ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು.

ಪಟ್ಟಣದ ಗುರು ಭವನದ ನಡೆದ ಗುರವಾರ   ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು  ಬೀಳ್ಕೋಡಿಗೆ ಸಮಾರಂಭ ಹಾಗೂ ನೂತನ ಡಿವೃಎಸ್ಪಿ ಸ್ವಾಗತ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು   ಪೋಲೀಸ್ ಇಲಾಖೆಯು ಇದೀಗ ಪೂರ್ತಿಯಾಗಿ ಜನಸ್ನೇಹಿ ಪೋಲಿಸ್ಆಗಿದೆ. ಸಂವಿಧಾನದ ಹಾಗೂ ಕಾನೂನುನಿನ ನಿಯಮಾವಳಿಯ ಚೌಕಟ್ಟಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು.ನಮಗೆ ನಮ್ಮ ಇಲಾಖೆಯ ಮೇಲೆ ಜವಾಬ್ದಾರಿ ಬಹಳಷ್ಟು ಇರುತ್ತದೆ. ಪೋಲಿಸ್ ರು ನೊಂದವರ, ಬಡವರಿಗೆ ನ್ಯಾಯ ಕೊಡುಸುವ ಕೆಲಸ ಮಾಡಬೇಕು ಎಂದರು.


ಹೆಂಡತಿ- ಮಕ್ಕಳ ಹೊಟ್ಟೆಗಾಗಿ ಹಾಗೂ ಕುಟುಂಭದ ಉದ್ದಾರದ ಭಾವನೆಯಿಂದ ಕೆಲಸ ಮಾಡುತ್ತಿದ್ದರೆ ಅದು ವ್ಯರ್ಥ, ನಮಗಿರುವ ಶಕ್ತಿಯನ್ನು ವ್ಯಯಕ್ತಿಕ ಬಳಸಿಕೊಳ್ಳದೆ. ಸಮಾಜ ಶಾಂತಿ ಸುವ್ಯವಸ್ಥೆ ಗೆ ಬಳಕೆ ಮಾಡಿದರೆ ಈ ಹುದ್ದೆಗೆ ಸೇರಿದ್ದು ಸಾರ್ಥಕ ವಾಗುತ್ತದೆ .ಸೇವೆಗೆ ಅವಕಾಶ ನೀಡಿದ ಹುನಗುಂದ ಇಲಕಲ್ಲ, ಅಮೀನಗಡದ ಭಾಗದ ಎಲ್ಲ ಸಾರ್ವಜನರಿಗೆ ನಮ್ಮ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಮಾತನಾಡಿ. ಕಳೆದ ಎರಡು ವರ್ಷ ಅವಧಿಯಲ್ಲಿ ಹುನಗುಂದ ಉಪವಿಭಾಗ ನನಗೆ ಅತ್ಯಂತ ಕುಷಿ ತಂದಿದೆ.  ಆದರೆ ನಾವು ಹೇಗೆ ಕೆಲಸ ಮಾಡುತ್ತೇವೆ ಅಧಿಕಾರ  ಬಳಸುವುದರ  ಮೂಲಕ ನಮ್ಮ ಕೆಲಸ ಮುಖ್ಯವಾಗುತ್ತದೆ.  ಸಾರ್ವಜನಿಕರು, ರಾಜಕೀಯ ಮುಖಂಡರು, ಮಾಧ್ಯಮ ಮಿತ್ರರರು ಎಲ್ಲ ಸಹಕಾರದಿಂದಲೇ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು.ಸರ್ಕಾರಿ ಸೇವೆಯಲ್ಲಿ ಬದಲಾವಣೆಯೂ ಸಹಜ ಆದರೆ ಸರ್ಕಾರ ನಿಯಮಗಳ ಮೂಲಕ ಪೋಲಿಸ್ ಇಲಾಖೆಯೂ ಬದಲಾವಣೆ ಯಾಗುತ್ತಿದ್ದಂತೆ ಅದರಂತೆ ನಾವು ಬದಲಾವಣೆ ಆಗಬೇಕು. ಸಾರ್ವಜನಿಕ ಉತ್ತಮ ಸೇವೆ ಕೊಡಬೇಕು ಎಂದರು.

ನಮ್ಮ ಕೆಲಸವನ್ನು ಶ್ರದ್ದೆ ಯಿಂದ ಮಾಡಿದರೆ ನಮ್ಮ ಕೆಲಸ ಸಾರ್ಥಕವಾಗುತ್ತದೆ. ನಮ್ಮ ಮೇಲಾಧಿಕಾರಿಗಳು ಸಹಕಾರದಿಂದ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇವೆ. ಉತ್ತಮ‌ ಸಮಾಜ ನಿರ್ಮಾಣದಲ್ಲಿ  ಪೋಲಿಸ ಇಲಾಖೆಯ ಪಾತ್ರವು ಮಹತ್ವವಿದೆ ಎಂದು ತಿಳಿಸಿದರು.

ನೂತನ ಡಿವೈಎಸ್ಪಿ ಸಂತೋಷ ಬನ್ನಿಟ್ಟಿ ಮಾತನಾಡಿ, ಎಲ್ಲರೂ ಮೊದಲಿನಂತೆ ನಮಗೂ ಸಹಕಾರಿ ನೀಡಿ ಸಾರ್ವಜನಿಕರ ಯಾವುದೇ ಸಮಸ್ಯೆಗೆ ಪರಿಹಾರಕ್ಕೆ ನಮ್ಮ ಇಲಾಖೆಯೂ ಸ್ಪಂದಿಸುತ್ತದೆ ಎಂದು ತಿಳಿಸಿದರು.

ಕಾನಿಪ ಅಧ್ಯಕ್ಷ ಅಮರೇಶ ನಾಗೂರ, ಕಾರ್ಯದರ್ಶಿ‌ ಮಲ್ಲಿಕಾರ್ಜುನ ಹೊಸಮನಿ, ಮಾಜಿ ಸೈನಿಕ ವಿಜಯ ದಳವಾಯಿ, ಇಳಕಲ್ಲ ಪಿಎಸ್ ಐ ಎಸ್.ಆರ್.ನಾಯಕ ಮಾತನಾಡಿದರು.

ಬದಾಮಿ ಸಿಪಿಐ ಕರೆಯಪ್ಪ ಬನ್ನಿ ,ಹುನಗುಂದ ಪಿಎಸ್ಐ ಎಸ್.ಜಿ. ಆಲದಕಟ್ಟಿ , ಅಮೀನಗಡ ಪಿಎಸ್ ಐ ಜ್ಯೋತಿ ವಾಲೀಕಾರ, ಮಂಜುನಾಥ ಪಾಟೀಲ್ ಸೇರಿದಂತೆ ಇತರರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ