ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್


ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ನಗರದ ವಿಜಯ ಮಹಾಂತೇಶ್ವರ ದಾಸೋಹ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಿದ್ದ ಪತ್ರಕರ್ತರ ದಿನಾಚರಣೆ ಹಾಗೂ ಸತ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಈಗಾಗಲೇ ಸರ್ಕಾರವು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಪಡೆಯಲು ಒಗ್ಗಟ್ಟಾಗಿ ಶ್ರಮಿಸೋಣ ಎಂದು ಸಂಘದ ಸದಸ್ಯರಿಗೆ ಕಿವಿ ಮಾತು ಹೇಳಿದರು.

ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಪೂಜ್ಯ ಗುರುಮಹಾಂತಶ್ರೀಗಳು ಶ್ಲಾಘಿಸಿ ಮಾತನಾಡಿ, ಪತ್ರಿಕೆಗಳು ಜನರ ಅಭಿಪ್ರಾಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತವೆ ಎಂದರು.

ನಿತ್ಯ ಪತ್ರಿಕೆ ಓದುವುದರಿಂದ ಗತಕಾಲದ ಘಟನೆಗಳು ನೆನಪಿನ ಬಿಟ್ಟಿಯಲ್ಲಿ ಉಳಿದತ್ತವೆ. ಅವಶ್ಯಕತೆ ಇದ್ದಾಗ ನೆನಪಿಗೆ ಬರುತ್ತದೆ. ಈ ಮೂಲಕ ನಮ್ಮ ಜ್ಞಾನ ವೃದ್ಧಿಯಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣದಿಂದ ಪತ್ರಿಕೆಗಳಿಗೆ ತೊಡಕಲ್ಲ. ಜಾಲತಾಣದಲ್ಲಿ ತಕ್ಷಣ ಮಾಹಿತಿ ದೊರೆದರೆ, ಪತ್ರಿಕೆಗಳಿಂದ ಸಮಗ್ರ ಮಾಹಿತಿ ಸಿಗುತ್ತದೆ. ಇಂತಹ ಉತ್ತಮ ಕೆಲಸ ಮಾಡುವ ಪತ್ರಕರ್ತರ ಬದುಕು ಸುಧಾರಣೆ ಕಾಣಬೇಕು. ಇದಕ್ಕೆ ಸರ್ಕಾರ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಭಿಪ್ರಾಯ ಪಟ್ಟಿದರು.

ಸಂವಿಧಾನದ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ತನ್ನ ಕಾರ್ಯವನ್ನು ಮಾಡಬೇಕು. ಪತ್ರಕರ್ತರು ಆಗಾಗ ಛಾಟಿ ಬೀಸಿದಾಗ ಮಾತ್ರ ಕಾರ್ಯಾಂಗ‌ ಚುರುಕಿನಿಂದ ಕೆಲಸ ಮಾಡುತ್ತದೆ ಎಂದು ಉಪತಹಶೀಲ್ದಾರ್ ಈಶ್ವರ್ ಗಡ್ಡಿ ಹೇಳಿದರು.

ಹಿರಿಯ ವರದಿಗಾರರಾದ ಬಿ.ಬಾಬು, ಸಜ್ಜನರಾಜ ಮೆಹ್ತಾ, ಪತ್ರಿಕಾ ವಿತರಕರಾದ ಅಬ್ದುಲ್ ಸಾಬ್ ಮುಲ್ಲಾ, ಓದುಗರಾದ ಗಂಗಪ್ಪ ಮಾನಪ್ಪ ಬಡಿಗೇರ, ಪ್ರಕಾಶ ಲೊಖಂಡೆ ಅವರನ್ನು ಸತ್ಕರಿಸಲಾಯಿತು.

ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಬಂಗ್ಲೆ ಮಲ್ಲಿಕಾರ್ಜುನ್ ರಿಂದ ಉಪಹಾರ ಅರ್ಪಣೆ: ಇಳಕಲ್ ನಗರದ ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿಯ ಇಳಕಲ್ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಯಿತು.

ಈ ವೇಳೆ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕು ಅಧ್ಯಕ್ಷ ಶರಣಪ್ಪ ಹೊದ್ನೂರ್, ಹಿರಿಯ ಪತ್ರಕರ್ತರಾದ ವಿಜಯ ಪಲ್ಲೆದ್(VP), ಗುಂಡಣ್ಣ ಲಾಟಿ, ಶರಣಗೌಡ ಕಂದಕೂರು, ದೊಡ್ಡನಗೌಡ ಗುಡಿಹಿಂದಿನ, ಸುರಕ್ಷಾ ಸೇವಾ ಸಂಸ್ಥೆಯ ಮುಖ್ಯಸ್ಥ ಪುರುಷೋತ್ತಮ ದರಕ ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು