Job Fair Ilkal guru mahanth swamiji inaugurated job fair in muddebihal

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ


ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬುಧವಾರ ಎಂ.ಜಿ.ವಿ.ಸಿ ಕಾಲೇಜು ಹಾಗೂ ಎಲ್.ಸಿ.ಸಿ ಧಾರವಾಡ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ (Job Fair) ಚಾಲನೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿಗಳ ಸಂಖ್ಯೆ ಇಂತಹ ಮೇಳಗಳಿಂದ ಕಡಿಮೆಯಾಗುತ್ತದೆ. ಉದ್ಯೋಗ ದೊರೆತ ಬಳಿಕ ಹೆತ್ತ ತಂದೆ ತಾಯಿಯವರನ್ನು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳುವ ಕೆಲಸ ಯುವ ಜನಾಂಗ ಮಾಡಬೇಕು ಎಂದರು.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ ಮಾತನಾಡಿ, ಕಾಲೇಜು ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಾಲೇಜುಗಳೆಂದರೆ ಬರೀ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಹೊರ ಕಳಿಸುವುದಲ್ಲ. ಅದರೊಟ್ಟಿಗೆ ಅವರಿಗೆ ಜೀವನ, ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಪ್ರತಿವರ್ಷ ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಧಾರವಾಡ ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್ , ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ,ಪ್ರಮುಖರಾದ ಶಿವರಾಜ ತಡಸದ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಎಂ.ಐ.ಬಿರಾದಾರ, ಎ.ಎ.ಮುಲ್ಲಾ, ಆರ್.ಜಿ.ವಸ್ತ್ರ ದ,ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಶ್ರೀಶೈಲ್ ಹತ್ತಿ,ಪ್ರಕಾಶ ನರಗುಂದ ಇದ್ದರು.

410 ಜನಕ್ಕೆ ಉದ್ಯೋಗಪತ್ರ: ಮೇಳದಲ್ಲಿ ಟಾಟಾ, ಹೋಂಡಾ, ಹುಂಡಯೈ, ಎಚ್.ಡಿ.ಎಫ್.ಸಿ, ಕ್ಯಾಡಮಾಕ್ಸ್, ನೀಡೀ ಫೌಂಡೇಶನ್, ಅಪೋಲೋ, ಏರಟೆಕ್ ಸೇರಿದಂತೆ 26 ಕಂಪನಿಗಳು ಪಾಲ್ಗೊಂಡಿದ್ದವು. ಒಟ್ಟು 910 ಜನ ನೋಂದಾಯಿಸಿಕೊಂಡಿದ್ದು ಅದರಲ್ಲಿ 410 ಜನಕ್ಕೆ ಉದ್ಯೋಗಪತ್ರ ವಿತರಿಸಲಾಗಿದೆ. 180 ಜನರನ್ನು ಅಂತಿಮ ಸುತ್ತಿನ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ಮೇಳದ ಆಯೋಜಕರು ತಿಳಿಸಿದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600