Janardhan Reddy jailed for 7 years for illegal mining

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಈ ಕುರಿತು ತೀರ್ಪು ನೀಡಿದೆ. ಪ್ರಕರಣ ಸಂಬಂಧ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಗಾಲಿ ಜನಾರ್ಧನರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

ಯಡಿಯೂರಪ್ಪ ಆಡಳಿತದಲ್ಲಿ ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ಇದಾಗಿದ್ದು, ಶ್ರೀನಿವಾಸ ರೆಡ್ಡಿ, ಒಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಜನಾರ್ದನ ರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅಕ್ರಮ ಎಸಗಲಾಗಿದೆ. ಅರಣ್ಯ ಇಲಾಖೆ ಮತ್ತು ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಇದೀಗ ದೆಹಲಿಯ ಸಿಬಿಐ ವಿಶೇಷ ಕೋರ್ಟ್ ಶಾಸಕ ಜನಾರ್ಧನ ರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

2009 ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಸಿಬಿಐ 2011 ರಲ್ಲಿ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತು. ನಂತರ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದಂತೆ ಒಂಬತ್ತು ಆರೋಪಿಗಳ ಹೆಸರನ್ನು ಸೇರಿಸುವ ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತು.

ಆರೋಪಿಗಳಲ್ಲಿ ಬಿ.ವಿ. ಶ್ರೀನಿವಾಸ ರೆಡ್ಡಿ, ಗಾಲಿ ಜನಾರ್ದನ ರೆಡ್ಡಿ, ಓಬಳಾಪುರಂ ಮೈನಿಂಗ್ ಕಂಪನಿ, ಮೆಫಾಜ್ ಅಲಿ ಖಾನ್, ಮಾಜಿ ಗಣಿ ನಿರ್ದೇಶಕ ವಿ.ಡಿ. ರಾಜಗೋಪಾಲ್, ಮಾಜಿ ಐಎಎಸ್ ಅಧಿಕಾರಿ ಕೃಪಾನಂದಂ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಯಿತು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆದ ವಿಚಾರಣೆಯು, ನ್ಯಾಯಾಲಯವು ಮೇ ಅಂತ್ಯದೊಳಗೆ ಪೂರ್ಣಗೊಳಿಸಲು ಗಡುವು ನೀಡಿದ ನಂತರ ಕಳೆದ ತಿಂಗಳು ವಾದಗಳನ್ನು ಮುಕ್ತಾಯಗೊಳಿಸಿತು.

Latest News

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿ ವರ್ತಕ ಮಲ್ಲನಗೌಡ ಬಿರಾದಾರ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಕಬ್ಬು ಬೆಳೆದಿರುವ ರೈತರು ಕೇಳುತ್ತಿರುವ ನ್ಯಾಯಯುತ ಬೆಲೆ 3500 ರೂ ಘೋಷಣೆ ಮಾಡದೇ ಸರ್ಕಾರ ಮೌನವಾಗಿದೆ.ಕ್ಷೇತ್ರದ ಶಾಸಕರು ರೈತರಿಂದಲೇ ಶಾಸಕರಾಗಿದ್ದೀರಿ ಅವರಿಗೆ ಬೆಂಬಲ ನೀಡುವ ಕಾರ್ಯ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಬ್ಬಿಗೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ನಡೆದಿರುವ ಮೂರನೇ ದಿನದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು.