Ju. On the 30th, the first chariot arrived at Kuntoji from Koppal

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ (ನಂದಿ) ಬಸವೇಶ್ವರ ಹಾಗೂ ಸಂಗಮೇಶ್ವರ ದೇವಸ್ಥಾನದ ಜಾತ್ರೆ ಶ್ರಾವಣ ಮಾಸದ ಕೊನೆಯ ಸೋಮವಾರದಿಂದ ಐದು ದಿನಗಳವರೆಗೆ ಜರುಗಲಿದ್ದು ದೇವಸ್ಥಾನದ ಪ್ರಥಮ ರಥೋತ್ಸವ ಈ ಬಾರಿ ಜಾತ್ರೆಯಲ್ಲಿ ಜರುಗಲಿದೆ ಎಂದು ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು.

ತಾಲ್ಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಥಮ ರಥವನ್ನು ಕೊಪ್ಪಳದಿಂದ ತರುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕುಂಟೋಜಿ ಗ್ರಾಮದ ಮತ್ತು ಸುತ್ತಮುತ್ತಲಿನ ಊರುಗಳು, ನಗರ ಮತ್ತು ಬೇರೆ ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬಸವಣ್ಣನ ಭಕ್ತರು ದೇಣಿಗೆ ನೀಡಿ ಕೊಪ್ಪಳದ ಜಕಣಾಚರ‍್ಯ ಮತ್ತು ಅಮೋಘವರ್ಷ ನೃಪತುಂಗ ಪ್ರಶಸ್ತಿ ವಿಜೇತ ರಥಶಿಲ್ಪಿ ಮಲ್ಲಪ್ಪ ಬಡಿಗೇರ ಇವರು ತಮ್ಮ ಎಂ. ಜಿ. ರಥಶಿಲ್ಪಿ ಕಲಾ ಕೇಂದ್ರದಲ್ಲಿ ಸಂಪೂರ್ಣ ಉಚಿತವಾಗಿ ನಿರ್ಮಿಸಿರುವ ಸಾಗವಾನಿ ಮರದ ರಥವನ್ನು ಜು.30 ರಂದು ಮುದ್ದೇಬಿಹಾಳ ನಗರದ ಪಿಲೇಕೆಮ್ಮ ದೇವಿ ದೇವಸ್ಥಾನದಿಂದ ಕುಂಟೋಜಿ ಗ್ರಾಮದವರೆಗೆ ಭವ್ಯ ಮೆರವಣಿಗೆಯ ಮುಖಾಂತರ ಸ್ವಾಗತಿಸಲಾಗುವುದು ಎಂದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಜು.27 ರಂದು ರಥವನ್ನು ತರಲು ಕುಂಟೋಜಿಯಿಂದ ಭಕ್ತರು ಮತ್ತು ದೇವಸ್ಥಾನ ಕಮೀಟಿಯವರು ಟ್ರ್ಯಾಕ್ಟರ್ ಮುಖಾಂತರ ಕೊಪ್ಪಳಕ್ಕೆ ತೆರಳಿಲಿದ್ದಾರೆ. ಜುಲೈ 29 ರಂದು ಬೆಳಿಗ್ಗೆ ಕೊಪ್ಪಳದಿಂದ ರಥವನ್ನು ತೆಗೆದುಕೊಂಡು ಹೊರಟು ಅಂದೇ ಸಂಜೆ ಮುದ್ದೇಬಿಹಾಳ ನಗರಕ್ಕೆ ಆಗಮಿಸಿ, 30ರಂದು ಪಿಲೇಕೆಮ್ಮ ದೇವಾಸ್ಥಾನದಿಂದ ರಥವನ್ನು ಮತ್ತು ಅದರ ಜೊತೆಗೆ 21 ಕಿಲೋ ತೂಕದ ಬಸವಣ್ಣ ಮತ್ತು ಸಂಗಮೇಶ್ವರನ ಬೆಳ್ಳಿಯ ಮುಖವಾಡಗಳನ್ನು, ನಾಗರ ಹೆಡೆಯನ್ನು, ತೇರು ಎಳೆಯುವ ಹಗ್ಗ, ತೇರಿಗೆ ರುದ್ರಾಕ್ಷಿ ಮಾಲೆ, ಕಳಸ, ಇವುಗಳನ್ನು ಮೆರವಣಿಗೆ ಮೂಲಕ ಕುಂಟೋಜಿಗೆ ತರಲಾಗುವುದು ಎಂದರು.

ದೇವಸ್ಥಾನ ಕಮೀಟಿಯ ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೀಕಾರ, ಸೇರಿದಂತೆ ಕಮೀಟಿ ಸದಸ್ಯರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ