ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮೈಸೂರು ಚಲೋ 4ನೇ ದಿನದ ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಮದ್ದೂರು ತಾಲೂಕಿನ ಸೋಮನಹಳ್ಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಡಾ , ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಮೂಡಾಗೆ ಸಂಬಂಧಿಸಿದ ಸುಳ್ಳುದಾಖಲೆ ಸೃಷ್ಟಿ ಮಾಡಿ 14 ಸೈಟ್ ಗಳನ್ನ ಪಡೆದುಕೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಇಬ್ಬರು ರೈತ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ನಿನ್ನೆ ಕೆಂಗಲ್ ನಿಂದ ನಿಡಘಟ್ಟಕ್ಕೆ ಪಾದಯಾತ್ರೆ ಬಂದಿದ್ದೇವೆ.

ನಿನ್ನೆ ಪಕ್ಷದ ಕಾರ್ಯಕರ್ತೆ ಗೌರಮ್ಮ ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿರೋದು ಮನಸ್ಸಿಗೆ ನೋವಾಗಿದೆ. ಪಾದಯಾತ್ರೆಗೆ ಎರಡು ಪಕ್ಷದ ಕಾರ್ಯಕರ್ತರು ಪ್ರತಿದಿನ ನಮ್ಮ ಜೊತೆ ಹೆಗಲಿಗೆ ಹೆಗಲು ಕೊಟ್ಟು ಹೆಜ್ಜೆ ಹಾಕುತ್ತಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇಲ್ಲ:
ಇನ್ನು ಯಾದಗಿರಿಯಲ್ಲಿ ಪಿಎಸ್ಐ ವರ್ಗಾವಣೆಗೆ 40 ಲಕ್ಷ ಹಣವನ್ನು ಶಾಸಕರು ಹಾಗೂ ಅವರ ಮಗನಿಂದ ಬೇಡಿಕೆ ಇಟ್ಟಿದ್ದರು. ಇದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಎಸ್ಐ ಪರಶುರಾಮ್ ಅವರ ಪತ್ನಿ ಜೊತೆ ಈಗಾಗಲೇ ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ದೂರವಾಣಿ ಮೂಲಕ ಮಾತಾಡಿದ್ದಾರೆ. ಪಾದಯಾತ್ರೆ ಮುಗಿದ ಬಳಿಕ ಅವರಿಗೆ ನ್ಯಾಯ‌ ಕೊಡಿಸುವತ್ತ ಗಮನ ಹರಿಸುತ್ತೇವೆ.

ಅಹಿಂದ ಹಿಂದುಳಿದ ವರ್ಗದ ಸಹಕಾರದಿಂದ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ರೆ ಇವತ್ತು ಜನ ಅವರಿಗೆ ಛೀಮಾರಿ ಹಾಕ್ತಿದ್ದಾರೆ. ₹187 ಕೋಟಿ ವಾಲ್ಮೀಕಿ ನಿಗಮದಲ್ಲಿ ಅಕ್ರಮವಾಗಿದೆ. ಸಿಎಂ ಅವರಿಗೆ ನೈತಿಕತೆ ಇದ್ರೆ ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅಗ್ರಹಿಸಿದರು.

ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ಅವರು. ಕುಮಾರಸ್ವಾಮಿ ಅವರು ಸಿನಿಮಾ ಹಂಚಿಕೆದಾರರಾಗಿ ಅವರ ವೃತ್ತಿ ಜೀವನ ಆರಂಭ ಮಾಡಿದ್ರು, ಅದ್ರಲ್ಲಿ ಯಶಸ್ಸು ಕಂಡಿದ್ರು, ಇವತ್ತು ಆಸ್ತಿ ಬಗ್ಗೆ ಡಿಕೆ ಶಿವಕುಮಾರ್‌ ಅವರು ಮಾತಾಡುತ್ತಿದ್ದಾರೆ. ಇದೆಲ್ಲಾ ರಾಜ್ಯದ ಜನಕ್ಕೆ ಗೊತ್ತಿದೆ. ನಾವು ಬಿಳಿ ಹಾಳೆಯಿದ್ದ ಹಾಗೆ ಯಾವುದೇ ಮುಚ್ಚು ಮರೆ ಮಾಡಿಲ್ಲಾ‌. ಎನ್‌ಡಿಎ ಜೊತೆ ಮೈತ್ರಿಯಾದ ಬಳಿಕ 28 ಲೋಕಸಭೆಯ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರು ಹೊಂದಾಗಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಡಿ.ಸಿ ತಮ್ಮಣ್ಣ ನವರು, ಪುಟ್ಟರಾಜು ಅವರು, ಬಿಜೆಪಿ ಮಾಜಿ ಶಾಸಕ ಪಿ. ರಾಜೀವ್ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಅವರು ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಜೊತೆಯಲಿದ್ದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ