ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

Ad
Ad

ಇಳಕಲ್: ಐಟಿಐ ಮುಗಿಸಿ ಕೌಶಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ಸರಕಾರವೇ ಹಣಕಾಸು ನೆರವು ನೀಡಿ ವಿದೇಶಗಳಿಗೆ ಕಳಿಸುತ್ತಾರೆ, ಇದರ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು ಎಂದು ಕೂಡಲಸಂಗಮದ ಜಿ.ಟಿ.ಟಿ.ಸಿ. ಉಪನ್ಯಾಸಕ ವಿಶ್ವನಾಥ ಹೊಕ್ರಾಣಿ ತಿಳಿಸಿದರು.

Ad
Ad

ಇಳಕಲ್ಲಿನ ಶ್ರೀವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ, ಶ್ರೀ ಜಗದ್ಗುರು ಗಂಗಾಧರ ಮೂರುಸಾವಿರಮಠ, ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಖಿಲ ಭಾರತ ವೃತ್ತಿ ಪರೀಕ್ಷೆ-2022-24 ರಲ್ಲಿ ಉತ್ತೀರ್ಣರಾದ ತರಬೇತಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಘಟಿಕೋತ್ಸವ ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾಗಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಳಕಲ್ ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಧಾರಾಣಿ ಮುರುಗೇಶ ಸಂಗಮ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಐಟಿಐ ಶಿಕ್ಷಣ ಪಡೆದು ಸ್ವಾವಲಂಬಿ ಬದುಕು ಸಾಗಿಸಬೇಕು ಎಂದು ಹೇಳಿದರು.

ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಮೋಟರ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಚಿದಾನಂದ ಹಿರೇಮಠ ಮಾತನಾಡಿ ಸಹಾಯ ಕೇಳುವ, ಕ್ಷಮೆ ಕೋರುವ ಹಾಗೂ ಧನ್ಯವಾದಗಳು ಅರ್ಪಿಸುವ ಈ ಮೂರು ಗುಣಗಳನ್ನು ಬೆಳೆಸಿಕೋಂಡರೆ, ಜೀವನದಲ್ಲಿ ಯಶಸ್ಸಯ ಶತಸಿದ್ದ. ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಬಸವರಾಜ ಕೆ. ಗೋಟೂರ ವಹಿಸಿದ್ದರು.

ನಗರಸಭೆಯ ಉಪಾಧ್ಯಕ್ಷೆ ಶ್ರೀಮತಿ ಕಾಳಮ್ಮ ವಿ, ಜಕ್ಕಾ ಹಾಗೂ ವೀದಿಕೆ ಮೇಲಿದ್ದ ಗಣ್ಯರು ತೇರ್ಗಡೆಹೊಂದಿದ ತರಬೇತಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು,

ಕಾರ‍್ಯಕ್ರಮದಲ್ಲಿ ತರಬೇತಿ ಅಧಿಕಾರಿಗಳಾದ ಎಂ.ಎಸ್.ಬೆಳವಣಿಕಿ ಹಾಗೂ ಡಬ್ಲು.ಎಚ್. ಢಾಲಾಯತ್ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಚಾರ್ಯ ಕೆ.ಎನ್.ಮಧುರಕರ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಗಣ್ಯರಿಗೆ ಸ್ವಾಗತಿಸಿದರು. ಬಸವರಾಜ ಅಂಗಡಿ ವಂದಿಸಿದರು. ಪ್ರಕಾಶ ಸಾರವಾಡ ಹಾಗೂ ಮಹಾಂತೇಶ ಚಿಂತಾಮಣಿ ನಿರೂಪಿಸಿದರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ