ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

ಇಳಕಲ್: ಐಟಿಐ ಮುಗಿಸಿ ಕೌಶಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ಸರಕಾರವೇ ಹಣಕಾಸು ನೆರವು ನೀಡಿ ವಿದೇಶಗಳಿಗೆ ಕಳಿಸುತ್ತಾರೆ, ಇದರ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು ಎಂದು ಕೂಡಲಸಂಗಮದ ಜಿ.ಟಿ.ಟಿ.ಸಿ. ಉಪನ್ಯಾಸಕ ವಿಶ್ವನಾಥ ಹೊಕ್ರಾಣಿ ತಿಳಿಸಿದರು.

ಇಳಕಲ್ಲಿನ ಶ್ರೀವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ, ಶ್ರೀ ಜಗದ್ಗುರು ಗಂಗಾಧರ ಮೂರುಸಾವಿರಮಠ, ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಖಿಲ ಭಾರತ ವೃತ್ತಿ ಪರೀಕ್ಷೆ-2022-24 ರಲ್ಲಿ ಉತ್ತೀರ್ಣರಾದ ತರಬೇತಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಘಟಿಕೋತ್ಸವ ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾಗಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಳಕಲ್ ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಧಾರಾಣಿ ಮುರುಗೇಶ ಸಂಗಮ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಐಟಿಐ ಶಿಕ್ಷಣ ಪಡೆದು ಸ್ವಾವಲಂಬಿ ಬದುಕು ಸಾಗಿಸಬೇಕು ಎಂದು ಹೇಳಿದರು.

ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಮೋಟರ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಚಿದಾನಂದ ಹಿರೇಮಠ ಮಾತನಾಡಿ ಸಹಾಯ ಕೇಳುವ, ಕ್ಷಮೆ ಕೋರುವ ಹಾಗೂ ಧನ್ಯವಾದಗಳು ಅರ್ಪಿಸುವ ಈ ಮೂರು ಗುಣಗಳನ್ನು ಬೆಳೆಸಿಕೋಂಡರೆ, ಜೀವನದಲ್ಲಿ ಯಶಸ್ಸಯ ಶತಸಿದ್ದ. ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಬಸವರಾಜ ಕೆ. ಗೋಟೂರ ವಹಿಸಿದ್ದರು.

ನಗರಸಭೆಯ ಉಪಾಧ್ಯಕ್ಷೆ ಶ್ರೀಮತಿ ಕಾಳಮ್ಮ ವಿ, ಜಕ್ಕಾ ಹಾಗೂ ವೀದಿಕೆ ಮೇಲಿದ್ದ ಗಣ್ಯರು ತೇರ್ಗಡೆಹೊಂದಿದ ತರಬೇತಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು,

ಕಾರ‍್ಯಕ್ರಮದಲ್ಲಿ ತರಬೇತಿ ಅಧಿಕಾರಿಗಳಾದ ಎಂ.ಎಸ್.ಬೆಳವಣಿಕಿ ಹಾಗೂ ಡಬ್ಲು.ಎಚ್. ಢಾಲಾಯತ್ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಚಾರ್ಯ ಕೆ.ಎನ್.ಮಧುರಕರ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಗಣ್ಯರಿಗೆ ಸ್ವಾಗತಿಸಿದರು. ಬಸವರಾಜ ಅಂಗಡಿ ವಂದಿಸಿದರು. ಪ್ರಕಾಶ ಸಾರವಾಡ ಹಾಗೂ ಮಹಾಂತೇಶ ಚಿಂತಾಮಣಿ ನಿರೂಪಿಸಿದರು.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು