ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು.

ಪಟ್ಟಣದ ಗುರು ಭವನದ ನಡೆದ ಗುರವಾರ   ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು  ಬೀಳ್ಕೋಡಿಗೆ ಸಮಾರಂಭ ಹಾಗೂ ನೂತನ ಡಿವೃಎಸ್ಪಿ ಸ್ವಾಗತ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು   ಪೋಲೀಸ್ ಇಲಾಖೆಯು ಇದೀಗ ಪೂರ್ತಿಯಾಗಿ ಜನಸ್ನೇಹಿ ಪೋಲಿಸ್ಆಗಿದೆ. ಸಂವಿಧಾನದ ಹಾಗೂ ಕಾನೂನುನಿನ ನಿಯಮಾವಳಿಯ ಚೌಕಟ್ಟಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು.ನಮಗೆ ನಮ್ಮ ಇಲಾಖೆಯ ಮೇಲೆ ಜವಾಬ್ದಾರಿ ಬಹಳಷ್ಟು ಇರುತ್ತದೆ. ಪೋಲಿಸ್ ರು ನೊಂದವರ, ಬಡವರಿಗೆ ನ್ಯಾಯ ಕೊಡುಸುವ ಕೆಲಸ ಮಾಡಬೇಕು ಎಂದರು.


ಹೆಂಡತಿ- ಮಕ್ಕಳ ಹೊಟ್ಟೆಗಾಗಿ ಹಾಗೂ ಕುಟುಂಭದ ಉದ್ದಾರದ ಭಾವನೆಯಿಂದ ಕೆಲಸ ಮಾಡುತ್ತಿದ್ದರೆ ಅದು ವ್ಯರ್ಥ, ನಮಗಿರುವ ಶಕ್ತಿಯನ್ನು ವ್ಯಯಕ್ತಿಕ ಬಳಸಿಕೊಳ್ಳದೆ. ಸಮಾಜ ಶಾಂತಿ ಸುವ್ಯವಸ್ಥೆ ಗೆ ಬಳಕೆ ಮಾಡಿದರೆ ಈ ಹುದ್ದೆಗೆ ಸೇರಿದ್ದು ಸಾರ್ಥಕ ವಾಗುತ್ತದೆ .ಸೇವೆಗೆ ಅವಕಾಶ ನೀಡಿದ ಹುನಗುಂದ ಇಲಕಲ್ಲ, ಅಮೀನಗಡದ ಭಾಗದ ಎಲ್ಲ ಸಾರ್ವಜನರಿಗೆ ನಮ್ಮ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಮಾತನಾಡಿ. ಕಳೆದ ಎರಡು ವರ್ಷ ಅವಧಿಯಲ್ಲಿ ಹುನಗುಂದ ಉಪವಿಭಾಗ ನನಗೆ ಅತ್ಯಂತ ಕುಷಿ ತಂದಿದೆ.  ಆದರೆ ನಾವು ಹೇಗೆ ಕೆಲಸ ಮಾಡುತ್ತೇವೆ ಅಧಿಕಾರ  ಬಳಸುವುದರ  ಮೂಲಕ ನಮ್ಮ ಕೆಲಸ ಮುಖ್ಯವಾಗುತ್ತದೆ.  ಸಾರ್ವಜನಿಕರು, ರಾಜಕೀಯ ಮುಖಂಡರು, ಮಾಧ್ಯಮ ಮಿತ್ರರರು ಎಲ್ಲ ಸಹಕಾರದಿಂದಲೇ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು.ಸರ್ಕಾರಿ ಸೇವೆಯಲ್ಲಿ ಬದಲಾವಣೆಯೂ ಸಹಜ ಆದರೆ ಸರ್ಕಾರ ನಿಯಮಗಳ ಮೂಲಕ ಪೋಲಿಸ್ ಇಲಾಖೆಯೂ ಬದಲಾವಣೆ ಯಾಗುತ್ತಿದ್ದಂತೆ ಅದರಂತೆ ನಾವು ಬದಲಾವಣೆ ಆಗಬೇಕು. ಸಾರ್ವಜನಿಕ ಉತ್ತಮ ಸೇವೆ ಕೊಡಬೇಕು ಎಂದರು.

ನಮ್ಮ ಕೆಲಸವನ್ನು ಶ್ರದ್ದೆ ಯಿಂದ ಮಾಡಿದರೆ ನಮ್ಮ ಕೆಲಸ ಸಾರ್ಥಕವಾಗುತ್ತದೆ. ನಮ್ಮ ಮೇಲಾಧಿಕಾರಿಗಳು ಸಹಕಾರದಿಂದ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇವೆ. ಉತ್ತಮ‌ ಸಮಾಜ ನಿರ್ಮಾಣದಲ್ಲಿ  ಪೋಲಿಸ ಇಲಾಖೆಯ ಪಾತ್ರವು ಮಹತ್ವವಿದೆ ಎಂದು ತಿಳಿಸಿದರು.

ನೂತನ ಡಿವೈಎಸ್ಪಿ ಸಂತೋಷ ಬನ್ನಿಟ್ಟಿ ಮಾತನಾಡಿ, ಎಲ್ಲರೂ ಮೊದಲಿನಂತೆ ನಮಗೂ ಸಹಕಾರಿ ನೀಡಿ ಸಾರ್ವಜನಿಕರ ಯಾವುದೇ ಸಮಸ್ಯೆಗೆ ಪರಿಹಾರಕ್ಕೆ ನಮ್ಮ ಇಲಾಖೆಯೂ ಸ್ಪಂದಿಸುತ್ತದೆ ಎಂದು ತಿಳಿಸಿದರು.

ಕಾನಿಪ ಅಧ್ಯಕ್ಷ ಅಮರೇಶ ನಾಗೂರ, ಕಾರ್ಯದರ್ಶಿ‌ ಮಲ್ಲಿಕಾರ್ಜುನ ಹೊಸಮನಿ, ಮಾಜಿ ಸೈನಿಕ ವಿಜಯ ದಳವಾಯಿ, ಇಳಕಲ್ಲ ಪಿಎಸ್ ಐ ಎಸ್.ಆರ್.ನಾಯಕ ಮಾತನಾಡಿದರು.

ಬದಾಮಿ ಸಿಪಿಐ ಕರೆಯಪ್ಪ ಬನ್ನಿ ,ಹುನಗುಂದ ಪಿಎಸ್ಐ ಎಸ್.ಜಿ. ಆಲದಕಟ್ಟಿ , ಅಮೀನಗಡ ಪಿಎಸ್ ಐ ಜ್ಯೋತಿ ವಾಲೀಕಾರ, ಮಂಜುನಾಥ ಪಾಟೀಲ್ ಸೇರಿದಂತೆ ಇತರರು ಇದ್ದರು.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ