Jatra Mahotsava mother of seven children: Constitution is the country's bible, myth, scripture - Nad Gowda

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಮುದ್ದೇಬಿಹಾಳ : ಶೋಷಿತ ಸಮುದಾಯಗಳಿಗೆ ವಿದ್ಯೆ ಹಾಗೂ ಅಂತಸ್ತು ಸರಿಸಮಾನವಾಗಿ ಬರಬೇಕು ಎಂಬ ಉದ್ದೇಶವಿಟ್ಟುಕೊಂಡು ಡಾ.ಅಂಬೇಡ್ಕರ್ ಬರೆದಿರುವ ಸಂವಿದಾನ ಈ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ ಆಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಬಳಿ ಇರುವ ಏಳು ಮಕ್ಕಳ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಧರ್ಮಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಇತಿಹಾಸ ಓದಿ ಮರೆತಿಲ್ಲ. ಅವರು ಸಮಾಜದ ಬಗ್ಗೆ ಯೋಚಿಸಿ ಸಂವಿದಾನ ಬರೆದಿದ್ದಾರೆ. ಅಂಬೇಡ್ಕರ್ ಜಯಂತಿ ಆಚರಣೆ ಮಾಡಿ ಮನೆಗೆ ಹೋಗುವುದಲ್ಲ. ಸಮಾಜದಲ್ಲಿ ಮುಂದೆ ಬರುವ ಚಿಂತನೆ ಇರಬೇಕು. ದೇವರ ಆರಾಧನೆ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿರುವ ಕಾರ್ಯ ಹೊಸ ಚಿಂತನೆ, ಬದಲಾವಣೆಗೆ ಸಾಕ್ಷಿಯಾಗಿದೆ ಎಂದರು.

ಮುದ್ದೇಬಿಹಾಳದಲ್ಲಿ ಎಸ್.ಸಿ. ಎಸ್ಟಿ ಜನಾಂಗದವರ ಮಕ್ಕಳಿಗೆ ಮೂವ್ವತ್ತು ಕೋಟಿ ರೂ. ವೆಚ್ಚದಲ್ಲಿ ವಸತಿ ಕಾಲೇಜು ಕಟ್ಟಿಸಿದ್ದೇವೆ. ನಮ್ಮ ಸರ್ಕಾರ 156 ಭರವಸೆಗಳನ್ನು ಈಡೇರಿಸಿದೆ ಎಂದರು.

ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ದೇವಿಗೆ ಬಲಿ ಕೊಡುವ ಸಂಪ್ರದಾಯ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲೂ ಇಲ್ಲ. ಮಹಾತ್ಮಾ ಗಾಂಧೀಜಿ ಅವರು ಅಲ್ಲಿಗೆ ಭೇಟಿ ನೀಡಿದ್ದಾಗ ಪ್ರಾಣಿ ಬಲಿ ವಿರೋಧಿಸಿದರು. ಅಷ್ಟಕ್ಕೂ ದೇವಿಗೆ ರಕ್ತದ ಅಭಿಷೇಕವೇ ಬೇಕಾದರೆ ಸೀರಿಂಜ್‌ನಲ್ಲಿ ಪ್ರಾಣಿಗಳ ಅಲ್ಪ ರಕ್ತ ತೆಗೆದು ದೇವಿಗೆ ನೈವೇದ್ಯ ಅರ್ಪಿಸುವ ಸಲಹೆ ನೀಡಿದಾಗ ಅದನ್ನು ಒಪ್ಪಿ ಇಂದಿಗೂ ಅಲ್ಲಿ ಪ್ರಾಣಿ ಬಲಿ ಆಚರಣೆ ಇಲ್ಲ. ನೀವೆಲ್ಲ ಮೂಢನಂಬಿಕೆ ಬದಿಗಿಡಿ. ದೇವರ ಹೆಸರಿನಲ್ಲಿ ಪ್ರಾಣಿ ಹಿಂಸೆ ಮಾಡಬೇಡಿ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ವಾಲ್ಮೀಕಿ ಸಮಾಜದ ಮುಖಂಡ ಹುಲಗಪ್ಪ ನಾಯ್ಕಮಕ್ಕಳ, ಮುಖಂಡರಾದ ರೇವಣೆಪ್ಪ ಹರಿಜನ,ಯಲ್ಲಪ್ಪ ಚಲವಾದಿ, ಕರ್ನಾಟಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕ ಶ್ರೀಕಾಂತ ಚಲವಾದಿ, ಅಕ್ಷಯ ಅಜಮನಿ, ವಾಯ್.ಎಚ್.ವಿಜಯಕರ್ ಮೊದಲಾದವರು ಇದ್ದರು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀಶೈಲ ಹೂಗಾರ ನೇತೃತ್ವದ ಇಂಚರ ಮೆಲೋಡಿಸ್ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ