ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್


ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ನಗರದ ವಿಜಯ ಮಹಾಂತೇಶ್ವರ ದಾಸೋಹ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಿದ್ದ ಪತ್ರಕರ್ತರ ದಿನಾಚರಣೆ ಹಾಗೂ ಸತ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಈಗಾಗಲೇ ಸರ್ಕಾರವು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಪಡೆಯಲು ಒಗ್ಗಟ್ಟಾಗಿ ಶ್ರಮಿಸೋಣ ಎಂದು ಸಂಘದ ಸದಸ್ಯರಿಗೆ ಕಿವಿ ಮಾತು ಹೇಳಿದರು.

ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಪೂಜ್ಯ ಗುರುಮಹಾಂತಶ್ರೀಗಳು ಶ್ಲಾಘಿಸಿ ಮಾತನಾಡಿ, ಪತ್ರಿಕೆಗಳು ಜನರ ಅಭಿಪ್ರಾಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತವೆ ಎಂದರು.

ನಿತ್ಯ ಪತ್ರಿಕೆ ಓದುವುದರಿಂದ ಗತಕಾಲದ ಘಟನೆಗಳು ನೆನಪಿನ ಬಿಟ್ಟಿಯಲ್ಲಿ ಉಳಿದತ್ತವೆ. ಅವಶ್ಯಕತೆ ಇದ್ದಾಗ ನೆನಪಿಗೆ ಬರುತ್ತದೆ. ಈ ಮೂಲಕ ನಮ್ಮ ಜ್ಞಾನ ವೃದ್ಧಿಯಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣದಿಂದ ಪತ್ರಿಕೆಗಳಿಗೆ ತೊಡಕಲ್ಲ. ಜಾಲತಾಣದಲ್ಲಿ ತಕ್ಷಣ ಮಾಹಿತಿ ದೊರೆದರೆ, ಪತ್ರಿಕೆಗಳಿಂದ ಸಮಗ್ರ ಮಾಹಿತಿ ಸಿಗುತ್ತದೆ. ಇಂತಹ ಉತ್ತಮ ಕೆಲಸ ಮಾಡುವ ಪತ್ರಕರ್ತರ ಬದುಕು ಸುಧಾರಣೆ ಕಾಣಬೇಕು. ಇದಕ್ಕೆ ಸರ್ಕಾರ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಭಿಪ್ರಾಯ ಪಟ್ಟಿದರು.

ಸಂವಿಧಾನದ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ತನ್ನ ಕಾರ್ಯವನ್ನು ಮಾಡಬೇಕು. ಪತ್ರಕರ್ತರು ಆಗಾಗ ಛಾಟಿ ಬೀಸಿದಾಗ ಮಾತ್ರ ಕಾರ್ಯಾಂಗ‌ ಚುರುಕಿನಿಂದ ಕೆಲಸ ಮಾಡುತ್ತದೆ ಎಂದು ಉಪತಹಶೀಲ್ದಾರ್ ಈಶ್ವರ್ ಗಡ್ಡಿ ಹೇಳಿದರು.

ಹಿರಿಯ ವರದಿಗಾರರಾದ ಬಿ.ಬಾಬು, ಸಜ್ಜನರಾಜ ಮೆಹ್ತಾ, ಪತ್ರಿಕಾ ವಿತರಕರಾದ ಅಬ್ದುಲ್ ಸಾಬ್ ಮುಲ್ಲಾ, ಓದುಗರಾದ ಗಂಗಪ್ಪ ಮಾನಪ್ಪ ಬಡಿಗೇರ, ಪ್ರಕಾಶ ಲೊಖಂಡೆ ಅವರನ್ನು ಸತ್ಕರಿಸಲಾಯಿತು.

ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಬಂಗ್ಲೆ ಮಲ್ಲಿಕಾರ್ಜುನ್ ರಿಂದ ಉಪಹಾರ ಅರ್ಪಣೆ: ಇಳಕಲ್ ನಗರದ ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿಯ ಇಳಕಲ್ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಯಿತು.

ಈ ವೇಳೆ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕು ಅಧ್ಯಕ್ಷ ಶರಣಪ್ಪ ಹೊದ್ನೂರ್, ಹಿರಿಯ ಪತ್ರಕರ್ತರಾದ ವಿಜಯ ಪಲ್ಲೆದ್(VP), ಗುಂಡಣ್ಣ ಲಾಟಿ, ಶರಣಗೌಡ ಕಂದಕೂರು, ದೊಡ್ಡನಗೌಡ ಗುಡಿಹಿಂದಿನ, ಸುರಕ್ಷಾ ಸೇವಾ ಸಂಸ್ಥೆಯ ಮುಖ್ಯಸ್ಥ ಪುರುಷೋತ್ತಮ ದರಕ ಇದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ