Job Fair Ilkal guru mahanth swamiji inaugurated job fair in muddebihal

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ


ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬುಧವಾರ ಎಂ.ಜಿ.ವಿ.ಸಿ ಕಾಲೇಜು ಹಾಗೂ ಎಲ್.ಸಿ.ಸಿ ಧಾರವಾಡ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ (Job Fair) ಚಾಲನೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿಗಳ ಸಂಖ್ಯೆ ಇಂತಹ ಮೇಳಗಳಿಂದ ಕಡಿಮೆಯಾಗುತ್ತದೆ. ಉದ್ಯೋಗ ದೊರೆತ ಬಳಿಕ ಹೆತ್ತ ತಂದೆ ತಾಯಿಯವರನ್ನು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳುವ ಕೆಲಸ ಯುವ ಜನಾಂಗ ಮಾಡಬೇಕು ಎಂದರು.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ ಮಾತನಾಡಿ, ಕಾಲೇಜು ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಾಲೇಜುಗಳೆಂದರೆ ಬರೀ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಹೊರ ಕಳಿಸುವುದಲ್ಲ. ಅದರೊಟ್ಟಿಗೆ ಅವರಿಗೆ ಜೀವನ, ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಪ್ರತಿವರ್ಷ ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಧಾರವಾಡ ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್ , ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ,ಪ್ರಮುಖರಾದ ಶಿವರಾಜ ತಡಸದ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಎಂ.ಐ.ಬಿರಾದಾರ, ಎ.ಎ.ಮುಲ್ಲಾ, ಆರ್.ಜಿ.ವಸ್ತ್ರ ದ,ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಶ್ರೀಶೈಲ್ ಹತ್ತಿ,ಪ್ರಕಾಶ ನರಗುಂದ ಇದ್ದರು.

410 ಜನಕ್ಕೆ ಉದ್ಯೋಗಪತ್ರ: ಮೇಳದಲ್ಲಿ ಟಾಟಾ, ಹೋಂಡಾ, ಹುಂಡಯೈ, ಎಚ್.ಡಿ.ಎಫ್.ಸಿ, ಕ್ಯಾಡಮಾಕ್ಸ್, ನೀಡೀ ಫೌಂಡೇಶನ್, ಅಪೋಲೋ, ಏರಟೆಕ್ ಸೇರಿದಂತೆ 26 ಕಂಪನಿಗಳು ಪಾಲ್ಗೊಂಡಿದ್ದವು. ಒಟ್ಟು 910 ಜನ ನೋಂದಾಯಿಸಿಕೊಂಡಿದ್ದು ಅದರಲ್ಲಿ 410 ಜನಕ್ಕೆ ಉದ್ಯೋಗಪತ್ರ ವಿತರಿಸಲಾಗಿದೆ. 180 ಜನರನ್ನು ಅಂತಿಮ ಸುತ್ತಿನ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ಮೇಳದ ಆಯೋಜಕರು ತಿಳಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು