ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್


ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ನಗರದ ವಿಜಯ ಮಹಾಂತೇಶ್ವರ ದಾಸೋಹ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಿದ್ದ ಪತ್ರಕರ್ತರ ದಿನಾಚರಣೆ ಹಾಗೂ ಸತ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಈಗಾಗಲೇ ಸರ್ಕಾರವು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಪಡೆಯಲು ಒಗ್ಗಟ್ಟಾಗಿ ಶ್ರಮಿಸೋಣ ಎಂದು ಸಂಘದ ಸದಸ್ಯರಿಗೆ ಕಿವಿ ಮಾತು ಹೇಳಿದರು.

ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಪೂಜ್ಯ ಗುರುಮಹಾಂತಶ್ರೀಗಳು ಶ್ಲಾಘಿಸಿ ಮಾತನಾಡಿ, ಪತ್ರಿಕೆಗಳು ಜನರ ಅಭಿಪ್ರಾಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತವೆ ಎಂದರು.

ನಿತ್ಯ ಪತ್ರಿಕೆ ಓದುವುದರಿಂದ ಗತಕಾಲದ ಘಟನೆಗಳು ನೆನಪಿನ ಬಿಟ್ಟಿಯಲ್ಲಿ ಉಳಿದತ್ತವೆ. ಅವಶ್ಯಕತೆ ಇದ್ದಾಗ ನೆನಪಿಗೆ ಬರುತ್ತದೆ. ಈ ಮೂಲಕ ನಮ್ಮ ಜ್ಞಾನ ವೃದ್ಧಿಯಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣದಿಂದ ಪತ್ರಿಕೆಗಳಿಗೆ ತೊಡಕಲ್ಲ. ಜಾಲತಾಣದಲ್ಲಿ ತಕ್ಷಣ ಮಾಹಿತಿ ದೊರೆದರೆ, ಪತ್ರಿಕೆಗಳಿಂದ ಸಮಗ್ರ ಮಾಹಿತಿ ಸಿಗುತ್ತದೆ. ಇಂತಹ ಉತ್ತಮ ಕೆಲಸ ಮಾಡುವ ಪತ್ರಕರ್ತರ ಬದುಕು ಸುಧಾರಣೆ ಕಾಣಬೇಕು. ಇದಕ್ಕೆ ಸರ್ಕಾರ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಭಿಪ್ರಾಯ ಪಟ್ಟಿದರು.

ಸಂವಿಧಾನದ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ತನ್ನ ಕಾರ್ಯವನ್ನು ಮಾಡಬೇಕು. ಪತ್ರಕರ್ತರು ಆಗಾಗ ಛಾಟಿ ಬೀಸಿದಾಗ ಮಾತ್ರ ಕಾರ್ಯಾಂಗ‌ ಚುರುಕಿನಿಂದ ಕೆಲಸ ಮಾಡುತ್ತದೆ ಎಂದು ಉಪತಹಶೀಲ್ದಾರ್ ಈಶ್ವರ್ ಗಡ್ಡಿ ಹೇಳಿದರು.

ಹಿರಿಯ ವರದಿಗಾರರಾದ ಬಿ.ಬಾಬು, ಸಜ್ಜನರಾಜ ಮೆಹ್ತಾ, ಪತ್ರಿಕಾ ವಿತರಕರಾದ ಅಬ್ದುಲ್ ಸಾಬ್ ಮುಲ್ಲಾ, ಓದುಗರಾದ ಗಂಗಪ್ಪ ಮಾನಪ್ಪ ಬಡಿಗೇರ, ಪ್ರಕಾಶ ಲೊಖಂಡೆ ಅವರನ್ನು ಸತ್ಕರಿಸಲಾಯಿತು.

ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಬಂಗ್ಲೆ ಮಲ್ಲಿಕಾರ್ಜುನ್ ರಿಂದ ಉಪಹಾರ ಅರ್ಪಣೆ: ಇಳಕಲ್ ನಗರದ ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿಯ ಇಳಕಲ್ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಯಿತು.

ಈ ವೇಳೆ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕು ಅಧ್ಯಕ್ಷ ಶರಣಪ್ಪ ಹೊದ್ನೂರ್, ಹಿರಿಯ ಪತ್ರಕರ್ತರಾದ ವಿಜಯ ಪಲ್ಲೆದ್(VP), ಗುಂಡಣ್ಣ ಲಾಟಿ, ಶರಣಗೌಡ ಕಂದಕೂರು, ದೊಡ್ಡನಗೌಡ ಗುಡಿಹಿಂದಿನ, ಸುರಕ್ಷಾ ಸೇವಾ ಸಂಸ್ಥೆಯ ಮುಖ್ಯಸ್ಥ ಪುರುಷೋತ್ತಮ ದರಕ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು