Job Fair Ilkal guru mahanth swamiji inaugurated job fair in muddebihal

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ


ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬುಧವಾರ ಎಂ.ಜಿ.ವಿ.ಸಿ ಕಾಲೇಜು ಹಾಗೂ ಎಲ್.ಸಿ.ಸಿ ಧಾರವಾಡ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ (Job Fair) ಚಾಲನೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿಗಳ ಸಂಖ್ಯೆ ಇಂತಹ ಮೇಳಗಳಿಂದ ಕಡಿಮೆಯಾಗುತ್ತದೆ. ಉದ್ಯೋಗ ದೊರೆತ ಬಳಿಕ ಹೆತ್ತ ತಂದೆ ತಾಯಿಯವರನ್ನು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳುವ ಕೆಲಸ ಯುವ ಜನಾಂಗ ಮಾಡಬೇಕು ಎಂದರು.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ ಮಾತನಾಡಿ, ಕಾಲೇಜು ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಾಲೇಜುಗಳೆಂದರೆ ಬರೀ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಹೊರ ಕಳಿಸುವುದಲ್ಲ. ಅದರೊಟ್ಟಿಗೆ ಅವರಿಗೆ ಜೀವನ, ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಪ್ರತಿವರ್ಷ ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಧಾರವಾಡ ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್ , ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ,ಪ್ರಮುಖರಾದ ಶಿವರಾಜ ತಡಸದ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಎಂ.ಐ.ಬಿರಾದಾರ, ಎ.ಎ.ಮುಲ್ಲಾ, ಆರ್.ಜಿ.ವಸ್ತ್ರ ದ,ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಶ್ರೀಶೈಲ್ ಹತ್ತಿ,ಪ್ರಕಾಶ ನರಗುಂದ ಇದ್ದರು.

410 ಜನಕ್ಕೆ ಉದ್ಯೋಗಪತ್ರ: ಮೇಳದಲ್ಲಿ ಟಾಟಾ, ಹೋಂಡಾ, ಹುಂಡಯೈ, ಎಚ್.ಡಿ.ಎಫ್.ಸಿ, ಕ್ಯಾಡಮಾಕ್ಸ್, ನೀಡೀ ಫೌಂಡೇಶನ್, ಅಪೋಲೋ, ಏರಟೆಕ್ ಸೇರಿದಂತೆ 26 ಕಂಪನಿಗಳು ಪಾಲ್ಗೊಂಡಿದ್ದವು. ಒಟ್ಟು 910 ಜನ ನೋಂದಾಯಿಸಿಕೊಂಡಿದ್ದು ಅದರಲ್ಲಿ 410 ಜನಕ್ಕೆ ಉದ್ಯೋಗಪತ್ರ ವಿತರಿಸಲಾಗಿದೆ. 180 ಜನರನ್ನು ಅಂತಿಮ ಸುತ್ತಿನ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ಮೇಳದ ಆಯೋಜಕರು ತಿಳಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ