Job Fair Ilkal guru mahanth swamiji inaugurated job fair in muddebihal

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ


ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬುಧವಾರ ಎಂ.ಜಿ.ವಿ.ಸಿ ಕಾಲೇಜು ಹಾಗೂ ಎಲ್.ಸಿ.ಸಿ ಧಾರವಾಡ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ (Job Fair) ಚಾಲನೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿಗಳ ಸಂಖ್ಯೆ ಇಂತಹ ಮೇಳಗಳಿಂದ ಕಡಿಮೆಯಾಗುತ್ತದೆ. ಉದ್ಯೋಗ ದೊರೆತ ಬಳಿಕ ಹೆತ್ತ ತಂದೆ ತಾಯಿಯವರನ್ನು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳುವ ಕೆಲಸ ಯುವ ಜನಾಂಗ ಮಾಡಬೇಕು ಎಂದರು.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ ಮಾತನಾಡಿ, ಕಾಲೇಜು ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಾಲೇಜುಗಳೆಂದರೆ ಬರೀ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಹೊರ ಕಳಿಸುವುದಲ್ಲ. ಅದರೊಟ್ಟಿಗೆ ಅವರಿಗೆ ಜೀವನ, ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಪ್ರತಿವರ್ಷ ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಧಾರವಾಡ ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್ , ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ,ಪ್ರಮುಖರಾದ ಶಿವರಾಜ ತಡಸದ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಎಂ.ಐ.ಬಿರಾದಾರ, ಎ.ಎ.ಮುಲ್ಲಾ, ಆರ್.ಜಿ.ವಸ್ತ್ರ ದ,ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಶ್ರೀಶೈಲ್ ಹತ್ತಿ,ಪ್ರಕಾಶ ನರಗುಂದ ಇದ್ದರು.

410 ಜನಕ್ಕೆ ಉದ್ಯೋಗಪತ್ರ: ಮೇಳದಲ್ಲಿ ಟಾಟಾ, ಹೋಂಡಾ, ಹುಂಡಯೈ, ಎಚ್.ಡಿ.ಎಫ್.ಸಿ, ಕ್ಯಾಡಮಾಕ್ಸ್, ನೀಡೀ ಫೌಂಡೇಶನ್, ಅಪೋಲೋ, ಏರಟೆಕ್ ಸೇರಿದಂತೆ 26 ಕಂಪನಿಗಳು ಪಾಲ್ಗೊಂಡಿದ್ದವು. ಒಟ್ಟು 910 ಜನ ನೋಂದಾಯಿಸಿಕೊಂಡಿದ್ದು ಅದರಲ್ಲಿ 410 ಜನಕ್ಕೆ ಉದ್ಯೋಗಪತ್ರ ವಿತರಿಸಲಾಗಿದೆ. 180 ಜನರನ್ನು ಅಂತಿಮ ಸುತ್ತಿನ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ಮೇಳದ ಆಯೋಜಕರು ತಿಳಿಸಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ