ ಮಾಡಿದರೆ ಈ ಹುದ್ದೆಗೆ ಸೇರಿದ್ದು ಸಾರ್ಥಕ ವಾಗುತ್ತದೆ .ಸೇವೆಗೆ ಅವಕಾಶ ನೀಡಿದ ಹುನಗುಂದ ಇಲಕಲ್ಲ, ಅಮೀನಗಡದ ಭಾಗದ ಎಲ್ಲ ಸಾರ್ವಜನರಿಗೆ ನಮ್ಮ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಮಾತನಾಡಿ. ಕಳೆದ ಎರಡು ವರ್ಷ ಅವಧಿಯಲ್ಲಿ ಹುನಗುಂದ ಉಪವಿಭಾಗ ನನಗೆ ಅತ್ಯಂತ ಕುಷಿ ತಂದಿದೆ.  ಆದರೆ ನಾವು ಹೇಗೆ ಕೆಲಸ ಮಾಡುತ್ತೇವೆ ಅಧಿಕಾರ  ಬಳಸುವುದರ  ಮೂಲಕ ನಮ್ಮ ಕೆಲಸ ಮುಖ್ಯವಾಗುತ್ತದೆ.  ಸಾರ್ವಜನಿಕರು, ರಾಜಕೀಯ ಮುಖಂಡರು, ಮಾಧ್ಯಮ ಮಿತ್ರರರು ಎಲ್ಲ ಸಹಕಾರದಿಂದಲೇ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು.ಸರ್ಕಾರಿ ಸೇವೆಯಲ್ಲಿ ಬದಲಾವಣೆಯೂ ಸಹಜ ಆದರೆ ಸರ್ಕಾರ ನಿಯಮಗಳ ಮೂಲಕ ಪೋಲಿಸ್ ಇಲಾಖೆಯೂ ಬದಲಾವಣೆ ಯಾಗುತ್ತಿದ್ದಂತೆ ಅದರಂತೆ ನಾವು ಬದಲಾವಣೆ ಆಗಬೇಕು. ಸಾರ್ವಜನಿಕ ಉತ್ತಮ ಸೇವೆ ಕೊಡಬೇಕು ಎಂದರು.

ನಮ್ಮ ಕೆಲಸವನ್ನು ಶ್ರದ್ದೆ ಯಿಂದ ಮಾಡಿದರೆ ನಮ್ಮ ಕೆಲಸ ಸಾರ್ಥಕವಾಗುತ್ತದೆ. ನಮ್ಮ ಮೇಲಾಧಿಕಾರಿಗಳು ಸಹಕಾರದಿಂದ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇವೆ. ಉತ್ತಮ‌ ಸಮಾಜ ನಿರ್ಮಾಣದಲ್ಲಿ  ಪೋಲಿಸ ಇಲಾಖೆಯ ಪಾತ್ರವು ಮಹತ್ವವಿದೆ ಎಂದು ತಿಳಿಸಿದರು.

ನೂತನ ಡಿವೈಎಸ್ಪಿ ಸಂತೋಷ ಬನ್ನಿಟ್ಟಿ ಮಾತನಾಡಿ, ಎಲ್ಲರೂ ಮೊದಲಿನಂತೆ ನಮಗೂ ಸಹಕಾರಿ ನೀಡಿ ಸಾರ್ವಜನಿಕರ ಯಾವುದೇ ಸಮಸ್ಯೆಗೆ ಪರಿಹಾರಕ್ಕೆ ನಮ್ಮ ಇಲಾಖೆಯೂ ಸ್ಪಂದಿಸುತ್ತದೆ ಎಂದು ತಿಳಿಸಿದರು.

ಕಾನಿಪ ಅಧ್ಯಕ್ಷ ಅಮರೇಶ ನಾಗೂರ, ಕಾರ್ಯದರ್ಶಿ‌ ಮಲ್ಲಿಕಾರ್ಜುನ ಹೊಸಮನಿ, ಮಾಜಿ ಸೈನಿಕ ವಿಜಯ ದಳವಾಯಿ, ಇಳಕಲ್ಲ ಪಿಎಸ್ ಐ ಎಸ್.ಆರ್.ನಾಯಕ ಮಾತನಾಡಿದರು.

ಬದಾಮಿ ಸಿಪಿಐ ಕರೆಯಪ್ಪ ಬನ್ನಿ ,ಹುನಗುಂದ ಪಿಎಸ್ಐ ಎಸ್.ಜಿ. ಆಲದಕಟ್ಟಿ , ಅಮೀನಗಡ ಪಿಎಸ್ ಐ ಜ್ಯೋತಿ ವಾಲೀಕಾರ, ಮಂಜುನಾಥ ಪಾಟೀಲ್ ಸೇರಿದಂತೆ ಇತರರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ