ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಜಗದೀಶ ಶಿವಪ್ಪ ಯರಾಶಿ (38) ಅವರು ಶನಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಗದಗಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ಸುಮಾರು 3:30ಕ್ಕೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರಿಗೆ ತಾಯಿ, ಅಕ್ಕ, ಮಾವ ಮತ್ತು ಇಬ್ಬರು ಅಳಿಯಂದಿರು ಇದ್ದಾರೆ.






