Jatra Mahotsava mother of seven children: Constitution is the country's bible, myth, scripture - Nad Gowda

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಮುದ್ದೇಬಿಹಾಳ : ಶೋಷಿತ ಸಮುದಾಯಗಳಿಗೆ ವಿದ್ಯೆ ಹಾಗೂ ಅಂತಸ್ತು ಸರಿಸಮಾನವಾಗಿ ಬರಬೇಕು ಎಂಬ ಉದ್ದೇಶವಿಟ್ಟುಕೊಂಡು ಡಾ.ಅಂಬೇಡ್ಕರ್ ಬರೆದಿರುವ ಸಂವಿದಾನ ಈ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ ಆಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಬಳಿ ಇರುವ ಏಳು ಮಕ್ಕಳ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಧರ್ಮಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಇತಿಹಾಸ ಓದಿ ಮರೆತಿಲ್ಲ. ಅವರು ಸಮಾಜದ ಬಗ್ಗೆ ಯೋಚಿಸಿ ಸಂವಿದಾನ ಬರೆದಿದ್ದಾರೆ. ಅಂಬೇಡ್ಕರ್ ಜಯಂತಿ ಆಚರಣೆ ಮಾಡಿ ಮನೆಗೆ ಹೋಗುವುದಲ್ಲ. ಸಮಾಜದಲ್ಲಿ ಮುಂದೆ ಬರುವ ಚಿಂತನೆ ಇರಬೇಕು. ದೇವರ ಆರಾಧನೆ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿರುವ ಕಾರ್ಯ ಹೊಸ ಚಿಂತನೆ, ಬದಲಾವಣೆಗೆ ಸಾಕ್ಷಿಯಾಗಿದೆ ಎಂದರು.

ಮುದ್ದೇಬಿಹಾಳದಲ್ಲಿ ಎಸ್.ಸಿ. ಎಸ್ಟಿ ಜನಾಂಗದವರ ಮಕ್ಕಳಿಗೆ ಮೂವ್ವತ್ತು ಕೋಟಿ ರೂ. ವೆಚ್ಚದಲ್ಲಿ ವಸತಿ ಕಾಲೇಜು ಕಟ್ಟಿಸಿದ್ದೇವೆ. ನಮ್ಮ ಸರ್ಕಾರ 156 ಭರವಸೆಗಳನ್ನು ಈಡೇರಿಸಿದೆ ಎಂದರು.

ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ದೇವಿಗೆ ಬಲಿ ಕೊಡುವ ಸಂಪ್ರದಾಯ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲೂ ಇಲ್ಲ. ಮಹಾತ್ಮಾ ಗಾಂಧೀಜಿ ಅವರು ಅಲ್ಲಿಗೆ ಭೇಟಿ ನೀಡಿದ್ದಾಗ ಪ್ರಾಣಿ ಬಲಿ ವಿರೋಧಿಸಿದರು. ಅಷ್ಟಕ್ಕೂ ದೇವಿಗೆ ರಕ್ತದ ಅಭಿಷೇಕವೇ ಬೇಕಾದರೆ ಸೀರಿಂಜ್‌ನಲ್ಲಿ ಪ್ರಾಣಿಗಳ ಅಲ್ಪ ರಕ್ತ ತೆಗೆದು ದೇವಿಗೆ ನೈವೇದ್ಯ ಅರ್ಪಿಸುವ ಸಲಹೆ ನೀಡಿದಾಗ ಅದನ್ನು ಒಪ್ಪಿ ಇಂದಿಗೂ ಅಲ್ಲಿ ಪ್ರಾಣಿ ಬಲಿ ಆಚರಣೆ ಇಲ್ಲ. ನೀವೆಲ್ಲ ಮೂಢನಂಬಿಕೆ ಬದಿಗಿಡಿ. ದೇವರ ಹೆಸರಿನಲ್ಲಿ ಪ್ರಾಣಿ ಹಿಂಸೆ ಮಾಡಬೇಡಿ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ವಾಲ್ಮೀಕಿ ಸಮಾಜದ ಮುಖಂಡ ಹುಲಗಪ್ಪ ನಾಯ್ಕಮಕ್ಕಳ, ಮುಖಂಡರಾದ ರೇವಣೆಪ್ಪ ಹರಿಜನ,ಯಲ್ಲಪ್ಪ ಚಲವಾದಿ, ಕರ್ನಾಟಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕ ಶ್ರೀಕಾಂತ ಚಲವಾದಿ, ಅಕ್ಷಯ ಅಜಮನಿ, ವಾಯ್.ಎಚ್.ವಿಜಯಕರ್ ಮೊದಲಾದವರು ಇದ್ದರು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀಶೈಲ ಹೂಗಾರ ನೇತೃತ್ವದ ಇಂಚರ ಮೆಲೋಡಿಸ್ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ